ಮೈಸೂರು

ಸಿಸಿಟಿವಿ ಕಣ್ಗಾವಲಿನಲ್ಲಿ ಇವಿಎಂ ಮತಯಂತ್ರಗಳು !

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮತದಾನ ಮುಗಿದಿದ್ದು, ವಿದ್ಯುನ್ಮಾನ ಮತಯಂತ್ರಗಳು ಸ್ಟ್ರಾಂಗ್ ರೂಂನಲ್ಲಿ ಭದ್ರವಾಗಿ ಸೇರಿವೆ. ಎಣಿಕಾ ಕೇಂದ್ರಕ್ಕೆ ಕಣ್ಗಾವಲು ಇರಿಸಲಾಗಿದೆ.

ನಗರದ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ತೆರೆದಿರುವ ಎಣಿಕಾ ಕೇಂದ್ರದಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸೇರಿದ ಕೃಷ್ಣರಾಜ, ಚಾಮರಾಜ, ನರಸಿಂಹರಾಜ, ಚಾಮುಂಡೇಶ್ವರಿ, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಮಡಿಕೇರಿ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ಸ್ಟ್ರಾಂಗ್ ರೂಂನಲ್ಲಿ ಇರಿಸಿ ಅಭ್ಯರ್ಥಿಗಳು ಮತ್ತು ಅವರ ಪರ ಏಜೆಂಟರ ಸಮ್ಮುಖದಲ್ಲಿ ಸೀಲ್ ಮಾಡಲಾಯಿತು.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಮೈಸೂರು ಜಿಲ್ಲೆಯ ೨೨೦೨ ಮತಗಟ್ಟೆಗಳಲ್ಲಿ ಮತದಾನ ಮುಗಿದ ಬಳಿಕ ನಿಗದಿತ ಸ್ಥಳಗಳಲ್ಲಿ ಡಿಮಸ್ಟರಿಂಗ್‌ಕಾರ್ಯ ನಡೆಯಿತು. ನಂತರ, ಒಂದೊಂದು ವಿಧಾನಸಭಾವಾರು ಮತಯಂತ್ರಗಳನ್ನು ಇಡಲು ಸಜ್ಜುಗೊಳಿಸಿದ್ದ ಕೊಠಡಿಗಳಿಗೆ ಆಯಾಯ ಮತಗಟ್ಟೆ ಅಧಿಕಾರಿಗಳು ತೆರಳಿ ಮತಯಂತ್ರ ಇಟ್ಟು ಸಹಾಯಕ ಚುನಾವಣಾಧಿಕಾರಿಗಳಿಗೆ ಮತದಾನದ ಪ್ರಮಾಣದ ಮಾಹಿತಿಯನ್ನು ಒದಗಿಸಿದರು.

ಈ ಎಲ್ಲಾ ಪ್ರಕ್ರಿಯೆಗಳು ಮುಗಿದ ಬಳಿಕ ಎಂಟು ಕ್ಷೇತ್ರದ ಮತಯಂತ್ರಗಳನ್ನು ಇಟ್ಟಿರುವ ಕೊಠಡಿಗೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ಬಿ.ರಮೇಶ್, ಚುನಾವಣಾ ವೀಕ್ಷಕರು, ಸಹಾಯಕ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ಬೀಗ ಹಾಕಿ ಮುದ್ರೆ ಹಾಕಲಾಯಿತು.ಎಣಿಕಾ ಕೇಂದ್ರದ ದಿನದಂದು ಮುದ್ರೆ ತೆಗೆಯುವ ತನಕ ಯಾರಿಗೂ ಹತ್ತಿರ ತೆರಳಲು ಅವಕಾಶ ಇರುವುದಿಲ್ಲ. ಎಣಿಕಾ ಕೇಂದ್ರದಲ್ಲಿ ಮೂರು ಹಂತದಲ್ಲಿ ಭದ್ರತಾ ಕ್ರಮಗಳನ್ನು ಅನುಸರಿಸಲಾಗಿದ್ದು, ಮೊದಲನೇ ಹಂತದಲ್ಲಿ ಕೇಂದ್ರ ಪ್ಯಾರಾ ಮಿಲಿಟರಿ ಫೋರ್ಸ್, ಎರಡನೇ ಹಂತದಲ್ಲಿ ಕರ್ನಾಟಕ ರಾಜ್ಯ ಸಶಸ್ತ್ರ ಮೀಸಲು ಪಡೆ, ಕಟ್ಟಡದ ಸುತ್ತಮುತ್ತ ಸಿವಿಲ್ ಪೊಲೀಸ್ ಭದ್ರತೆ ಹಾಕಲಾಗಿದೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಸಚಿವ ಆರ್.‌ಬಿ.ತಿಮ್ಮಾಪುರ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಖಂಡಿಸಿ, ಅಬಕಾರಿ ಸಚಿವ ತಿಮ್ಮಾಪುರ ರಾಜೀನಾಮೆಗೆ ಒತ್ತಾಯಿಸಿ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್‌ ಸದಸ್ಯರು ಆರ್.‌ಅಶೋಕ್‌ ನೇತೃತ್ವದಲ್ಲಿ…

40 mins ago

ಮಾರ್ಚ್.‌18ರಿಂದ ಏಪ್ರಿಲ್.‌2ರವರೆಗೆ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ…

45 mins ago

ಹನೂರು| 6 ಹಸುಗಳು ಅನುಮಾನಸ್ಪದ ಸಾವು: ವಿಷಪ್ರಾಶನ ಶಂಕೆ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಆರು ಹಸುಗಳು ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ…

2 hours ago

ಸಿದ್ದಾಪುರ| ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಆನೆಗಳನ್ನು ಕಾಡಿಗಟ್ಟಿದ ಅರಣ್ಯ ಇಲಾಖೆ

ನವೀನ್‌ ಡಿಸೋಜ: ಕೊಡಗು ಜಿಲ್ಲಾ ವರದಿಗಾರರು  ಸಿದ್ದಾಪುರ: ತಿತಿಮತಿ ವಲಯದ ಚೆನ್ನಂಗಿ ಶಾಖೆಯ ವ್ಯಾಪ್ತಿಗೆ ಒಳಪಡುವ ಕೊಡಗು ಶ್ರೀರಂಗಪಟ್ಟಣ ಗ್ರಾಮದ…

3 hours ago

ಓದುಗರ ಪತ್ರ: ಗಾಂಜಾ ಮಾರಾಟ ತಡೆಗಟ್ಟಿ

ಗುಂಡ್ಲುಪೇಟೆ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಹಲವಾರು ಭಾಗಗಳಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ. ಕೆಲವು ಚಾಲಕರು ಗಾಂಜಾ ಸೇವಿಸಿ ವಾಹನ ಚಾಲನೆ…

3 hours ago

ಓದುಗರ ಪತ್ರ: ಕೇರಳದಲ್ಲಿ ಉಚಿತ ಶಿಕ್ಷಣ ಶ್ಲಾಘನೀಯ

ಇಂದು ಶಿಕ್ಷಣ ಎನ್ನುವುದು ವ್ಯಾಪಾರೀಕರಣವಾಗಿದ್ದು, ಪೋಷಕರು ದುಡಿಮೆಯ ಬಹುತೇಕ ಆದಾಯವನ್ನು ಮಕ್ಕಳ ಶಿಕ್ಷಣಕ್ಕೆ ಖರ್ಚು ಮಾಡುವುದು ಅನಿವಾರ್ಯವಾಗಿದೆ. ಕೇರಳ ಸರ್ಕಾರ…

4 hours ago