ಮೈಸೂರು : ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿ ಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ, ವಿವಿ ಪ್ಯಾಟ್ಗಳನ್ನ ಸೀಲ್ ಮಾಡಿ ಸ್ಟ್ರಾಂಗ್ ರೂಂಗಳಿಗೆ ರವಾನೆ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಾನೋತ್ ಅವರು ಸ್ಟ್ರಾಂಗ್ ರೂಮ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು ಮತಯಂತ್ರಗಳಿಗೆ ಮೂರು ಹಂತದ ಭದ್ರತೆನೀಡಲಾಗುತ್ತಿದ್ದು
ಇವಿಎಂ, ವಿವಿ ಪ್ಯಾಟ್ ಇರುವ ರೂಂ ಗಳಿಗೆ ಮೊದಲ ಹಂತದಲ್ಲಿ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ ತುಕಡಿ, 2ನೇ ಹಂತದಲ್ಲಿ ಕರ್ನಾಟಕ ಸಶಸ್ತ್ರ ಮೀಸಲು ಪಡೆ ಹಾಗೂ 3ನೇ ಹಂತದಲ್ಲಿ ಸ್ಥಳೀಯ ಸಿವಿಲ್ ಪೊಲೀಸ್ ಸಿಬ್ಬಂದಿ ಯನ್ನು ಬಂದೋಬಸ್ತ್ ಗಾಗಿ ನಿಯೋಜಿಸಲಾಗಿದೆ.
ಕಟ್ಟಡದ ಎಲ್ಲಾ ಸ್ಟ್ರಾಂಗ್ ರೂಂಗಳು, ಮತ ಎಣಿಕಾ ಕೇಂದ್ರಗಳಿಗೆ ಹೆಚ್ಚು ಸಿಸಿ ಕ್ಯಾಮರಾಗಳನ್ನು ಅಳವಡಿಸಿ, ಕಟ್ಟೆಚ್ಚರ ವಹಿಸಲಾಗಿದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಎಂ.ಮುತ್ತು ರಾಜ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಮಹೇಶ್ ಹಾಗೂ ಇತರೆ ಚುನಾವಣಾ ಅಧಿಕಾರಿಗಳು ಉಪಸ್ಥಿತರಿದ್ದರು
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…