ಮೈಸೂರು

ಫೇಸ್‌ಬುಕ್‌ನಲ್ಲಿ ಪರಿಚಯ ; ನಗರದ ಇಬ್ಬರಿಗೆ 22 ಲಕ್ಷ ರೂ.ವಂಚನೆ

ಮೈಸೂರು: ಫೇಸ್‌ಬುಕ್ ಮೂಲಕ ಪರಿಚಯವಾದ ವಂಚಕರು ನಗರದ ಇಬ್ಬರಿಗೆ 22 ಲಕ್ಷ ರೂ. ವಂಚಿಸಿರುವ ಬಗ್ಗೆ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ವಿದೇಶದಲ್ಲಿ ನೆಲೆಸಿರುವುದಾಗಿ ಪರಿಚಯ ಮಾಡಿಕೊಂಡಿರುವ ಖದೀಮರು, ಒಬ್ಬರಿಂದ ಸುಮಾರು 10.86 ಲಕ್ಷ ರೂ. ಹಾಗೂ ಮತ್ತೊಬ್ಬರಿಂದ 10.70 ಲಕ್ಷ ರೂ. ಪಡೆದು ವಂಚಿಸಿದ್ದಾರೆ.

ಮೊದಲ ಪ್ರಕರಣದಲ್ಲಿ ಬೋಗಾದಿಯ 60 ವರ್ಷದ ವ್ಯಕ್ತಿಯೊಬ್ಬರಿಗೆ ಮೇ 23 ರಂದು ಫೇಸ್‌ಬುಕ್ ಮೂಲಕ ಅಪರಿಚಿತನೊಬ್ಬ ಪರಿಚಯವಾಗಿದ್ದಾನೆ. ಆತ ತನ್ನ ಹೆಸರು ಫಿಲೋ ವಿಕ್ಟರ್, ತಾನು ಯುನೈಟೆಡ್ ಕಿಂಗ್ಡಮ್(ಯುಕೆ)ನಲ್ಲಿ ನೆಲೆಸಿರುವುದಾಗಿ ಹೇಳಿಕೊಂಡಿದ್ದಾನೆ.

ಬಳಿಕ ಮೊಬೈಲ್ ಸಂಖ್ಯೆ ಪಡೆದು ವಾಟ್ಸಾಪ್‌ನಲ್ಲಿ ಸಂದೇಶ ಕಳುಹಿಸಿ, ನಂಬಿಕೆ ಗಿಟ್ಟಿಸಿದ್ದಾನೆ. ಮೇ 28 ರಂದು ಕರೆ ಮಾಡಿದ ಆತ. ನಾನು ಹೊಸದಿಲ್ಲಿಗೆ ಬಂದಿದ್ದು, ಇಮಿಗ್ರೇಷನ್ ಫಾರ್ಮಾಲಿಟೀಸ್ ಪೂಣ ಪೂರ್ಣಗೊಳಿಸಲು ತುರ್ತು ಹಣ ಬೇಕು. ನಂತರ ವಾಪಸ್ ಮಾಡುವುದಾಗಿ ಕೇಳಿದ್ದಾನೆ.

ಆತನ ಮಾತು ನಂಬಿ, ಎರಡು ಖಾತೆಗೆ 10,85,900 ರೂ. ವರ್ಗಾಯಿಸಿದ್ದಾರೆ. ಕೆಲ ದಿನಗಳ ನಂತರ ತಾವು ಮೋಸ ಹೋಗಿರುವುದು ತಿಳಿದು ಪೊಲೀಸರಿಗೆ ದೂರು ನೀಡಿದ್ದಾರೆ.

ಎರಡನೇ ಪ್ರಕರಣದಲ್ಲಿ ನಾಯ್ಡು ನಗರದ 42 ವರ್ಷದ ವ್ಯಕ್ತಿಗೆ ಏ.10 ರಂದು ಫೇಸ್‌ಬುಕ್ ಮೂಲಕ ಪರಿಚಯವಾದ ಅಪರಿಚಿತ, ಕೆಲ ದಿನಗಳ ನಂತರ ವಾಟ್ಸಾಪ್ ಸಂದೇಶ ಕಳುಹಿಸಲು ಪ್ರಾರಂಭಿಸಿದ್ದ.
ಹೀಗೆ ಆತ್ಮೀಯತೆ ಬೆಳೆಸಿಕೊಂಡು ಹಣದ ಸಹಾಯ ಮಾಡುವುದಾಗಿ ನಂಬಿಸಿದ್ದ. ಕೆಲ ದಿನಗಳ ಬಳಿಕ ನಾನು 15 ಸಾವಿರ ಹಣವನ್ನು ಗಿಫ್ಟ್ ಆಗಿ ಕಳುಹಿಸಿದ್ದೇನೆ. ಆದರೆ ಆ ಹಣವನ್ನು ಪಡೆಯಬೇಕಾದರೆ ಕೆಲವು ಟ್ಯಾಕ್ಸ್ ಕಟ್ಟಬೇಕು ಎಂದು ಹೇಳಿ ಹಂತ ಹಂತವಾಗಿ ಒಟ್ಟು 11.70.250 ರೂ. ವರ್ಗಾವಣೆ ಮಾಡಿಸಿಕೊಂಡು, ನಂತರ ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

18 mins ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

50 mins ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

59 mins ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

1 hour ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

2 hours ago

ಸರ್ಕಾರ ರಾಜ್ಯದ ಜನರ ಭರವಸೆ ನುಚ್ಚು ನೂರು ಮಾಡಿದೆ: ವಿಜಯೇಂದ್ರ ಆಕ್ರೋಶ

ಕಲಬುರ್ಗಿ: ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ಗೆ ಆಡಳಿತ ಪಕ್ಷದಲ್ಲೇ ವಿರೋಧ ವ್ಯಕ್ತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ಮಾಡಿದ್ದಾರೆ.…

2 hours ago