ನಂಜನಗೂಡ : ಆಸ್ತಿ ವಿಚಾರಕ್ಕೆ, ತಾಲೂಕಿನ ಶಿರವಳ್ಳಿ (Shiravalli) ಗ್ರಾಮದ ಒಂದೇ ಕುಟುಂಬದವರ ನಡುವೆ ಗಲಾಟೆಯಾಗಿದೆ.
ಕುಟುಂಬದ ಆಸ್ತಿ ನೊಂದಣಿ ಮಾಡಿಕೊಳ್ಳಲು ನಂಜನಗೂಡು ಉಪನೊಂದಣಾಧಿಕಾರಿ ಕಛೇರಿಗೆ ಬಂದಿದ್ದ ವೇಳೆ ಮಿನಿ ವಿಧಾನಸೌಧ ಆವರಣದಲ್ಲಿ ಪರಸ್ಪರ ಹೊಡೆದಾಟಿಕೊಂಡಿದ್ದಾರೆ.
ಆಸ್ತಿ ನೊಂದಣಿ ಮಾಡಿಸಲು ಎರಡು ಕುಟುಂಬಗಳು ಉಪನೊಂದಣಾಧಿಕಾರಿ ಕಛೇರಿಗೆ ಬಂದಿವೆ. ಈ ವೇಳೆ ತಾಯಿಯು ಹೆಣ್ಣು ಮಗಳ ಆಸ್ತಿಗೆ ಮೊದಲು ಸಹಿ ಹಾಕಿದ್ದಾರೆ. ಹೆಣ್ಣು ಮಗಳಿಗೆ ಆಸ್ತಿ ನೀಡುವುದನ್ನು ಸಹಿಸದ ಗಂಡು ಮಕ್ಕಳಿಂದ ಗಲಾಟೆ ನಡೆದಿದೆ ಎನ್ನಲಾಗಿದೆ. ಈ ವೇಳೆ ಮಾತಿಗೆ ಮಾತು ಬೆಳೆ ಹೊಡೆದಾಟ ಸಹ ಆಗಿದೆ.
ಸದ್ಯ ಈ ಘಟನೆ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…
ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…
ಟೋಕಿಯೋ : ಜಪಾನ್ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ…