Farewell to retired soldier Siddalingaiah
ಮೈಸೂರು : ಭಾರತೀಯ ಸೇನೆಯಲ್ಲಿ ಸುಧೀರ್ಘ 37 ವರ್ಷಗಳ ಕಾಲ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತರಾದ ಮಂಡ್ಯ ಮೂಲದ ಸಿಆರ್ಪಿಎಫ್ನ ಎಸ್ಐ ಎನ್. ಸಿದ್ದಲಿಂಗಯ್ಯ ಅವರಿಗೆ ಚೆನ್ನೈನ ಪೂನಮಲ್ಲೆನಲ್ಲಿರುವ ಸಿಆರ್ಪಿಎಫ್ ಕಮಾಂಡೆಂಟ್ ಕಚೇರಿಯಲ್ಲಿ ಬೀಳ್ಕೊಡುಗೆ ನೀಡಿ ಗೌರವಿಸಲಾಯಿತು.
ಮೂಲತಃ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಕನಗನಮರಡಿ ಗ್ರಾಮದ ಚೆಲುವಮ್ಮ-ನಿಂಗಯ್ಯ ದಂಪತಿಯ 3ನೇ ಪುತ್ರ ರಾಗಿ ಜನಿಸಿದ ಇವರು, 1988ರಲ್ಲಿ ಸಿಆರ್ ಪಿಎಫ್ ಗೆ ಆಯ್ಕೆಯಾಗಿ ತರಬೇತಿ ಪಡೆದ ನಂತರ ಶ್ರೀಲಂಕಾ ದಲ್ಲಿರುವ ಭಾರತೀಯ ಶಾಂತಿ ಸೇನೆಯಲ್ಲಿ ವೃತ್ತಿ ಸೇವೆ ಆರಂಭಿಸಿದರು. ಮಣಿಪುರ, ಅಸ್ಸಾಂ, ಛತ್ತೀಸ್ ಘಡ್, ಪಂಜಾಬ್, ನಾಗಲ್ಯಾಂಡ್, ತ್ರಿಪುರ, ಅರುಣಾಚಲ ಪ್ರದೇಶ, ದೆಹಲಿ, ಪಶ್ಚಿಮ ಬಂಗಾಳ, ಹರಿಯಾಣ, ಜಮ್ಮು ಮತ್ತು ಕಾಶ್ಮೀರ, ಮಧ್ಯಪ್ರದೇಶ, ಕೇರಳ, ತಮಿಳುನಾಡಿನಲ್ಲಿ ಸಿಪಾಯಿ, ಹವಲ್ದಾರ್, ಎಎಸ್ಐ, ಎಸ್ಐ ಆಗಿ ಸೇವೆ ಸಲ್ಲಿಸಿದ್ದಾರೆ.
ಪ್ರಸ್ತುತ ಇವರು ಮೈಸೂರಿನ ವಿಜಯನಗರದಲ್ಲಿ ವಿಶ್ರಾಂತಿ ಜೀವನ ನಡೆಸುತ್ತಿದ್ದಾರೆ. ಬೀಳ್ಕೊಡುಗೆ ಸಮಾರಂಭದಲ್ಲಿ ಕಮಾಂಡೆಂಟ್ ರಾದ ಮುಖೇಶ್ ಕುಮಾರ್, ಸಹಾಯಕ ಕಮಾಂಡೆಂಟ್ ಅಲಿನ್ ಆಗಸ್ಟಿನ್, ಇನ್ ಸ್ಪೆಕ್ಟರ್ ಗಳು, ಎಸ್ಐಗಳು, ಸಿಬ್ಬಂದಿ ವರ್ಗದವರು ಹಾಜರಿದ್ದರು.
ಗೌರವ ಸ್ವೀಕರಿಸಿದ ಬಳಿಕ ಮಾತನಾಡಿದ ಸಿದ್ದಲಿಂಗಯ್ಯ, ದಿನನಿತ್ಯ ಗಡಿಯಲ್ಲಿ ಯುದ್ಧದ ವಾತಾವರಣ, ಬಂದೂಕು- ಗುಂಡುಗಳ ಮೊರೆತ, ಉಗ್ರರ ದಾಳಿ ಹೀಗೆ ಒಂದಿಲ್ಲೊಂದು ಘಟನೆಗಳ ಆತಂಕದಲ್ಲಿ ಇರುತ್ತಿದ್ದ ನಮಗೆ ನಮ್ಮ ಜೀವಕ್ಕಿಂತ ದೇಶ ರಕ್ಷಣೆಯೇ ಮುಖ್ಯವಾಗಿರುತ್ತದೆ. ಕುಟುಂಬ, ಸಂಬಂಧ ಇವುಗಳಿಂದ ದೂರ ಇದ್ದ ನನಗೆ ನೈತಿಕವಾಗಿ ಬೆಂಬಲ ನೀಡುತ್ತಿದ್ದ ಪತ್ನಿ ಶಿಕ್ಷಕಿಯೂ ಆದ ಶಾಂತಮ್ಮ ಅವರ ಸಂಪೂರ್ಣ ಸಹಕಾರ ಇತ್ತು. ಇದರಿಂದಲೇ 37 ವರ್ಷಗಳ ಕಾಲ ದೇಶ ಸೇವೆ ಸಲ್ಲಿಸಲು ಸಾಧ್ಯವಾಯಿತು. ನನ್ನನ್ನು ಖಾಕಿ ವಸ್ತ್ರದಲ್ಲಿ ನೋಡಬೇಕಿದಿದ್ದ ಅವಿದ್ಯಾವಂತರಾದ ನನ್ನ ತಂದೆ -ತಾಯಿ ಕನಸಾಗಿತ್ತು. ಅವರಿಗೆ ಈ ಸೇವೆಯನ್ನು ಅರ್ಪಿಸುತ್ತೇನೆ. ದೇಶ ಸೇವೆ ಸಲ್ಲಿಸಲು ಧೈರ್ಯ, ಸ್ಥೈರ್ಯ, ಪ್ರಾಮಾಣಿಕತೆ ಅತಿ ಮುಖ್ಯ ಎಂದರು.
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಮತ್ತು ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ 2016ನೇ ಬ್ಯಾಚ್ನ…
ಬೆಂಗಳೂರು : ಸಾರ್ವಜನಿಕರಿಂದ ವ್ಯಕ್ತವಾದ ತೀವ್ರ ವಿರೋಧ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ವಿವಾದಿತ ‘ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) (ತಿದ್ದುಪಡಿ)…
ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್ಸಿ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್…
ಚೆಟ್ಟಳ್ಳಿ: ಕೊಡಗು ಜಿಲ್ಲೆಯಾದ್ಯಂತ ಕೈಲ್ ಪೊಳ್ದ್ ನಮ್ಮೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಚೆಟ್ಟಳ್ಳಿಯ ಪುತ್ತರಿರ ಐನ್ ಮನೆಯಲ್ಲಿ ಕೊಡವ ಸಂಪ್ರದಾಯ, ಕುಟುಂಬದ…
ಬೆಂಗಳೂರು : ರಾಜ್ಯದಲ್ಲಿ ಉಂಟಾಗಿರುವ ತೀವ್ರ ಬರಗಾಲದ ಪರಿಸ್ಥಿತಿ, ಕಸ್ತೂರಿ ರಂಗನ್ ವರದಿ ಹಾಗೂ ಇತ್ಯಾದಿ ಪ್ರಮುಖ ಜನಪರ ವಿಷಯಗಳ…
ಮಂಡ್ಯ: ಕೆಆರ್ಎಸ್ ಜಲಾಶಯದಿಂದ ತಮಿಳುನಾಡಿಗೆ ಒಳಹರಿವಿಗಿಂತ ಮೂರು ಪಟ್ಟು ಅಧಿಕ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಳೆ…