ಮೈಸೂರು

ಫೇಸ್‌ಬುಕ್‌ನಲ್ಲಿ ಪರಿಚಯ ; ನಗರದ ಇಬ್ಬರಿಗೆ 22 ಲಕ್ಷ ರೂ.ವಂಚನೆ

ಮೈಸೂರು: ಫೇಸ್‌ಬುಕ್ ಮೂಲಕ ಪರಿಚಯವಾದ ವಂಚಕರು ನಗರದ ಇಬ್ಬರಿಗೆ 22 ಲಕ್ಷ ರೂ. ವಂಚಿಸಿರುವ ಬಗ್ಗೆ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ವಿದೇಶದಲ್ಲಿ ನೆಲೆಸಿರುವುದಾಗಿ ಪರಿಚಯ ಮಾಡಿಕೊಂಡಿರುವ ಖದೀಮರು, ಒಬ್ಬರಿಂದ ಸುಮಾರು 10.86 ಲಕ್ಷ ರೂ. ಹಾಗೂ ಮತ್ತೊಬ್ಬರಿಂದ 10.70 ಲಕ್ಷ ರೂ. ಪಡೆದು ವಂಚಿಸಿದ್ದಾರೆ.

ಮೊದಲ ಪ್ರಕರಣದಲ್ಲಿ ಬೋಗಾದಿಯ 60 ವರ್ಷದ ವ್ಯಕ್ತಿಯೊಬ್ಬರಿಗೆ ಮೇ 23 ರಂದು ಫೇಸ್‌ಬುಕ್ ಮೂಲಕ ಅಪರಿಚಿತನೊಬ್ಬ ಪರಿಚಯವಾಗಿದ್ದಾನೆ. ಆತ ತನ್ನ ಹೆಸರು ಫಿಲೋ ವಿಕ್ಟರ್, ತಾನು ಯುನೈಟೆಡ್ ಕಿಂಗ್ಡಮ್(ಯುಕೆ)ನಲ್ಲಿ ನೆಲೆಸಿರುವುದಾಗಿ ಹೇಳಿಕೊಂಡಿದ್ದಾನೆ.

ಬಳಿಕ ಮೊಬೈಲ್ ಸಂಖ್ಯೆ ಪಡೆದು ವಾಟ್ಸಾಪ್‌ನಲ್ಲಿ ಸಂದೇಶ ಕಳುಹಿಸಿ, ನಂಬಿಕೆ ಗಿಟ್ಟಿಸಿದ್ದಾನೆ. ಮೇ 28 ರಂದು ಕರೆ ಮಾಡಿದ ಆತ. ನಾನು ಹೊಸದಿಲ್ಲಿಗೆ ಬಂದಿದ್ದು, ಇಮಿಗ್ರೇಷನ್ ಫಾರ್ಮಾಲಿಟೀಸ್ ಪೂಣ ಪೂರ್ಣಗೊಳಿಸಲು ತುರ್ತು ಹಣ ಬೇಕು. ನಂತರ ವಾಪಸ್ ಮಾಡುವುದಾಗಿ ಕೇಳಿದ್ದಾನೆ.

ಆತನ ಮಾತು ನಂಬಿ, ಎರಡು ಖಾತೆಗೆ 10,85,900 ರೂ. ವರ್ಗಾಯಿಸಿದ್ದಾರೆ. ಕೆಲ ದಿನಗಳ ನಂತರ ತಾವು ಮೋಸ ಹೋಗಿರುವುದು ತಿಳಿದು ಪೊಲೀಸರಿಗೆ ದೂರು ನೀಡಿದ್ದಾರೆ.

ಎರಡನೇ ಪ್ರಕರಣದಲ್ಲಿ ನಾಯ್ಡು ನಗರದ 42 ವರ್ಷದ ವ್ಯಕ್ತಿಗೆ ಏ.10 ರಂದು ಫೇಸ್‌ಬುಕ್ ಮೂಲಕ ಪರಿಚಯವಾದ ಅಪರಿಚಿತ, ಕೆಲ ದಿನಗಳ ನಂತರ ವಾಟ್ಸಾಪ್ ಸಂದೇಶ ಕಳುಹಿಸಲು ಪ್ರಾರಂಭಿಸಿದ್ದ.
ಹೀಗೆ ಆತ್ಮೀಯತೆ ಬೆಳೆಸಿಕೊಂಡು ಹಣದ ಸಹಾಯ ಮಾಡುವುದಾಗಿ ನಂಬಿಸಿದ್ದ. ಕೆಲ ದಿನಗಳ ಬಳಿಕ ನಾನು 15 ಸಾವಿರ ಹಣವನ್ನು ಗಿಫ್ಟ್ ಆಗಿ ಕಳುಹಿಸಿದ್ದೇನೆ. ಆದರೆ ಆ ಹಣವನ್ನು ಪಡೆಯಬೇಕಾದರೆ ಕೆಲವು ಟ್ಯಾಕ್ಸ್ ಕಟ್ಟಬೇಕು ಎಂದು ಹೇಳಿ ಹಂತ ಹಂತವಾಗಿ ಒಟ್ಟು 11.70.250 ರೂ. ವರ್ಗಾವಣೆ ಮಾಡಿಸಿಕೊಂಡು, ನಂತರ ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…

16 mins ago

2028ಕ್ಕೆ ಸಿಎಂ ವಿಚಾರ: ಎಚ್‌ಡಿಕೆ ಹಗಲು ಕನಸು ಕಾಣುತ್ತಿದ್ದಾರೆ ಎಂದ ಜಮೀರ್‌ ಅಹಮ್ಮದ್‌ ಖಾನ್‌

ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು…

20 mins ago

ಲಕ್ಕುಂಡಿ| ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ ಸರ್ಕಾರದಿಂದ ಬಿಗ್‌ ಗಿಫ್ಟ್‌

ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ…

23 mins ago

ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಸಾವು ಪ್ರಕರಣ: ತನಿಖೆಗೆ ಸೂಚಿಸಿದ ಲಕ್ಷ್ಮೀ ಹೆಬ್ಬಾಳ್ಕರ್‌

ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು…

25 mins ago

ವಾರಕ್ಕೆ 5 ದಿನ ಮಾತ್ರ ಕೆಲಸಕ್ಕೆ ಆಗ್ರಹಿಸಿ ಇಂದು ಬ್ಯಾಂಕ್‌ ನೌಕರರ ಮುಷ್ಕರ

ಬೆಂಗಳೂರು: ಬ್ಯಾಂಕಿಂಗ್‌ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ…

27 mins ago

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

12 hours ago