ಮೈಸೂರು: ಫೇಸ್ಬುಕ್ ಮೂಲಕ ಪರಿಚಯವಾದ ವಂಚಕರು ನಗರದ ಇಬ್ಬರಿಗೆ 22 ಲಕ್ಷ ರೂ. ವಂಚಿಸಿರುವ ಬಗ್ಗೆ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ವಿದೇಶದಲ್ಲಿ ನೆಲೆಸಿರುವುದಾಗಿ ಪರಿಚಯ ಮಾಡಿಕೊಂಡಿರುವ ಖದೀಮರು, ಒಬ್ಬರಿಂದ ಸುಮಾರು 10.86 ಲಕ್ಷ ರೂ. ಹಾಗೂ ಮತ್ತೊಬ್ಬರಿಂದ 10.70 ಲಕ್ಷ ರೂ. ಪಡೆದು ವಂಚಿಸಿದ್ದಾರೆ.
ಮೊದಲ ಪ್ರಕರಣದಲ್ಲಿ ಬೋಗಾದಿಯ 60 ವರ್ಷದ ವ್ಯಕ್ತಿಯೊಬ್ಬರಿಗೆ ಮೇ 23 ರಂದು ಫೇಸ್ಬುಕ್ ಮೂಲಕ ಅಪರಿಚಿತನೊಬ್ಬ ಪರಿಚಯವಾಗಿದ್ದಾನೆ. ಆತ ತನ್ನ ಹೆಸರು ಫಿಲೋ ವಿಕ್ಟರ್, ತಾನು ಯುನೈಟೆಡ್ ಕಿಂಗ್ಡಮ್(ಯುಕೆ)ನಲ್ಲಿ ನೆಲೆಸಿರುವುದಾಗಿ ಹೇಳಿಕೊಂಡಿದ್ದಾನೆ.
ಬಳಿಕ ಮೊಬೈಲ್ ಸಂಖ್ಯೆ ಪಡೆದು ವಾಟ್ಸಾಪ್ನಲ್ಲಿ ಸಂದೇಶ ಕಳುಹಿಸಿ, ನಂಬಿಕೆ ಗಿಟ್ಟಿಸಿದ್ದಾನೆ. ಮೇ 28 ರಂದು ಕರೆ ಮಾಡಿದ ಆತ. ನಾನು ಹೊಸದಿಲ್ಲಿಗೆ ಬಂದಿದ್ದು, ಇಮಿಗ್ರೇಷನ್ ಫಾರ್ಮಾಲಿಟೀಸ್ ಪೂಣ ಪೂರ್ಣಗೊಳಿಸಲು ತುರ್ತು ಹಣ ಬೇಕು. ನಂತರ ವಾಪಸ್ ಮಾಡುವುದಾಗಿ ಕೇಳಿದ್ದಾನೆ.
ಆತನ ಮಾತು ನಂಬಿ, ಎರಡು ಖಾತೆಗೆ 10,85,900 ರೂ. ವರ್ಗಾಯಿಸಿದ್ದಾರೆ. ಕೆಲ ದಿನಗಳ ನಂತರ ತಾವು ಮೋಸ ಹೋಗಿರುವುದು ತಿಳಿದು ಪೊಲೀಸರಿಗೆ ದೂರು ನೀಡಿದ್ದಾರೆ.
ಎರಡನೇ ಪ್ರಕರಣದಲ್ಲಿ ನಾಯ್ಡು ನಗರದ 42 ವರ್ಷದ ವ್ಯಕ್ತಿಗೆ ಏ.10 ರಂದು ಫೇಸ್ಬುಕ್ ಮೂಲಕ ಪರಿಚಯವಾದ ಅಪರಿಚಿತ, ಕೆಲ ದಿನಗಳ ನಂತರ ವಾಟ್ಸಾಪ್ ಸಂದೇಶ ಕಳುಹಿಸಲು ಪ್ರಾರಂಭಿಸಿದ್ದ.
ಹೀಗೆ ಆತ್ಮೀಯತೆ ಬೆಳೆಸಿಕೊಂಡು ಹಣದ ಸಹಾಯ ಮಾಡುವುದಾಗಿ ನಂಬಿಸಿದ್ದ. ಕೆಲ ದಿನಗಳ ಬಳಿಕ ನಾನು 15 ಸಾವಿರ ಹಣವನ್ನು ಗಿಫ್ಟ್ ಆಗಿ ಕಳುಹಿಸಿದ್ದೇನೆ. ಆದರೆ ಆ ಹಣವನ್ನು ಪಡೆಯಬೇಕಾದರೆ ಕೆಲವು ಟ್ಯಾಕ್ಸ್ ಕಟ್ಟಬೇಕು ಎಂದು ಹೇಳಿ ಹಂತ ಹಂತವಾಗಿ ಒಟ್ಟು 11.70.250 ರೂ. ವರ್ಗಾವಣೆ ಮಾಡಿಸಿಕೊಂಡು, ನಂತರ ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…
ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…
ಪಂಜು ಗಂಗೊಳ್ಳಿ ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…