ಮೈಸೂರು

ಫೇಸ್‌ಬುಕ್‌ನಲ್ಲಿ ಪರಿಚಯ ; ನಗರದ ಇಬ್ಬರಿಗೆ 22 ಲಕ್ಷ ರೂ.ವಂಚನೆ

ಮೈಸೂರು: ಫೇಸ್‌ಬುಕ್ ಮೂಲಕ ಪರಿಚಯವಾದ ವಂಚಕರು ನಗರದ ಇಬ್ಬರಿಗೆ 22 ಲಕ್ಷ ರೂ. ವಂಚಿಸಿರುವ ಬಗ್ಗೆ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ವಿದೇಶದಲ್ಲಿ ನೆಲೆಸಿರುವುದಾಗಿ ಪರಿಚಯ ಮಾಡಿಕೊಂಡಿರುವ ಖದೀಮರು, ಒಬ್ಬರಿಂದ ಸುಮಾರು 10.86 ಲಕ್ಷ ರೂ. ಹಾಗೂ ಮತ್ತೊಬ್ಬರಿಂದ 10.70 ಲಕ್ಷ ರೂ. ಪಡೆದು ವಂಚಿಸಿದ್ದಾರೆ.

ಮೊದಲ ಪ್ರಕರಣದಲ್ಲಿ ಬೋಗಾದಿಯ 60 ವರ್ಷದ ವ್ಯಕ್ತಿಯೊಬ್ಬರಿಗೆ ಮೇ 23 ರಂದು ಫೇಸ್‌ಬುಕ್ ಮೂಲಕ ಅಪರಿಚಿತನೊಬ್ಬ ಪರಿಚಯವಾಗಿದ್ದಾನೆ. ಆತ ತನ್ನ ಹೆಸರು ಫಿಲೋ ವಿಕ್ಟರ್, ತಾನು ಯುನೈಟೆಡ್ ಕಿಂಗ್ಡಮ್(ಯುಕೆ)ನಲ್ಲಿ ನೆಲೆಸಿರುವುದಾಗಿ ಹೇಳಿಕೊಂಡಿದ್ದಾನೆ.

ಬಳಿಕ ಮೊಬೈಲ್ ಸಂಖ್ಯೆ ಪಡೆದು ವಾಟ್ಸಾಪ್‌ನಲ್ಲಿ ಸಂದೇಶ ಕಳುಹಿಸಿ, ನಂಬಿಕೆ ಗಿಟ್ಟಿಸಿದ್ದಾನೆ. ಮೇ 28 ರಂದು ಕರೆ ಮಾಡಿದ ಆತ. ನಾನು ಹೊಸದಿಲ್ಲಿಗೆ ಬಂದಿದ್ದು, ಇಮಿಗ್ರೇಷನ್ ಫಾರ್ಮಾಲಿಟೀಸ್ ಪೂಣ ಪೂರ್ಣಗೊಳಿಸಲು ತುರ್ತು ಹಣ ಬೇಕು. ನಂತರ ವಾಪಸ್ ಮಾಡುವುದಾಗಿ ಕೇಳಿದ್ದಾನೆ.

ಆತನ ಮಾತು ನಂಬಿ, ಎರಡು ಖಾತೆಗೆ 10,85,900 ರೂ. ವರ್ಗಾಯಿಸಿದ್ದಾರೆ. ಕೆಲ ದಿನಗಳ ನಂತರ ತಾವು ಮೋಸ ಹೋಗಿರುವುದು ತಿಳಿದು ಪೊಲೀಸರಿಗೆ ದೂರು ನೀಡಿದ್ದಾರೆ.

ಎರಡನೇ ಪ್ರಕರಣದಲ್ಲಿ ನಾಯ್ಡು ನಗರದ 42 ವರ್ಷದ ವ್ಯಕ್ತಿಗೆ ಏ.10 ರಂದು ಫೇಸ್‌ಬುಕ್ ಮೂಲಕ ಪರಿಚಯವಾದ ಅಪರಿಚಿತ, ಕೆಲ ದಿನಗಳ ನಂತರ ವಾಟ್ಸಾಪ್ ಸಂದೇಶ ಕಳುಹಿಸಲು ಪ್ರಾರಂಭಿಸಿದ್ದ.
ಹೀಗೆ ಆತ್ಮೀಯತೆ ಬೆಳೆಸಿಕೊಂಡು ಹಣದ ಸಹಾಯ ಮಾಡುವುದಾಗಿ ನಂಬಿಸಿದ್ದ. ಕೆಲ ದಿನಗಳ ಬಳಿಕ ನಾನು 15 ಸಾವಿರ ಹಣವನ್ನು ಗಿಫ್ಟ್ ಆಗಿ ಕಳುಹಿಸಿದ್ದೇನೆ. ಆದರೆ ಆ ಹಣವನ್ನು ಪಡೆಯಬೇಕಾದರೆ ಕೆಲವು ಟ್ಯಾಕ್ಸ್ ಕಟ್ಟಬೇಕು ಎಂದು ಹೇಳಿ ಹಂತ ಹಂತವಾಗಿ ಒಟ್ಟು 11.70.250 ರೂ. ವರ್ಗಾವಣೆ ಮಾಡಿಸಿಕೊಂಡು, ನಂತರ ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

2 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

2 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

3 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

6 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

6 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

6 hours ago