ಮೈಸೂರು

ಸಿಸಿಟಿವಿ ಕಣ್ಗಾವಲಿನಲ್ಲಿ ಇವಿಎಂ ಮತಯಂತ್ರಗಳು !

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮತದಾನ ಮುಗಿದಿದ್ದು, ವಿದ್ಯುನ್ಮಾನ ಮತಯಂತ್ರಗಳು ಸ್ಟ್ರಾಂಗ್ ರೂಂನಲ್ಲಿ ಭದ್ರವಾಗಿ ಸೇರಿವೆ. ಎಣಿಕಾ ಕೇಂದ್ರಕ್ಕೆ ಕಣ್ಗಾವಲು ಇರಿಸಲಾಗಿದೆ.

ನಗರದ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ತೆರೆದಿರುವ ಎಣಿಕಾ ಕೇಂದ್ರದಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸೇರಿದ ಕೃಷ್ಣರಾಜ, ಚಾಮರಾಜ, ನರಸಿಂಹರಾಜ, ಚಾಮುಂಡೇಶ್ವರಿ, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಮಡಿಕೇರಿ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ಸ್ಟ್ರಾಂಗ್ ರೂಂನಲ್ಲಿ ಇರಿಸಿ ಅಭ್ಯರ್ಥಿಗಳು ಮತ್ತು ಅವರ ಪರ ಏಜೆಂಟರ ಸಮ್ಮುಖದಲ್ಲಿ ಸೀಲ್ ಮಾಡಲಾಯಿತು.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಮೈಸೂರು ಜಿಲ್ಲೆಯ ೨೨೦೨ ಮತಗಟ್ಟೆಗಳಲ್ಲಿ ಮತದಾನ ಮುಗಿದ ಬಳಿಕ ನಿಗದಿತ ಸ್ಥಳಗಳಲ್ಲಿ ಡಿಮಸ್ಟರಿಂಗ್‌ಕಾರ್ಯ ನಡೆಯಿತು. ನಂತರ, ಒಂದೊಂದು ವಿಧಾನಸಭಾವಾರು ಮತಯಂತ್ರಗಳನ್ನು ಇಡಲು ಸಜ್ಜುಗೊಳಿಸಿದ್ದ ಕೊಠಡಿಗಳಿಗೆ ಆಯಾಯ ಮತಗಟ್ಟೆ ಅಧಿಕಾರಿಗಳು ತೆರಳಿ ಮತಯಂತ್ರ ಇಟ್ಟು ಸಹಾಯಕ ಚುನಾವಣಾಧಿಕಾರಿಗಳಿಗೆ ಮತದಾನದ ಪ್ರಮಾಣದ ಮಾಹಿತಿಯನ್ನು ಒದಗಿಸಿದರು.

ಈ ಎಲ್ಲಾ ಪ್ರಕ್ರಿಯೆಗಳು ಮುಗಿದ ಬಳಿಕ ಎಂಟು ಕ್ಷೇತ್ರದ ಮತಯಂತ್ರಗಳನ್ನು ಇಟ್ಟಿರುವ ಕೊಠಡಿಗೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ಬಿ.ರಮೇಶ್, ಚುನಾವಣಾ ವೀಕ್ಷಕರು, ಸಹಾಯಕ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ಬೀಗ ಹಾಕಿ ಮುದ್ರೆ ಹಾಕಲಾಯಿತು.ಎಣಿಕಾ ಕೇಂದ್ರದ ದಿನದಂದು ಮುದ್ರೆ ತೆಗೆಯುವ ತನಕ ಯಾರಿಗೂ ಹತ್ತಿರ ತೆರಳಲು ಅವಕಾಶ ಇರುವುದಿಲ್ಲ. ಎಣಿಕಾ ಕೇಂದ್ರದಲ್ಲಿ ಮೂರು ಹಂತದಲ್ಲಿ ಭದ್ರತಾ ಕ್ರಮಗಳನ್ನು ಅನುಸರಿಸಲಾಗಿದ್ದು, ಮೊದಲನೇ ಹಂತದಲ್ಲಿ ಕೇಂದ್ರ ಪ್ಯಾರಾ ಮಿಲಿಟರಿ ಫೋರ್ಸ್, ಎರಡನೇ ಹಂತದಲ್ಲಿ ಕರ್ನಾಟಕ ರಾಜ್ಯ ಸಶಸ್ತ್ರ ಮೀಸಲು ಪಡೆ, ಕಟ್ಟಡದ ಸುತ್ತಮುತ್ತ ಸಿವಿಲ್ ಪೊಲೀಸ್ ಭದ್ರತೆ ಹಾಕಲಾಗಿದೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

7 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

8 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

8 hours ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

9 hours ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

9 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

10 hours ago