ಮೈಸೂರು: ಫೇಸ್ಬುಕ್ ಮೂಲಕ ಪರಿಚಯವಾದ ವಂಚಕರು ನಗರದ ಇಬ್ಬರಿಗೆ 22 ಲಕ್ಷ ರೂ. ವಂಚಿಸಿರುವ ಬಗ್ಗೆ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ವಿದೇಶದಲ್ಲಿ ನೆಲೆಸಿರುವುದಾಗಿ ಪರಿಚಯ ಮಾಡಿಕೊಂಡಿರುವ ಖದೀಮರು, ಒಬ್ಬರಿಂದ ಸುಮಾರು 10.86 ಲಕ್ಷ ರೂ. ಹಾಗೂ ಮತ್ತೊಬ್ಬರಿಂದ 10.70 ಲಕ್ಷ ರೂ. ಪಡೆದು ವಂಚಿಸಿದ್ದಾರೆ.
ಮೊದಲ ಪ್ರಕರಣದಲ್ಲಿ ಬೋಗಾದಿಯ 60 ವರ್ಷದ ವ್ಯಕ್ತಿಯೊಬ್ಬರಿಗೆ ಮೇ 23 ರಂದು ಫೇಸ್ಬುಕ್ ಮೂಲಕ ಅಪರಿಚಿತನೊಬ್ಬ ಪರಿಚಯವಾಗಿದ್ದಾನೆ. ಆತ ತನ್ನ ಹೆಸರು ಫಿಲೋ ವಿಕ್ಟರ್, ತಾನು ಯುನೈಟೆಡ್ ಕಿಂಗ್ಡಮ್(ಯುಕೆ)ನಲ್ಲಿ ನೆಲೆಸಿರುವುದಾಗಿ ಹೇಳಿಕೊಂಡಿದ್ದಾನೆ.
ಬಳಿಕ ಮೊಬೈಲ್ ಸಂಖ್ಯೆ ಪಡೆದು ವಾಟ್ಸಾಪ್ನಲ್ಲಿ ಸಂದೇಶ ಕಳುಹಿಸಿ, ನಂಬಿಕೆ ಗಿಟ್ಟಿಸಿದ್ದಾನೆ. ಮೇ 28 ರಂದು ಕರೆ ಮಾಡಿದ ಆತ. ನಾನು ಹೊಸದಿಲ್ಲಿಗೆ ಬಂದಿದ್ದು, ಇಮಿಗ್ರೇಷನ್ ಫಾರ್ಮಾಲಿಟೀಸ್ ಪೂಣ ಪೂರ್ಣಗೊಳಿಸಲು ತುರ್ತು ಹಣ ಬೇಕು. ನಂತರ ವಾಪಸ್ ಮಾಡುವುದಾಗಿ ಕೇಳಿದ್ದಾನೆ.
ಆತನ ಮಾತು ನಂಬಿ, ಎರಡು ಖಾತೆಗೆ 10,85,900 ರೂ. ವರ್ಗಾಯಿಸಿದ್ದಾರೆ. ಕೆಲ ದಿನಗಳ ನಂತರ ತಾವು ಮೋಸ ಹೋಗಿರುವುದು ತಿಳಿದು ಪೊಲೀಸರಿಗೆ ದೂರು ನೀಡಿದ್ದಾರೆ.
ಎರಡನೇ ಪ್ರಕರಣದಲ್ಲಿ ನಾಯ್ಡು ನಗರದ 42 ವರ್ಷದ ವ್ಯಕ್ತಿಗೆ ಏ.10 ರಂದು ಫೇಸ್ಬುಕ್ ಮೂಲಕ ಪರಿಚಯವಾದ ಅಪರಿಚಿತ, ಕೆಲ ದಿನಗಳ ನಂತರ ವಾಟ್ಸಾಪ್ ಸಂದೇಶ ಕಳುಹಿಸಲು ಪ್ರಾರಂಭಿಸಿದ್ದ.
ಹೀಗೆ ಆತ್ಮೀಯತೆ ಬೆಳೆಸಿಕೊಂಡು ಹಣದ ಸಹಾಯ ಮಾಡುವುದಾಗಿ ನಂಬಿಸಿದ್ದ. ಕೆಲ ದಿನಗಳ ಬಳಿಕ ನಾನು 15 ಸಾವಿರ ಹಣವನ್ನು ಗಿಫ್ಟ್ ಆಗಿ ಕಳುಹಿಸಿದ್ದೇನೆ. ಆದರೆ ಆ ಹಣವನ್ನು ಪಡೆಯಬೇಕಾದರೆ ಕೆಲವು ಟ್ಯಾಕ್ಸ್ ಕಟ್ಟಬೇಕು ಎಂದು ಹೇಳಿ ಹಂತ ಹಂತವಾಗಿ ಒಟ್ಟು 11.70.250 ರೂ. ವರ್ಗಾವಣೆ ಮಾಡಿಸಿಕೊಂಡು, ನಂತರ ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…