ದೇಶದ ಪ್ರಧಾನಿ ಆಗುವ ಅರ್ಹತೆ ಮೋದಿ ಬಿಟ್ಟರೆ ಇನ್ಯಾರಿಗೂ ಇಲ್ಲ: ಜಿಟಿಡಿ

21 ನೇ ಶತಮಾನದ ಆಧುನಿಕ ಯುಗದಲ್ಲಿ ದೇಶದ ಏಕತೆ, ಅಖಂಡತೆ, ದೇಶದ ರಕ್ಷಣೆ ಮತ್ತು ಅಭಿವೃದ್ಧಿಗೆ ಮೋದಿ ಅವರಿಂದಲೇ ಸಾಧ್ಯ. ಇನ್ಯಾರೂ ಅವರಿಗೆ ಸಮಾನರಲ್ಲ, ಅವರನ್ನು ಮತ್ತೆ ಪ್ರಧಾನಿಯಾಗಿಸುವ ಒಂದೇ ಒಂದು ಗುರಿ ಬಿಟ್ಟರೆ ಬೇರೇನೂ ಇಲ್ಲ ಎಂದು ಮೈಸೂರಿನಲ್ಲಿ ಜೆಡಿಎಸ್‌ ಮುಖಂಡ ಜಿಟಿ ದೇವೇಗೌಡ ತಿಳಿಸಿದ್ದಾರೆ.

ನಮಗೆ ಎಷ್ಟು ಸ್ಥಾನ ಬೇಕು ಬೇಡ ಅನ್ನೋದು ಮುಖ್ಯ ಅಲ್ಲ ಈ ರಾಷ್ಟ್ರಕ್ಕೆ ಮೋದಿ ಅವರ ನೇತೃತ್ವ ಬೇಕು. ಅದಕ್ಕಾಗಿ ನಾವು ನಮಗೆ ಇಷ್ಟು ಸೀಟು ಬೇಕು ಬೇಡ ಅಂತ ಬೇಡಿಕೆ ಇಟ್ಟಿಲ್ಲ. ಈಗಾಗಲೇ 5 ಕ್ಷೇತ್ರಗಳನ್ನು ಬಿಟ್ಟುಕೊಡಲು ಒಪ್ಪಿಗೆ ಸೂಚಿಸಿದ್ದಾರೆ.

ನಮ್ಮ ಪಕ್ಷ ಎಲ್ಲೆಲ್ಲಿ ಶಕ್ತಿಯುತವಾಗಿದೆ ಅಲ್ಲಿ ನಾವು ಸ್ಪರ್ಧೆ ಮಾಡುತ್ತೇವೆ. ಗೆಲ್ಲುವ ಪ್ರಯತ್ನ ಮಾಡಿ ಮೋದಿ ಅವರನ್ನು ಪ್ರಧಾನಿ ಮಾಡುವುದು ನಮ್ಮ ಏಕೈಕ ಗುರಿ ಎಂದು ಮೈಸೂರಿನಲ್ಲಿ ಮಾಜಿ ಸಚಿವ ಜಿಟಿ ದೇವೇಗೌಡ ಹೇಳಿಕೆ ನೀಡಿದ್ದಾರೆ.

ಇನ್ನು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಜಾತ್ಯಾತೀತವಾಗಿ ಉಳಿದಿಲ್ಲ ಎಂಬ ಕಾಂಗ್ರೆಸ್ ನಾಯಕರ ಟೀಕೆಗಳಿಗೆ ಶಾಸಕ ಜಿ ಟಿ ದೇವೇಗೌಡ ಇದೇ ಸಂದರ್ಭದಲ್ಲಿ ತಿರುಗೇಟು ನೀಡಿದರು.

ಸಿದ್ದರಾಮಯ್ಯ ಜೊತೆ ಕುರುಬರು ಮಾತ್ರ ಇರೋದು, ದೇವೇಗೌಡರ ಜೊತೆ ಒಕ್ಕಲಿಗರು ಮಾತ್ರ ಇರೋದು, ಯಡಿಯೂರಪ್ಪ ಜೊತೆ ಲಿಂಗಾಯತರು ಮಾತ್ರ ಇರೋದು, ಮಲ್ಲಿಕಾರ್ಜುನಖರ್ಗೆ ಜೊತೆ ದಲಿತರು ಮಾತ್ರ ಇರೋದು ಅಂದ್ರೇ ಜಾತ್ಯಾತೀತಾನ. ಜಾತ್ಯಾತೀತ ಅಂದರೆ ಏನು? ಎಂದು ಜಾತ್ಯಾತೀತ ಪದದ ಕುರಿತು ಶಾಸಕ ಜಿ ಟಿ ದೇವೇಗೌಡ ಹರಿಹಾಯ್ದರು.

ಅಲ್ಲದೇ ರಾಜ್ಯ ಸರ್ಕಾರ ವಿಫಲತೆ ಕಂಡಿದೆ ಎಂದೂ ಸಹ ಕಿಡಿಕಾರಿದ ಜಿಡಿ ದೇವೇಗೌಡ ರಾಜ್ಯದಲ್ಲಿ ಬರ ಪರಿಹಾರವನ್ನು ರೈತರಿಗೆ ಕೊಡುವ ವಿಚಾರದಲ್ಲೂ ಸರ್ಕಾರ ವಿಫಲವಾಗಿದೆ. ಇತ್ತ ಇವರ ಗ್ಯಾರಂಟಿಗಳು ಜನರಿಗೆ ಸಮರ್ಪಕವಾಗಿ ತಲುಪುತ್ತಿಲ್ಲ, ಜನ‌ ಹಿಡಿ ಶಾಪ ಹಾಕುತ್ತಿದ್ದಾರೆ, ಇದನ್ನು ಸರ್ಕಾರ ಅಂತ ಕರೆಯಲು ಸಾಧ್ಯವಿಲ್ಲ ಎಂದು ಜಿಟಿಡಿ ಕುಟುಕಿದರು.

ಈಗಾಗಲೇ ಬರಗಾಲದಿಂದ 48 ಲಕ್ಷ ಹೆಕ್ಟೇರ್ ಬೆಳೆ ನಾಶವಾಗಿದೆ,38 ಸಾವಿರ ಕೋಟಿ ಬೆಳೆ ಪರಿಹಾರ ಕೊಡಬೇಕು ಅಂತ ಹೇಳುತ್ತಾರೆ. ರೈತರಿಗೆ ಮೊದಲ ಹಂತದಲ್ಲಿ 2 ಸಾವಿರ ಕೊಡುತ್ತೇವೆ ಎಂದು ಈಗ ತಂತ್ರಾಂಶದ ಸಮಸ್ಯೆಯಿಂದ ತಡವಾಗಿದೆ ಎಂದು ಸಬೂಬು ಹೇಳುತ್ತಾರೆ ಇದನ್ನು ಸರ್ಕಾರ ಅಂತ ಕರೆಯಲು ನಾಚಿಕೆಯಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಚಿವ, ಶಾಸಕ ಜಿಟಿಡಿ ವಾಗ್ದಾಳಿ ನಡೆಸಿದರು.

andolana

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

4 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

5 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

16 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

16 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

16 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

16 hours ago