ಮೈಸೂರು

ಸಿಸಿಟಿವಿ ಕಣ್ಗಾವಲಿನಲ್ಲಿ ಇವಿಎಂ ಮತಯಂತ್ರಗಳು !

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮತದಾನ ಮುಗಿದಿದ್ದು, ವಿದ್ಯುನ್ಮಾನ ಮತಯಂತ್ರಗಳು ಸ್ಟ್ರಾಂಗ್ ರೂಂನಲ್ಲಿ ಭದ್ರವಾಗಿ ಸೇರಿವೆ. ಎಣಿಕಾ ಕೇಂದ್ರಕ್ಕೆ ಕಣ್ಗಾವಲು ಇರಿಸಲಾಗಿದೆ.

ನಗರದ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ತೆರೆದಿರುವ ಎಣಿಕಾ ಕೇಂದ್ರದಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸೇರಿದ ಕೃಷ್ಣರಾಜ, ಚಾಮರಾಜ, ನರಸಿಂಹರಾಜ, ಚಾಮುಂಡೇಶ್ವರಿ, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಮಡಿಕೇರಿ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ಸ್ಟ್ರಾಂಗ್ ರೂಂನಲ್ಲಿ ಇರಿಸಿ ಅಭ್ಯರ್ಥಿಗಳು ಮತ್ತು ಅವರ ಪರ ಏಜೆಂಟರ ಸಮ್ಮುಖದಲ್ಲಿ ಸೀಲ್ ಮಾಡಲಾಯಿತು.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಮೈಸೂರು ಜಿಲ್ಲೆಯ ೨೨೦೨ ಮತಗಟ್ಟೆಗಳಲ್ಲಿ ಮತದಾನ ಮುಗಿದ ಬಳಿಕ ನಿಗದಿತ ಸ್ಥಳಗಳಲ್ಲಿ ಡಿಮಸ್ಟರಿಂಗ್‌ಕಾರ್ಯ ನಡೆಯಿತು. ನಂತರ, ಒಂದೊಂದು ವಿಧಾನಸಭಾವಾರು ಮತಯಂತ್ರಗಳನ್ನು ಇಡಲು ಸಜ್ಜುಗೊಳಿಸಿದ್ದ ಕೊಠಡಿಗಳಿಗೆ ಆಯಾಯ ಮತಗಟ್ಟೆ ಅಧಿಕಾರಿಗಳು ತೆರಳಿ ಮತಯಂತ್ರ ಇಟ್ಟು ಸಹಾಯಕ ಚುನಾವಣಾಧಿಕಾರಿಗಳಿಗೆ ಮತದಾನದ ಪ್ರಮಾಣದ ಮಾಹಿತಿಯನ್ನು ಒದಗಿಸಿದರು.

ಈ ಎಲ್ಲಾ ಪ್ರಕ್ರಿಯೆಗಳು ಮುಗಿದ ಬಳಿಕ ಎಂಟು ಕ್ಷೇತ್ರದ ಮತಯಂತ್ರಗಳನ್ನು ಇಟ್ಟಿರುವ ಕೊಠಡಿಗೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ಬಿ.ರಮೇಶ್, ಚುನಾವಣಾ ವೀಕ್ಷಕರು, ಸಹಾಯಕ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ಬೀಗ ಹಾಕಿ ಮುದ್ರೆ ಹಾಕಲಾಯಿತು.ಎಣಿಕಾ ಕೇಂದ್ರದ ದಿನದಂದು ಮುದ್ರೆ ತೆಗೆಯುವ ತನಕ ಯಾರಿಗೂ ಹತ್ತಿರ ತೆರಳಲು ಅವಕಾಶ ಇರುವುದಿಲ್ಲ. ಎಣಿಕಾ ಕೇಂದ್ರದಲ್ಲಿ ಮೂರು ಹಂತದಲ್ಲಿ ಭದ್ರತಾ ಕ್ರಮಗಳನ್ನು ಅನುಸರಿಸಲಾಗಿದ್ದು, ಮೊದಲನೇ ಹಂತದಲ್ಲಿ ಕೇಂದ್ರ ಪ್ಯಾರಾ ಮಿಲಿಟರಿ ಫೋರ್ಸ್, ಎರಡನೇ ಹಂತದಲ್ಲಿ ಕರ್ನಾಟಕ ರಾಜ್ಯ ಸಶಸ್ತ್ರ ಮೀಸಲು ಪಡೆ, ಕಟ್ಟಡದ ಸುತ್ತಮುತ್ತ ಸಿವಿಲ್ ಪೊಲೀಸ್ ಭದ್ರತೆ ಹಾಕಲಾಗಿದೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಶಿವಾನಂದಪುರಿ ಶ್ರೀಗಳಿಗೆ ಕನಕ ಭವನ ನಿರ್ವಹಣೆ ಹೊಣೆ

ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…

2 hours ago

ರಿಂಗ್ ರಸ್ತೆಯಲ್ಲಿ ಸಿಗ್ನಲ್ ಲೈಟ್‌ಗಳ ಅಳವಡಿಕೆ

೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…

2 hours ago

ಹುಲಿ ಸೆರೆಗೆ ಬಂತು ಥರ್ಮಲ್ ಡ್ರೋನ್‌

ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…

3 hours ago

ಕೃಷಿ ಮೇಳಕ್ಕೆ 10 ಲಕ್ಷ ಜನ ಭೇಟಿ

ಹೇಮಂತ್‌ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ  ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…

3 hours ago

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ಮಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

12 hours ago