ಮೈಸೂರು

ಮೈಸೂರು – ಧಾರವಾಡ ಎಕ್ಸ್‌ಪ್ರೆಸ್‌ ಬೆಳಗಾವಿಗೆ ವಿಸ್ತರಣೆ : ಆದೇಶ ಹೊರಡಿಸಿದ ರೈಲ್ವೆ ಸಚಿವಾಲಯ

ಮೈಸೂರು : ಮೈಸೂರು-ಬೆಳಗಾವಿ ಭಾಗದ ಜನಪ್ರತಿನಿಧಿಗಳು, ಸಾರ್ವಜನಿಕರ ಮನವಿಗೆ ಫಲ ಸಿಕ್ಕಿದೆ. ಮೈಸೂರು ಮತ್ತು ಧಾರವಾಡ ನಿಲ್ದಾಗಳ ನಡುವೆ ಸಂಚರಿಸುತ್ತಿದ್ದ ದೈನಂದಿನ ಎಕ್ಸ್‌ಪ್ರೆಸ್ (17301/02) ರೈಲುಗಳನ್ನು ಬೆಳಗಾವಿ ನಿಲ್ದಾಣದವರೆಗೆ ವಿಸ್ತರಿಸಿ ರೈಲ್ವೆ ಸಚಿವಾಲಯವು ಆದೇಶ ಹೊರಡಿಸಿದೆ.

ಸೆಪ್ಟೆಂಬರ್ 26 ರಿಂದ ಮೈಸೂರಿನಿಂದ ಬೆಳಗಾವಿವರೆಗೆ ರೈಲು ಸಂಚಾರ ಆರಂಭವಾಗಲಿದೆ. ಇದರಿಂದ ಮೈಸೂರು ಮತ್ತು ಬೆಳಗಾವಿ ನಡುವಿನ ಸಂಚಾರ ಮತ್ತಷ್ಟು ಸುಲಭವಾಗಲಿದೆ. ರಾಜ್ಯಸಭಾ ಸಂಸದ ಈರಣ್ಣ ಕರಡಿ ಅವರು ಈ ವಿಚಾರವನ್ನು ಮೊದಲೇ ತಿಳಿಸಿದ್ದರು, ಸೆಪ್ಟೆಂಬರ್ 19ರಂದು ಈ ಬಗ್ಗೆ ಅಧಿಕೃತ ಆದೇಶ ಬಂದಿದ್ದು, ರೈಲು ಸೇವೆಗೆ ಮುಹೂರ್ತ ನಿಗದಿಯಾಗಿದೆ.

ಇತ್ತೀಚೆಗೆ ಪ್ರಯಾಣಿಕರ ಬೇಡಿಕೆ, ವಿವಿಧ ಕಾರಣಗಳಿಗಾಗಿ ರೈಲು ಸಂಖ್ಯೆ 17302 ಧಾರವಾಡ-ಮೈಸೂರು ನಡುವಿನ ರೈಲಿನ ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಿ ನೈಋತ್ಯ ರೈಲ್ವೆ ಆದೇಶ ಹೊರಡಿಸಿತ್ತು. ಸೆಪ್ಟೆಂಬರ್ 26ರಿಂದಲೇ ಈ ಹೊಸ ವೇಳಾಪಟ್ಟಿ ಜಾರಿಗೆ ಬರಲಿದೆ.

ಈಗ ವೇಳಾಪಟ್ಟಿ ಬದಲಾವಣೆ ಜೊತೆಗೆ ಬೆಳಗಾವಿವರೆಗೆ ಸೇವೆಯನ್ನು ವಿಸ್ತರಣೆ ಮಾಡಲಾಗಿದೆ. ಅಳ್ನಾವರ, ಲೋಂಡಾ, ಖಾನಾಪುರ, ಬೆಳಗಾವಿ ನಿಲ್ದಾಣಗಳಲ್ಲಿ ಈ ರೈಲು ನಿಲುಗಡೆ ನೀಡಲಿದೆ.

17301 ಸಂಖ್ಯೆಯ ರೈಲು ರಾತ್ರಿ 10.30ಕ್ಕೆ ಮೈಸೂರು ರೈಲು ನಿಲ್ದಾಣದಿಂದ ಹೊರಡಲಿದೆ. ಕೃಷ್ಣರಾಜನಗರ, ಹೊಳೆನರಸೀಪುರ, ಹಾಸನ, ಅರಸೀಕೆರೆ, ಕಡೂರು, ಬೀರೂರು, ಚಿಕ್ಕಜಾಜೂರು, ದಾವಣಗೆರೆ, ಹರಿಹರ, ರಾಣಿಬೆನ್ನೂರು, ಬ್ಯಾಡಗಿ, ಹಾವೇರಿ, ಯಲವಿಗಿ, ಹುಬ್ಬಳ್ಳಿ, ಧಾರವಾಡ ತಲುಪಲಿದೆ. ಸದ್ಯ ಬೆಳಗ್ಗೆ 8 ಗಂಟೆಗೆ ಧಾರವಾಡ ರೈಲ್ವೆ ನಿಲ್ದಾಣಕ್ಕೆ ಆಗಮಿಸುತ್ತಿದ್ದು, ಸೆಪ್ಟೆಂಬರ್ 26ರಿಂದ ಬೆಳಗ್ಗೆ 7.38ಕ್ಕೆ ಧಾರವಾಡ ರೈಲು ನಿಲ್ದಾಣಕ್ಕೆ ಬರಲಿದೆ. 7.40ಕ್ಕೆ ಧಾರವಾಡದಿಂದ ಬೆಳಗಾವಿಗೆ ಹೊರಡಲಿದೆ. ಬೆಳಗ್ಗೆ 10.45 ಗಂಟೆಗೆ ಬೆಳಗಾವಿ ರೈಲು ನಿಲ್ದಾಣ ತಲುಪಲಿದೆ.

17302 ಸಂಖ್ಯೆಯ ರೈಲು ರಾತ್ರಿ 8 ಗಂಟೆಗೆ ಬೆಳಗಾವಿ ರೈಲು ನಿಲ್ದಾಣದಿಂದ ಹೊರಡಲಿದ್ದು ಮರುದಿನ ಬೆಳಗ್ಗೆ 7.10 ಗಂಟೆಗೆ ಮೈಸೂರು ನಿಲ್ದಾಣವನ್ನು ತಲುಪಲಿದೆ ಎಂದು ನೈಋತ್ಯ ರೈಲ್ವೆ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಮೈಸೂರು-ಬೆಳಗಾವಿ ರೈಲು ಓಡಾಟದಿಂದ ಎರಡೂ ಜಿಲ್ಲೆಗಳ ಪ್ರಯಾಣಿಕರಿಗೆ ಭಾರಿ ಅನುಕೂಲವಾಗಲಿದೆ. ಅಲ್ಲದೆ ಎರಡೂ ಜಿಲ್ಲೆಗಳ ಪ್ರವಾಸೋದ್ಯಮಕ್ಕೆ ಕೂಡ ಭಾರಿ ಉತ್ತೇಜನ ಸಿಕ್ಕಂತಾಗುತ್ತದೆ.

lokesh

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

19 mins ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

23 mins ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

27 mins ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

30 mins ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

35 mins ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

39 mins ago