ದೇಶದ ಪ್ರಧಾನಿ ಆಗುವ ಅರ್ಹತೆ ಮೋದಿ ಬಿಟ್ಟರೆ ಇನ್ಯಾರಿಗೂ ಇಲ್ಲ: ಜಿಟಿಡಿ

21 ನೇ ಶತಮಾನದ ಆಧುನಿಕ ಯುಗದಲ್ಲಿ ದೇಶದ ಏಕತೆ, ಅಖಂಡತೆ, ದೇಶದ ರಕ್ಷಣೆ ಮತ್ತು ಅಭಿವೃದ್ಧಿಗೆ ಮೋದಿ ಅವರಿಂದಲೇ ಸಾಧ್ಯ. ಇನ್ಯಾರೂ ಅವರಿಗೆ ಸಮಾನರಲ್ಲ, ಅವರನ್ನು ಮತ್ತೆ ಪ್ರಧಾನಿಯಾಗಿಸುವ ಒಂದೇ ಒಂದು ಗುರಿ ಬಿಟ್ಟರೆ ಬೇರೇನೂ ಇಲ್ಲ ಎಂದು ಮೈಸೂರಿನಲ್ಲಿ ಜೆಡಿಎಸ್‌ ಮುಖಂಡ ಜಿಟಿ ದೇವೇಗೌಡ ತಿಳಿಸಿದ್ದಾರೆ.

ನಮಗೆ ಎಷ್ಟು ಸ್ಥಾನ ಬೇಕು ಬೇಡ ಅನ್ನೋದು ಮುಖ್ಯ ಅಲ್ಲ ಈ ರಾಷ್ಟ್ರಕ್ಕೆ ಮೋದಿ ಅವರ ನೇತೃತ್ವ ಬೇಕು. ಅದಕ್ಕಾಗಿ ನಾವು ನಮಗೆ ಇಷ್ಟು ಸೀಟು ಬೇಕು ಬೇಡ ಅಂತ ಬೇಡಿಕೆ ಇಟ್ಟಿಲ್ಲ. ಈಗಾಗಲೇ 5 ಕ್ಷೇತ್ರಗಳನ್ನು ಬಿಟ್ಟುಕೊಡಲು ಒಪ್ಪಿಗೆ ಸೂಚಿಸಿದ್ದಾರೆ.

ನಮ್ಮ ಪಕ್ಷ ಎಲ್ಲೆಲ್ಲಿ ಶಕ್ತಿಯುತವಾಗಿದೆ ಅಲ್ಲಿ ನಾವು ಸ್ಪರ್ಧೆ ಮಾಡುತ್ತೇವೆ. ಗೆಲ್ಲುವ ಪ್ರಯತ್ನ ಮಾಡಿ ಮೋದಿ ಅವರನ್ನು ಪ್ರಧಾನಿ ಮಾಡುವುದು ನಮ್ಮ ಏಕೈಕ ಗುರಿ ಎಂದು ಮೈಸೂರಿನಲ್ಲಿ ಮಾಜಿ ಸಚಿವ ಜಿಟಿ ದೇವೇಗೌಡ ಹೇಳಿಕೆ ನೀಡಿದ್ದಾರೆ.

ಇನ್ನು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಜಾತ್ಯಾತೀತವಾಗಿ ಉಳಿದಿಲ್ಲ ಎಂಬ ಕಾಂಗ್ರೆಸ್ ನಾಯಕರ ಟೀಕೆಗಳಿಗೆ ಶಾಸಕ ಜಿ ಟಿ ದೇವೇಗೌಡ ಇದೇ ಸಂದರ್ಭದಲ್ಲಿ ತಿರುಗೇಟು ನೀಡಿದರು.

ಸಿದ್ದರಾಮಯ್ಯ ಜೊತೆ ಕುರುಬರು ಮಾತ್ರ ಇರೋದು, ದೇವೇಗೌಡರ ಜೊತೆ ಒಕ್ಕಲಿಗರು ಮಾತ್ರ ಇರೋದು, ಯಡಿಯೂರಪ್ಪ ಜೊತೆ ಲಿಂಗಾಯತರು ಮಾತ್ರ ಇರೋದು, ಮಲ್ಲಿಕಾರ್ಜುನಖರ್ಗೆ ಜೊತೆ ದಲಿತರು ಮಾತ್ರ ಇರೋದು ಅಂದ್ರೇ ಜಾತ್ಯಾತೀತಾನ. ಜಾತ್ಯಾತೀತ ಅಂದರೆ ಏನು? ಎಂದು ಜಾತ್ಯಾತೀತ ಪದದ ಕುರಿತು ಶಾಸಕ ಜಿ ಟಿ ದೇವೇಗೌಡ ಹರಿಹಾಯ್ದರು.

ಅಲ್ಲದೇ ರಾಜ್ಯ ಸರ್ಕಾರ ವಿಫಲತೆ ಕಂಡಿದೆ ಎಂದೂ ಸಹ ಕಿಡಿಕಾರಿದ ಜಿಡಿ ದೇವೇಗೌಡ ರಾಜ್ಯದಲ್ಲಿ ಬರ ಪರಿಹಾರವನ್ನು ರೈತರಿಗೆ ಕೊಡುವ ವಿಚಾರದಲ್ಲೂ ಸರ್ಕಾರ ವಿಫಲವಾಗಿದೆ. ಇತ್ತ ಇವರ ಗ್ಯಾರಂಟಿಗಳು ಜನರಿಗೆ ಸಮರ್ಪಕವಾಗಿ ತಲುಪುತ್ತಿಲ್ಲ, ಜನ‌ ಹಿಡಿ ಶಾಪ ಹಾಕುತ್ತಿದ್ದಾರೆ, ಇದನ್ನು ಸರ್ಕಾರ ಅಂತ ಕರೆಯಲು ಸಾಧ್ಯವಿಲ್ಲ ಎಂದು ಜಿಟಿಡಿ ಕುಟುಕಿದರು.

ಈಗಾಗಲೇ ಬರಗಾಲದಿಂದ 48 ಲಕ್ಷ ಹೆಕ್ಟೇರ್ ಬೆಳೆ ನಾಶವಾಗಿದೆ,38 ಸಾವಿರ ಕೋಟಿ ಬೆಳೆ ಪರಿಹಾರ ಕೊಡಬೇಕು ಅಂತ ಹೇಳುತ್ತಾರೆ. ರೈತರಿಗೆ ಮೊದಲ ಹಂತದಲ್ಲಿ 2 ಸಾವಿರ ಕೊಡುತ್ತೇವೆ ಎಂದು ಈಗ ತಂತ್ರಾಂಶದ ಸಮಸ್ಯೆಯಿಂದ ತಡವಾಗಿದೆ ಎಂದು ಸಬೂಬು ಹೇಳುತ್ತಾರೆ ಇದನ್ನು ಸರ್ಕಾರ ಅಂತ ಕರೆಯಲು ನಾಚಿಕೆಯಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಚಿವ, ಶಾಸಕ ಜಿಟಿಡಿ ವಾಗ್ದಾಳಿ ನಡೆಸಿದರು.

andolana

Recent Posts

ಓದುಗರ ಪತ್ರ: ಕೊರಿಯನ್ ಗೇಮ್ಸ್ ನಿಷೇಧಿಸಿ

ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…

2 hours ago

ಓದುಗರ ಪತ್ರ: ಖಾಲಿ ನಿವೇಶನದಲ್ಲಿರುವ ಕಸ ತೆರವುಗೊಳಿಸಿ

ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…

2 hours ago

ಓದುಗರ ಪತ್ರ: ಬೆಳವಾಡಿ ಕೆರೆ ಸ್ವಚ್ಛಗೊಳಿಸಿ

ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…

2 hours ago

‘ಮಾದಕ ವಸ್ತು ಮಾರಾಟ ಮಾಡಿದರೆ ಕ್ರಮ’

ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್‌ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…

2 hours ago

ಆಶ್ರಮ ಶಾಲೆಯಲ್ಲಿ ಅಡುಗೆ ಸಿಬ್ಬಂದಿಯವರ ಸರಸ ಸಲ್ಲಾಪ

ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…

2 hours ago

ಮಾನಂದವಾಡಿ ರಸ್ತೆಯಲ್ಲಿ ಅಪಘಾತಕ್ಕೆ ಬೀಳಬೇಕಿದೆ ಬ್ರೇಕ್…

ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್‌ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…

2 hours ago