Farmer commits suicide
ಗುಂಡ್ಲುಪೇಟೆ: ಖಾಸಗಿ ಫೈನಾನ್ಸ್ವೊಂದರ ಸಿಬ್ಬಂದಿಯ ಕಿರುಕುಳದಿಂದ ರೈತರೊಬ್ಬರು ಕೀಟನಾಶಕ ಸೇವಿಸಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ತಾಲ್ಲೂಕಿನ ಭೋಗಯ್ಯನಹುಂಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸಿದ್ದರಾಜು ಅಲಿಯಾಸ್ ಕರಿಯಪ್ಪ (38) ಮೃತರು. 4 ದಿನಗಳ ಹಿಂದೆ ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದರು. ಬಳಿಕ ಅವರನ್ನು ಬೇಗೂರಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಸಲಾಗಿತ್ತು. ಚಿಕಿತ್ಸೆ ಫಲಿಸದೆ ಶನಿವಾರ ಮೃತಪಟ್ಟಿದ್ದಾರೆ.
ನಂಜನಗೂಡಿನ ಖಾಸಗಿ ಫೈನಾನ್ಸ್ ಸಂಸ್ಥೆಯೊಂದರಿಂದ ಗೃಹ ಸಾಲ ಪಡೆದಿದ್ದರು. ಸಕಾಲಕ್ಕೆ ಪಾವತಿಸಲು ಸಾಧ್ಯವಾಗಿರಲಿಲ್ಲ. ಸಂಸ್ಥೆಯ ಸಿಬ್ಬಂದಿ ಸಾಲ ಮರುಪಾವತಿ ಮಾಡುವಂತೆ ಒತ್ತಡ ಹೇರಿ ಕಿರುಕುಳ ನೀಡುತ್ತಿದ್ದರು ಎಂದು ತಿಳಿದುಬಂದಿದೆ.
ಅವಿವಾಹಿತ ಸಿದ್ದರಾಜು ತಾಯಿ ಜೊತೆಗಿದ್ದರು. ಖಾಸಗಿ ಫೈನಾನ್ಸ್ ಸಂಸ್ಥೆಯ ಸಿಬ್ಬಂದಿ ಈತನ ಮನೆಗೆ ಬಂದು ಸಾಲ ಮರುಪಾವತಿಗೆ ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತು ವಿಷ ಸೇವಿಸಿ ಅಸ್ವಸ್ಥರಾಗಿದ್ದರು ಎಂದು ಗ್ರಾಮದ ಮುಖಂಡ ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ಶಿವಾನಂದಸ್ವಾಮಿ ತಿಳಿಸಿದ್ದಾರೆ.
ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…