ಮೈಸೂರು

ರಪ್ತು ವಿದೇಶಿ ವಿನಿಮಯದ ಜೊತೆಗೆ ದೇಶದ ಆದಾಯವನ್ನು ಹೆಚ್ಚಿಸುತ್ತದೆ – ಟಿ ದಿನೇಶ್

ಮೈಸೂರು: ರಪ್ತು ಮಾಡುವುದರಿಂದ ವಿದೇಶಿ ವಿನಿಮಯದ ಜೊತೆಗೆ ದೇಶದ ಆದಾಯವನ್ನು ಹೆಚ್ಚಿಸುತ್ತದೆ. ಅಲ್ಲದೆ ಕೈಗಾರಿಕೆಗಳಿಗೆ ಉತ್ತೇಜನ ನೀಡುತ್ತದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಟಿ. ದಿನೇಶ್ ಅವರು ತಿಳಿಸಿದರು.

ಇಂದು(ಜೂ.24) ನಗರದ ಹೋಟೆಲ್ ಪ್ರೆಸಿಡೆಂಟ್‌ನಲ್ಲಿ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ಹಮ್ಮಿಕೊಂಡಿದ್ದ ರಪ್ತು ನಿರ್ವಹಣಾ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರತಿಯೊಬ್ಬ ಉದ್ದಿಮೆದಾರರಿಗೆ ನಾನು ಪ್ರತಿದಿನ ಹೊಸತನ್ನು ಕಲಿಯಬೇಕು ಎನ್ನುವ ಹಂಬಲ ಇರಬೇಕು. ದೇಶದಲ್ಲಿ 778 ಮಿಲಿಯನ್ ಡಾಲರ್ ಮೊತ್ತದ ವಸ್ತುಗಳನ್ನು ರಪ್ತು ಮಾಡಿದ್ದು, 860 ಮಿಲಿಯನ್ ಡಾಲರ್ ಮೊತ್ತದ ಸರಕನ್ನು ಆಮದನ್ನು ಮಾಡಿಕೊಂಡಿದ್ದೇವೆ. ಕರ್ನಾಟಕವು ರಪ್ತು ಮಾಡುವುದರಲ್ಲಿ 4 ನೆ ಸ್ಥಾನದಲ್ಲಿ ಇದೆ. ನಮ್ಮ ರಾಜ್ಯವು ರಫ್ತಿನಲ್ಲಿ ಮೊದಲ ಸ್ಥಾನಕ್ಕೆ ಬರಬೇಕು ಎಂದರು.

ಭಾರತ ಸರ್ಕಾರ ಪ್ರತಿ ಜಿಲ್ಲೆಯಲ್ಲಿ ರಫ್ತು ಉತ್ತೇಜನ ಕೇಂದ್ರವನ್ನು ಸ್ಥಾಪಿಸಿದೆ. ಮೈಸೂರು ಜಿಲ್ಲೆಯಲ್ಲಿಯೂ ಕೈಗಾರಿಕೆಗಳ ಸ್ಥಾಪನೆಗೆ ವಿಪುಲ ಅವಕಾಶಗಳಿವೆ. ಪ್ರತಿ ವರ್ಷ ಶೇಕಡಾ 5% ರಫ್ತನ್ನು ಹೆಚ್ಚಳ ಮಾಡಬೇಕು ಎಂದರು.

ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರದ ಜಂಟಿ ನಿರ್ದೇಶಕರಾದ ಸಿ ಎಸ್ ಬಾಬು ನಾಗೇಶ್ ಮಾತನಾಡಿ, ತಾವೆಲ್ಲರೂ ಯುವ ಉದ್ಯಮಿಗಳು ಇದ್ದೀರಾ. 6 ದಿನಗಳ ಕಾಲ ಹಮ್ಮಿಕೊಂಡಿರುವ ಹಮ್ಮಿಕೊಂಡಿರುವ ರಪ್ತು ನಿರ್ವಹಣಾ ತರಬೇತಿಯನ್ನು ಸದುಪಯೋಗ ಪಡಿಸಿಕೊಳ್ಳಿ. ರಪ್ತು ಕೈಗಾರಿಕೆಗಳ ಆರ್ಥಿಕ ಆದಾಯವನ್ನು ಹೆಚ್ಚಿಸುತ್ತದೆ. ಇದರಿಂದ ಹೆಚ್ಚಿನ ಉತ್ಪಾದನೆ ಮಾಡಿ ಕೈಗಾರಿಕೆಯು ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದು ಮಾಹಿತಿ ನೀಡಿದರು.

ಮೈಸೂರು ಕೈಗಾರಿಕಾ ಸಂಘದ ಕಾರ್ಯದರ್ಶಿ ಗಳಾದ ಸುರೇಶ್ ಕುಮಾರ್ ಜೈನ್ ಮಾತನಾಡಿ, ಮೈಸೂರಿನಲ್ಲಿ ರಪ್ತು ಕೇಂದ್ರ ಸ್ಥಾಪನೆ ಆಗುತ್ತಿದೆ. ಕಟ್ಟಡ ಈಗಾಗಲೇ ಪ್ರಾರಂಭವಾಗಿದೆ. ರಫ್ತಿನಲ್ಲಿ ಪ್ಯಾಕಿಂಗ್ ಉತ್ತಮ. ನಮ್ಮ ವಸ್ತುಗಳು ತಲುಪಬೇಕಾದ ಸ್ಥಳವನ್ನು ಕೆಡದಂತೆ ಸಕಾಲದಲ್ಲಿ ತಲುಪಬೇಕು. ರಪ್ತು ದೇಶದ ಆದಾಯವನ್ನು ಹೆಚ್ಚಿಸುತ್ತದೆ. ರಫ್ತಿನಲ್ಲಿ ಸಣ್ಣ ಕೈಗಾರಿಕೆಗಳ ಪಾಲು ಶೇಕಡಾ 45 ರಷ್ಟು ಇದೆ. ನೋಟು ಮುದ್ರಣವನ್ನು ಸಹ ಮೈಸೂರಿನಲ್ಲಿ ಮಾಡುತ್ತೇವೆ. ಮೈಸೂರು ಕೈಗಾರಿಕೆಗಳ ಸ್ಥಾಪನೆಗೆ ಉತ್ತಮ ಅವಕಾಶಗಳನ್ನು ಕಲ್ಪಿಸಿ ಕೊಟ್ಟಿದೆ. ಸೆಮಿ ಕಂಡಕ್ಟರ್‌ಗಳ ಉತ್ಪಾದನಾ ಕೇಂದ್ರ ಸ್ಥಾಪನೆ ಆಗುತ್ತಿದೆ ಎಂದು ಮಾಹಿತಿ ನೀಡಿದರು.

ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಕೆ ಬಿ. ಲಿಂಗರಾಜು ಮಾತನಾಡಿ, ಯಾವುದೇ ಪದಾರ್ಥವನ್ನು ನಾವು ರಪ್ತು ಮಾಡಲು ರಾಸಾಯನಿಕ ಮುಕ್ತವಾಗಿ ಇರಬೇಕು. ನಾವು ರಪ್ತು ಮಾಡುವ ಉತ್ಪಾದನೆ ಗುಣಮಟ್ಟದಿಂದ ಕೂಡಿರಬೇಕು. ಮೈಸೂರಿನಲ್ಲಿ ಈಗಾಗಲೇ ಸುಮಾರು 165 ಜನ ರಪ್ತು ಮಾಡುತ್ತಾ ಇದ್ದಾರೆ. ಇನ್ನು ಹೆಚ್ಚಿನ ಜನರು ದೇಶ ವಿದೇಶಕ್ಕೆ ರಪ್ತು ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ರಪ್ತು ಮಾಹಿತಿ ಕೇಂದ್ರದ ಉಪ ನಿರ್ದೇಶಕರಾದ ಮೇಘಲಾ ಸೇರಿದಂತೆ ಕೈಗಾರಿಕೋದ್ಯಮಿಗಳು ಉಪಸ್ತಿತರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

2 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

5 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

5 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

5 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

6 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

7 hours ago