Farmer commits suicide
ಗುಂಡ್ಲುಪೇಟೆ: ಖಾಸಗಿ ಫೈನಾನ್ಸ್ವೊಂದರ ಸಿಬ್ಬಂದಿಯ ಕಿರುಕುಳದಿಂದ ರೈತರೊಬ್ಬರು ಕೀಟನಾಶಕ ಸೇವಿಸಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ತಾಲ್ಲೂಕಿನ ಭೋಗಯ್ಯನಹುಂಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸಿದ್ದರಾಜು ಅಲಿಯಾಸ್ ಕರಿಯಪ್ಪ (38) ಮೃತರು. 4 ದಿನಗಳ ಹಿಂದೆ ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದರು. ಬಳಿಕ ಅವರನ್ನು ಬೇಗೂರಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಸಲಾಗಿತ್ತು. ಚಿಕಿತ್ಸೆ ಫಲಿಸದೆ ಶನಿವಾರ ಮೃತಪಟ್ಟಿದ್ದಾರೆ.
ನಂಜನಗೂಡಿನ ಖಾಸಗಿ ಫೈನಾನ್ಸ್ ಸಂಸ್ಥೆಯೊಂದರಿಂದ ಗೃಹ ಸಾಲ ಪಡೆದಿದ್ದರು. ಸಕಾಲಕ್ಕೆ ಪಾವತಿಸಲು ಸಾಧ್ಯವಾಗಿರಲಿಲ್ಲ. ಸಂಸ್ಥೆಯ ಸಿಬ್ಬಂದಿ ಸಾಲ ಮರುಪಾವತಿ ಮಾಡುವಂತೆ ಒತ್ತಡ ಹೇರಿ ಕಿರುಕುಳ ನೀಡುತ್ತಿದ್ದರು ಎಂದು ತಿಳಿದುಬಂದಿದೆ.
ಅವಿವಾಹಿತ ಸಿದ್ದರಾಜು ತಾಯಿ ಜೊತೆಗಿದ್ದರು. ಖಾಸಗಿ ಫೈನಾನ್ಸ್ ಸಂಸ್ಥೆಯ ಸಿಬ್ಬಂದಿ ಈತನ ಮನೆಗೆ ಬಂದು ಸಾಲ ಮರುಪಾವತಿಗೆ ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತು ವಿಷ ಸೇವಿಸಿ ಅಸ್ವಸ್ಥರಾಗಿದ್ದರು ಎಂದು ಗ್ರಾಮದ ಮುಖಂಡ ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ಶಿವಾನಂದಸ್ವಾಮಿ ತಿಳಿಸಿದ್ದಾರೆ.
ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ.
ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…
ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…
ಮುಂಬೈ : ರಣವೀರ್ ಸಿಂಗ್ ಅಭಿನಯದ ಬಹು ನಿರೀಕ್ಷಿತ ‘ಧುರಂಧರ್ : ದಿ ರೆವೆಂಜ್ನ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ…
ವಿಶ್ವಸಂಸ್ಥೆ : ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಹೊರ್ಮುಜ್ ಜಲಸಂಧಿ ಮುಚ್ಚಿದರೆ ಜಾಗತಿಕ ವ್ಯಾಪಾರ ಮತ್ತು ಅಭಿವೃದ್ಧಿ ಕುಂಠಿತದ ಜೊತೆಗೆ…
ಮೈಸೂರು : ಮೈಸೂರು ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್ ಅವರು ಬುಧವಾರ ತಾಲ್ಲೂಕು ಕಛೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ…
ಬೆಂಗಳೂರು : ರಾಜ್ಯದಲ್ಲಿ ಏಪ್ರಿಲ್ 15 ರಿಂದ ಮೇ 15 ರವರೆಗೆ ’ಮನೆಗಳ ಪಟ್ಟಿ ಮತ್ತು ವಸತಿ ಗಣತಿ’ ಪ್ರಕ್ರಿಯೆ…