ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮತದಾನ ಮುಗಿದಿದ್ದು, ವಿದ್ಯುನ್ಮಾನ ಮತಯಂತ್ರಗಳು ಸ್ಟ್ರಾಂಗ್ ರೂಂನಲ್ಲಿ ಭದ್ರವಾಗಿ ಸೇರಿವೆ. ಎಣಿಕಾ ಕೇಂದ್ರಕ್ಕೆ ಕಣ್ಗಾವಲು ಇರಿಸಲಾಗಿದೆ.
ನಗರದ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ತೆರೆದಿರುವ ಎಣಿಕಾ ಕೇಂದ್ರದಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸೇರಿದ ಕೃಷ್ಣರಾಜ, ಚಾಮರಾಜ, ನರಸಿಂಹರಾಜ, ಚಾಮುಂಡೇಶ್ವರಿ, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಮಡಿಕೇರಿ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ಸ್ಟ್ರಾಂಗ್ ರೂಂನಲ್ಲಿ ಇರಿಸಿ ಅಭ್ಯರ್ಥಿಗಳು ಮತ್ತು ಅವರ ಪರ ಏಜೆಂಟರ ಸಮ್ಮುಖದಲ್ಲಿ ಸೀಲ್ ಮಾಡಲಾಯಿತು.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಮೈಸೂರು ಜಿಲ್ಲೆಯ ೨೨೦೨ ಮತಗಟ್ಟೆಗಳಲ್ಲಿ ಮತದಾನ ಮುಗಿದ ಬಳಿಕ ನಿಗದಿತ ಸ್ಥಳಗಳಲ್ಲಿ ಡಿಮಸ್ಟರಿಂಗ್ಕಾರ್ಯ ನಡೆಯಿತು. ನಂತರ, ಒಂದೊಂದು ವಿಧಾನಸಭಾವಾರು ಮತಯಂತ್ರಗಳನ್ನು ಇಡಲು ಸಜ್ಜುಗೊಳಿಸಿದ್ದ ಕೊಠಡಿಗಳಿಗೆ ಆಯಾಯ ಮತಗಟ್ಟೆ ಅಧಿಕಾರಿಗಳು ತೆರಳಿ ಮತಯಂತ್ರ ಇಟ್ಟು ಸಹಾಯಕ ಚುನಾವಣಾಧಿಕಾರಿಗಳಿಗೆ ಮತದಾನದ ಪ್ರಮಾಣದ ಮಾಹಿತಿಯನ್ನು ಒದಗಿಸಿದರು.
ಈ ಎಲ್ಲಾ ಪ್ರಕ್ರಿಯೆಗಳು ಮುಗಿದ ಬಳಿಕ ಎಂಟು ಕ್ಷೇತ್ರದ ಮತಯಂತ್ರಗಳನ್ನು ಇಟ್ಟಿರುವ ಕೊಠಡಿಗೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ಬಿ.ರಮೇಶ್, ಚುನಾವಣಾ ವೀಕ್ಷಕರು, ಸಹಾಯಕ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ಬೀಗ ಹಾಕಿ ಮುದ್ರೆ ಹಾಕಲಾಯಿತು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…