ಮೈಸೂರು

ಎನಿವೇರ್ ನೋಂದಣಿ ವ್ಯವಸ್ಥೆ ಜಿಲ್ಲಾ ಉಪನೋಂದಣಿ ಕಚೇರಿಗಳಿಗೆ ವಿಸ್ತರಣೆ

ಮೈಸೂರು: ಎನಿವೇರ್ ನೋಂದಣಿ ವ್ಯವಸ್ಥೆಯು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಈ ಕಾರಣದಿಂದಾಗಿ ಎನಿವೇರ್ ನೋಂದಣಿಯನ್ನು ಮೈಸೂರು ಜಿಲ್ಲೆಯ ಉಪ ನೋಂದಣಿ ಕಚೇರಿಗಳಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ.

ಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪ ನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ ಮಾಡಲು ಅವಕಾಶವಿದ್ದು, ಆದರೆ ಎನಿವೇರ್ ನೋಂದಣಿಯಲ್ಲಿ ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪ ನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.

ಎನಿವೇರ್ ನೋಂದಣಿ ವ್ಯವಸ್ಥೆಯು ಸಾರ್ವಜನಿಕರಿಗೆ ಹಲವಾರು ರೀತಿಯಲ್ಲಿ ಉಪಯುಕ್ತವಾಗಿದ್ದು, ದಸ್ತಾವೇಜಿನ ನೋಂದಣಿಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ. ನೋಂದಣಿಯಲ್ಲಿ ವಿಳಂಬವನ್ನು ತಡೆಗಟ್ಟುತ್ತದೆ. ಸಾರ್ವಜನಿಕರು ಸಮೀಪದಲ್ಲಿರುವ ಉಪ ನೋಂದಣಿ ಕಚೇರಿಯಲ್ಲಿ ದಸ್ತಾವೇಜನ್ನು ನೋಂದಾಯಿಸಬಹುದು. ಸ್ಲಾಟ್ ಲಭ್ಯವಿರುವಂತಹ ಕಚೇರಿಯನ್ನು ನೋಂದಣಿಗೆ ಆಯ್ಕೆ ಮಾಡಿಕೊಳ್ಳಬಹುದು, ನೋಂದಣಿ ಪ್ರಕ್ರಿಯೆ ಸುಲಭವಾಗುವುದಲ್ಲದೆ ಸಮಯವು ಸಹ ಉಳಿಯುತ್ತದೆ. ಉಪ ನೋಂದಣಿ ಕಚೇರಿಗಳಲ್ಲಿ ಜನದಟ್ಟಣೆ ಕಡಿಮೆಯಾಗುತ್ತದೆ. ಕಚೇರಿ ಸಿಬ್ಬಂದಿಗಳ ಮೇಲೆ ಕೆಲಸದ ಒತ್ತಡ ಕಡಿಮೆಯಾಗುತ್ತದೆ ಹಾಗೂ ಕಚೇರಿಗಳಲ್ಲಿ ನೋಂದಣಿ ಕೆಲಸ ಸಮಾನವಾಗಿ ಹಂಚಿಕೆಯಾಗುತ್ತದೆ.

ಆದುದರಿಂದ ಸಾರ್ವಜನಿಕರು ಎನಿವೇರ್ ನೋಂದಣಿಯ ಸದುಪಯೋಗಪಡಿಸಿಕೊಂಡು ತಮಗೆ ಹತ್ತಿರದ ಅಥವಾ ನೋಂದಣಿಗೆ ಸ್ಲಾಟ್ ಲಭ್ಯವಿರುವಂತಹ ಕಚೇರಿ ಆಯ್ಕೆ ಮಾಡಿಕೊಂಡು ದಸ್ತಾವೇಜನ್ನು ನೋಂದಾಯಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮಿಕಾಂತರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

8 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

9 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

10 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

12 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

14 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

14 hours ago