ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮತದಾನ ಮುಗಿದಿದ್ದು, ವಿದ್ಯುನ್ಮಾನ ಮತಯಂತ್ರಗಳು ಸ್ಟ್ರಾಂಗ್ ರೂಂನಲ್ಲಿ ಭದ್ರವಾಗಿ ಸೇರಿವೆ. ಎಣಿಕಾ ಕೇಂದ್ರಕ್ಕೆ ಕಣ್ಗಾವಲು ಇರಿಸಲಾಗಿದೆ.
ನಗರದ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ತೆರೆದಿರುವ ಎಣಿಕಾ ಕೇಂದ್ರದಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸೇರಿದ ಕೃಷ್ಣರಾಜ, ಚಾಮರಾಜ, ನರಸಿಂಹರಾಜ, ಚಾಮುಂಡೇಶ್ವರಿ, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಮಡಿಕೇರಿ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ಸ್ಟ್ರಾಂಗ್ ರೂಂನಲ್ಲಿ ಇರಿಸಿ ಅಭ್ಯರ್ಥಿಗಳು ಮತ್ತು ಅವರ ಪರ ಏಜೆಂಟರ ಸಮ್ಮುಖದಲ್ಲಿ ಸೀಲ್ ಮಾಡಲಾಯಿತು.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಮೈಸೂರು ಜಿಲ್ಲೆಯ ೨೨೦೨ ಮತಗಟ್ಟೆಗಳಲ್ಲಿ ಮತದಾನ ಮುಗಿದ ಬಳಿಕ ನಿಗದಿತ ಸ್ಥಳಗಳಲ್ಲಿ ಡಿಮಸ್ಟರಿಂಗ್ಕಾರ್ಯ ನಡೆಯಿತು. ನಂತರ, ಒಂದೊಂದು ವಿಧಾನಸಭಾವಾರು ಮತಯಂತ್ರಗಳನ್ನು ಇಡಲು ಸಜ್ಜುಗೊಳಿಸಿದ್ದ ಕೊಠಡಿಗಳಿಗೆ ಆಯಾಯ ಮತಗಟ್ಟೆ ಅಧಿಕಾರಿಗಳು ತೆರಳಿ ಮತಯಂತ್ರ ಇಟ್ಟು ಸಹಾಯಕ ಚುನಾವಣಾಧಿಕಾರಿಗಳಿಗೆ ಮತದಾನದ ಪ್ರಮಾಣದ ಮಾಹಿತಿಯನ್ನು ಒದಗಿಸಿದರು.
ಈ ಎಲ್ಲಾ ಪ್ರಕ್ರಿಯೆಗಳು ಮುಗಿದ ಬಳಿಕ ಎಂಟು ಕ್ಷೇತ್ರದ ಮತಯಂತ್ರಗಳನ್ನು ಇಟ್ಟಿರುವ ಕೊಠಡಿಗೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ಬಿ.ರಮೇಶ್, ಚುನಾವಣಾ ವೀಕ್ಷಕರು, ಸಹಾಯಕ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ಬೀಗ ಹಾಕಿ ಮುದ್ರೆ ಹಾಕಲಾಯಿತು.
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…