Farewell to retired soldier Siddalingaiah
ಮೈಸೂರು : ಭಾರತೀಯ ಸೇನೆಯಲ್ಲಿ ಸುಧೀರ್ಘ 37 ವರ್ಷಗಳ ಕಾಲ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತರಾದ ಮಂಡ್ಯ ಮೂಲದ ಸಿಆರ್ಪಿಎಫ್ನ ಎಸ್ಐ ಎನ್. ಸಿದ್ದಲಿಂಗಯ್ಯ ಅವರಿಗೆ ಚೆನ್ನೈನ ಪೂನಮಲ್ಲೆನಲ್ಲಿರುವ ಸಿಆರ್ಪಿಎಫ್ ಕಮಾಂಡೆಂಟ್ ಕಚೇರಿಯಲ್ಲಿ ಬೀಳ್ಕೊಡುಗೆ ನೀಡಿ ಗೌರವಿಸಲಾಯಿತು.
ಮೂಲತಃ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಕನಗನಮರಡಿ ಗ್ರಾಮದ ಚೆಲುವಮ್ಮ-ನಿಂಗಯ್ಯ ದಂಪತಿಯ 3ನೇ ಪುತ್ರ ರಾಗಿ ಜನಿಸಿದ ಇವರು, 1988ರಲ್ಲಿ ಸಿಆರ್ ಪಿಎಫ್ ಗೆ ಆಯ್ಕೆಯಾಗಿ ತರಬೇತಿ ಪಡೆದ ನಂತರ ಶ್ರೀಲಂಕಾ ದಲ್ಲಿರುವ ಭಾರತೀಯ ಶಾಂತಿ ಸೇನೆಯಲ್ಲಿ ವೃತ್ತಿ ಸೇವೆ ಆರಂಭಿಸಿದರು. ಮಣಿಪುರ, ಅಸ್ಸಾಂ, ಛತ್ತೀಸ್ ಘಡ್, ಪಂಜಾಬ್, ನಾಗಲ್ಯಾಂಡ್, ತ್ರಿಪುರ, ಅರುಣಾಚಲ ಪ್ರದೇಶ, ದೆಹಲಿ, ಪಶ್ಚಿಮ ಬಂಗಾಳ, ಹರಿಯಾಣ, ಜಮ್ಮು ಮತ್ತು ಕಾಶ್ಮೀರ, ಮಧ್ಯಪ್ರದೇಶ, ಕೇರಳ, ತಮಿಳುನಾಡಿನಲ್ಲಿ ಸಿಪಾಯಿ, ಹವಲ್ದಾರ್, ಎಎಸ್ಐ, ಎಸ್ಐ ಆಗಿ ಸೇವೆ ಸಲ್ಲಿಸಿದ್ದಾರೆ.
ಪ್ರಸ್ತುತ ಇವರು ಮೈಸೂರಿನ ವಿಜಯನಗರದಲ್ಲಿ ವಿಶ್ರಾಂತಿ ಜೀವನ ನಡೆಸುತ್ತಿದ್ದಾರೆ. ಬೀಳ್ಕೊಡುಗೆ ಸಮಾರಂಭದಲ್ಲಿ ಕಮಾಂಡೆಂಟ್ ರಾದ ಮುಖೇಶ್ ಕುಮಾರ್, ಸಹಾಯಕ ಕಮಾಂಡೆಂಟ್ ಅಲಿನ್ ಆಗಸ್ಟಿನ್, ಇನ್ ಸ್ಪೆಕ್ಟರ್ ಗಳು, ಎಸ್ಐಗಳು, ಸಿಬ್ಬಂದಿ ವರ್ಗದವರು ಹಾಜರಿದ್ದರು.
ಗೌರವ ಸ್ವೀಕರಿಸಿದ ಬಳಿಕ ಮಾತನಾಡಿದ ಸಿದ್ದಲಿಂಗಯ್ಯ, ದಿನನಿತ್ಯ ಗಡಿಯಲ್ಲಿ ಯುದ್ಧದ ವಾತಾವರಣ, ಬಂದೂಕು- ಗುಂಡುಗಳ ಮೊರೆತ, ಉಗ್ರರ ದಾಳಿ ಹೀಗೆ ಒಂದಿಲ್ಲೊಂದು ಘಟನೆಗಳ ಆತಂಕದಲ್ಲಿ ಇರುತ್ತಿದ್ದ ನಮಗೆ ನಮ್ಮ ಜೀವಕ್ಕಿಂತ ದೇಶ ರಕ್ಷಣೆಯೇ ಮುಖ್ಯವಾಗಿರುತ್ತದೆ. ಕುಟುಂಬ, ಸಂಬಂಧ ಇವುಗಳಿಂದ ದೂರ ಇದ್ದ ನನಗೆ ನೈತಿಕವಾಗಿ ಬೆಂಬಲ ನೀಡುತ್ತಿದ್ದ ಪತ್ನಿ ಶಿಕ್ಷಕಿಯೂ ಆದ ಶಾಂತಮ್ಮ ಅವರ ಸಂಪೂರ್ಣ ಸಹಕಾರ ಇತ್ತು. ಇದರಿಂದಲೇ 37 ವರ್ಷಗಳ ಕಾಲ ದೇಶ ಸೇವೆ ಸಲ್ಲಿಸಲು ಸಾಧ್ಯವಾಯಿತು. ನನ್ನನ್ನು ಖಾಕಿ ವಸ್ತ್ರದಲ್ಲಿ ನೋಡಬೇಕಿದಿದ್ದ ಅವಿದ್ಯಾವಂತರಾದ ನನ್ನ ತಂದೆ -ತಾಯಿ ಕನಸಾಗಿತ್ತು. ಅವರಿಗೆ ಈ ಸೇವೆಯನ್ನು ಅರ್ಪಿಸುತ್ತೇನೆ. ದೇಶ ಸೇವೆ ಸಲ್ಲಿಸಲು ಧೈರ್ಯ, ಸ್ಥೈರ್ಯ, ಪ್ರಾಮಾಣಿಕತೆ ಅತಿ ಮುಖ್ಯ ಎಂದರು.
ಮೈಸೂರು : ಭಾರತದ ಸಂವಿಧಾನವು ನಮ್ಮ ದೇಶದ ಆತ್ಮವಾಗಿದ್ದು, ಸಮಾನತೆ, ನ್ಯಾಯ, ಸ್ವಾತಂತ್ರ್ಯ ಮತ್ತು ಬಾಂಧವ್ಯದ ಮೂಲಭೂತ ತತ್ವಗಳನ್ನು ನೀಡಿದೆ.…
ಬೆಂಗಳೂರು : ರಾಜ್ಯದಲ್ಲಿ 76ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ…
ಶಿವಪುರ, ನಾಚನಹಳ್ಳಿಪಾಳ್ಯ, ರೈಲ್ವೆ ವರ್ಕ್ಶಾಪ್ ನಿಲುಗಡೆ ತಾಣದಲ್ಲಿ ನಿಲ್ಲದ ಬಸ್ಗಳು ಕೈ ಸಂಜ್ಞೆಗೂ ಕ್ಯಾರೇ ಎನ್ನದ ಡ್ರೈವರ್ಗಳು; ಮಹಿಳೆಯರು, ವಯೋವೃದ್ಧರು,…
ಕಷ್ಟ-ಸುಖಗಳಿಗೆ ಸ್ಪಂದಿಸುವ ಮನಃಸ್ಥಿತಿ ಕಳೆದುಕೊಂಡ ಜನತೆ ಕೈಯಲ್ಲಿ ಹಿಡಿದಿದ್ದ ದಿನ ಪತ್ರಿಕೆಯ ಮೇಲೆ ಕಣ್ಣು ನೆಟ್ಟಿದ್ದ ಚಿದಾನಂದ ಇದ್ದಕ್ಕಿದ್ದಂತೆ 'ಥೋ'…
ಕಳೆದ ಗುರುವಾರ ಆರಂಭವಾದ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಭಾಷಣವನ್ನು ಯಥಾವತ್ತು ಓದುವುದಕ್ಕೆ ರಾಜ್ಯಪಾಲರು ನಿರಾಕರಿಸಿದ್ದಲ್ಲದೆ, ತಾವೇ…
ಜಾಗೃತಿ ಕಾರ್ಯಕ್ರಮಗಳು ಮತ್ತಷ್ಟು ಪರಿಣಾಮಕಾರಿ ಆಗಲಿ ಡಾ.ಡಿ.ಜೆ.ಶಶಿಕುಮಾರ್ ದೇಶದ ಐಕ್ಯತೆ, ಭದ್ರತೆ ಮತ್ತು ಪ್ರಗತಿಗೆ ಕಾರಣವಾಗಿರುವ ಭಾರತದ ಸಂವಿಧಾನ ರಚನೆಯಾಗಿ…