ಮೈಸೂರು

ನಿವೃತ್ತಿ ಹೊಂದಿದ ಯೋಧ ಸಿದ್ದಲಿಂಗಯ್ಯಗೆ ಬೀಳ್ಕೊಡುಗೆ

ಮೈಸೂರು : ಭಾರತೀಯ ಸೇನೆಯಲ್ಲಿ ಸುಧೀರ್ಘ 37 ವರ್ಷಗಳ ಕಾಲ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತರಾದ ಮಂಡ್ಯ ಮೂಲದ ಸಿಆರ್‌ಪಿಎಫ್‌ನ ಎಸ್ಐ ಎನ್. ಸಿದ್ದಲಿಂಗಯ್ಯ ಅವರಿಗೆ ಚೆನ್ನೈನ ಪೂನಮಲ್ಲೆನಲ್ಲಿರುವ ಸಿಆರ್‌ಪಿಎಫ್ ಕಮಾಂಡೆಂಟ್ ಕಚೇರಿಯಲ್ಲಿ ಬೀಳ್ಕೊಡುಗೆ ನೀಡಿ ಗೌರವಿಸಲಾಯಿತು.

ಮೂಲತಃ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಕನಗನಮರಡಿ ಗ್ರಾಮದ ಚೆಲುವಮ್ಮ-ನಿಂಗಯ್ಯ ದಂಪತಿಯ 3ನೇ ಪುತ್ರ ರಾಗಿ ಜನಿಸಿದ ಇವರು, 1988ರಲ್ಲಿ ಸಿಆರ್ ಪಿಎಫ್ ಗೆ ಆಯ್ಕೆಯಾಗಿ ತರಬೇತಿ ಪಡೆದ ನಂತರ ಶ್ರೀಲಂಕಾ ದಲ್ಲಿರುವ ಭಾರತೀಯ ಶಾಂತಿ ಸೇನೆಯಲ್ಲಿ ವೃತ್ತಿ ಸೇವೆ ಆರಂಭಿಸಿದರು. ಮಣಿಪುರ, ಅಸ್ಸಾಂ, ಛತ್ತೀಸ್ ಘಡ್, ಪಂಜಾಬ್, ನಾಗಲ್ಯಾಂಡ್, ತ್ರಿಪುರ, ಅರುಣಾಚಲ ಪ್ರದೇಶ, ದೆಹಲಿ, ಪಶ್ಚಿಮ ಬಂಗಾಳ, ಹರಿಯಾಣ, ಜಮ್ಮು ಮತ್ತು ಕಾಶ್ಮೀರ, ಮಧ್ಯಪ್ರದೇಶ, ಕೇರಳ, ತಮಿಳುನಾಡಿನಲ್ಲಿ ಸಿಪಾಯಿ, ಹವಲ್ದಾರ್, ಎಎಸ್ಐ, ಎಸ್ಐ ಆಗಿ ಸೇವೆ ಸಲ್ಲಿಸಿದ್ದಾರೆ.

ಪ್ರಸ್ತುತ ಇವರು ಮೈಸೂರಿನ ವಿಜಯನಗರದಲ್ಲಿ ವಿಶ್ರಾಂತಿ ಜೀವನ ನಡೆಸುತ್ತಿದ್ದಾರೆ.  ಬೀಳ್ಕೊಡುಗೆ ಸಮಾರಂಭದಲ್ಲಿ ಕಮಾಂಡೆಂಟ್ ರಾದ ಮುಖೇಶ್ ಕುಮಾರ್, ಸಹಾಯಕ ಕಮಾಂಡೆಂಟ್ ಅಲಿನ್ ಆಗಸ್ಟಿನ್, ಇನ್ ಸ್ಪೆಕ್ಟರ್ ಗಳು, ಎಸ್ಐಗಳು, ಸಿಬ್ಬಂದಿ ವರ್ಗದವರು ಹಾಜರಿದ್ದರು.

ಗೌರವ ಸ್ವೀಕರಿಸಿದ ಬಳಿಕ ಮಾತನಾಡಿದ ಸಿದ್ದಲಿಂಗಯ್ಯ, ದಿನನಿತ್ಯ ಗಡಿಯಲ್ಲಿ ಯುದ್ಧದ ವಾತಾವರಣ, ಬಂದೂಕು- ಗುಂಡುಗಳ ಮೊರೆತ, ಉಗ್ರರ ದಾಳಿ ಹೀಗೆ ಒಂದಿಲ್ಲೊಂದು ಘಟನೆಗಳ ಆತಂಕದಲ್ಲಿ ಇರುತ್ತಿದ್ದ ನಮಗೆ ನಮ್ಮ ಜೀವಕ್ಕಿಂತ ದೇಶ ರಕ್ಷಣೆಯೇ ಮುಖ್ಯವಾಗಿರುತ್ತದೆ. ಕುಟುಂಬ, ಸಂಬಂಧ ಇವುಗಳಿಂದ ದೂರ ಇದ್ದ ನನಗೆ ನೈತಿಕವಾಗಿ ಬೆಂಬಲ ನೀಡುತ್ತಿದ್ದ ಪತ್ನಿ ಶಿಕ್ಷಕಿಯೂ ಆದ ಶಾಂತಮ್ಮ ಅವರ ಸಂಪೂರ್ಣ ಸಹಕಾರ ಇತ್ತು. ಇದರಿಂದಲೇ 37 ವರ್ಷಗಳ ಕಾಲ ದೇಶ ಸೇವೆ ಸಲ್ಲಿಸಲು ಸಾಧ್ಯವಾಯಿತು. ನನ್ನನ್ನು ಖಾಕಿ ವಸ್ತ್ರದಲ್ಲಿ ನೋಡಬೇಕಿದಿದ್ದ ಅವಿದ್ಯಾವಂತರಾದ ನನ್ನ ತಂದೆ -ತಾಯಿ ಕನಸಾಗಿತ್ತು. ಅವರಿಗೆ ಈ ಸೇವೆಯನ್ನು ಅರ್ಪಿಸುತ್ತೇನೆ. ದೇಶ ಸೇವೆ ಸಲ್ಲಿಸಲು ಧೈರ್ಯ, ಸ್ಥೈರ್ಯ, ಪ್ರಾಮಾಣಿಕತೆ ಅತಿ ಮುಖ್ಯ ಎಂದರು.

ಆಂದೋಲನ ಡೆಸ್ಕ್

Recent Posts

ಮಹಪಂಚ್‌ ಕಾರ್ಟೂನ್‌

ಮಹಪಂಚ್‌ ಕಾರ್ಟೂನ್‌ |ಜುಲೈ 8 ಬುಧವಾರ  

2 hours ago

ಮಲೆನಾಡಿನಲ್ಲಿ ಮಳೆಯ ಅಬ್ಬರ: ಜೋಗ ಜಲಪಾತಕ್ಕೆ ಜೀವಕಳೆ

ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…

18 hours ago

ಕೊಡಗು ಜಿಲ್ಲೆಯ ಮಳೆ ವಿವರ

ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…

19 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…

20 hours ago

ವಯನಾಡಿನಲ್ಲಿ ಮೇಘಸ್ಫೋಟ: ಇಬ್ಬರು ಕಾರ್ಮಿಕರು ಜೀವಂತ ಸಮಾಧಿ: 30 ಮಂದಿ ನಾಪತ್ತೆ

ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…

20 hours ago

ಬ್ರಿಡ್ಜ್‌ ಮ್ಯಾನ್‌ ಖ್ಯಾತಿಯ ಪದ್ಮಶ್ರೀ ಡಾ.ಗಿರೀಶ್‌ ಭಾರದ್ವಾಜ್‌ ನಿಧನ

ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್‌ ಡಾ.ಗಿರೀಶ್‌ ಭಾರದ್ವಾಜ್‌ ಅವರು ಇಂದು ನಿಧನರಾಗಿದ್ದಾರೆ.…

21 hours ago