Farmer commits suicide
ಗುಂಡ್ಲುಪೇಟೆ: ಖಾಸಗಿ ಫೈನಾನ್ಸ್ವೊಂದರ ಸಿಬ್ಬಂದಿಯ ಕಿರುಕುಳದಿಂದ ರೈತರೊಬ್ಬರು ಕೀಟನಾಶಕ ಸೇವಿಸಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ತಾಲ್ಲೂಕಿನ ಭೋಗಯ್ಯನಹುಂಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸಿದ್ದರಾಜು ಅಲಿಯಾಸ್ ಕರಿಯಪ್ಪ (38) ಮೃತರು. 4 ದಿನಗಳ ಹಿಂದೆ ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದರು. ಬಳಿಕ ಅವರನ್ನು ಬೇಗೂರಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಸಲಾಗಿತ್ತು. ಚಿಕಿತ್ಸೆ ಫಲಿಸದೆ ಶನಿವಾರ ಮೃತಪಟ್ಟಿದ್ದಾರೆ.
ನಂಜನಗೂಡಿನ ಖಾಸಗಿ ಫೈನಾನ್ಸ್ ಸಂಸ್ಥೆಯೊಂದರಿಂದ ಗೃಹ ಸಾಲ ಪಡೆದಿದ್ದರು. ಸಕಾಲಕ್ಕೆ ಪಾವತಿಸಲು ಸಾಧ್ಯವಾಗಿರಲಿಲ್ಲ. ಸಂಸ್ಥೆಯ ಸಿಬ್ಬಂದಿ ಸಾಲ ಮರುಪಾವತಿ ಮಾಡುವಂತೆ ಒತ್ತಡ ಹೇರಿ ಕಿರುಕುಳ ನೀಡುತ್ತಿದ್ದರು ಎಂದು ತಿಳಿದುಬಂದಿದೆ.
ಅವಿವಾಹಿತ ಸಿದ್ದರಾಜು ತಾಯಿ ಜೊತೆಗಿದ್ದರು. ಖಾಸಗಿ ಫೈನಾನ್ಸ್ ಸಂಸ್ಥೆಯ ಸಿಬ್ಬಂದಿ ಈತನ ಮನೆಗೆ ಬಂದು ಸಾಲ ಮರುಪಾವತಿಗೆ ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತು ವಿಷ ಸೇವಿಸಿ ಅಸ್ವಸ್ಥರಾಗಿದ್ದರು ಎಂದು ಗ್ರಾಮದ ಮುಖಂಡ ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ಶಿವಾನಂದಸ್ವಾಮಿ ತಿಳಿಸಿದ್ದಾರೆ.
ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…