ಮೈಸೂರು

ವಿಷ ಸೇವಿಸಿ ರೈತ ಆತ್ಮಹತ್ಯೆ

ಸರಗೂರು: ಸಾಲಭಾದೆ ತಾಳಲಾರದೆ ವಿಷ ಸೇವಿಸಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹಳ್ಳದ ಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರೈತ ಸೋಮಶೆಟ್ಟಿ (55) ಮೃತ ರೈತ. ಇವರು ಜಮೀನಿಗೆ ಪಂಪ್‌ಸೆಟ್ ಹಾಕುವುದಕ್ಕೆ ಹಾಗೂ ಜಮೀನಿನಲ್ಲಿ ಇತರ ಬೆಳೆ ಬೆಳೆಯುವುದಕ್ಕೆ ಬ್ಯಾಂಕ್‌ ಹಾಗೂ ಕೈಸಾಲ ಸೇರಿದಂತೆ ಸುಮಾರು 45 ಲಕ್ಷ ರೂ.ಗೂ ಹೆಚ್ಚು ಸಾಲ ಮಾಡಿದ್ದರು ಎನ್ನಲಾಗಿದೆ.

ಪಂಪ್‌ಸೆಟ್‌ ಅಳವಡಿಸಿ ನೀರು ಬಾರದ ಕಾರಣ ಫಸಲು ಬೆಳೆಯಲು ಸಾಧ್ಯವಾಗದೇ ತಮ್ಮ ಜಮೀನು ಮಾರಾಟ ಮಾಡಿ ಸಾಲ ತೀರಿಸಲು ಮುಂದಾಗಿದ್ದರು. ಆ ಹಣ ಕೂಡ ಸಾಲದೆ ಇರುವ ಕಾರಣ ಗುರುವಾರ ಸಂಜೆ ತಮ್ಮ ಪುತ್ರನಿಗೆ ಫೋನ್ ಕರೆ ಮಾಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ವಿಷಯ ತಿಳಿಸಿದ್ದಾರೆ.

ಆಗ ಕೂಡಲೇ ಪುತ್ರ ಸ್ಥಳಕ್ಕೆ ಆಗಮಿಸಿ ಸೋಮಶೆಟ್ಟಿ ಅವರನ್ನು ತುರ್ತು ವಾಹನದ ಮೂಲಕ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ತಡರಾತ್ರಿ ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ.

ಶುಕ್ರವಾರ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಮೃತ ದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಇವರಿಗೆ ಪತ್ನಿ, ಒಬ್ಬ ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ. ಘಟನೆಗೆ ಸಂಬಂಧಿಸಿದಂತೆ ಎಚ್.ಡಿ.ಕೋಟೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ವಿಧಾನಮಂಡಲ ಅಧಿವೇಶನ ಒಂದು ದಿನ ಮೊಟಕು.?

ಬೆಂಗಳೂರು: ವಿಧಾನಮಂಡಲ ಅಧಿವೇಶನವನ್ನು ಒಂದು ದಿನ ಮೊಟಕುಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಾರ್ಚ್.‌27ರವರೆಗೆ ನಡೆಯಬೇಕಿದ್ದ ವಿಧಾನಮಂಡಲ ಅಧಿವೇಶನ ಮಾರ್ಚ್.‌26ರಂದು ಕೊನೆಗೊಳ್ಳಲಿದೆ.…

1 min ago

ಕೊಲಂಬಿಯಾದಲ್ಲಿ 125 ಸೈನಿಕರಿದ್ದ ಮಿಲಿಟರಿ ವಿಮಾನ ಪತನ: 66 ಮಂದಿ ದುರ್ಮರಣ

ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್‌ ಕೆಲ ಸಮಯದಲ್ಲಿ ಪತನಗೊಂಡು 66 ಜನರು ಸಾವನ್ನಪ್ಪಿರುವ ಘಟನೆ ಕೊಲಂಬಿಯಾದಲ್ಲಿ…

55 mins ago

ಓದುಗರ ಪತ್ರ: ಕಲ್ಲಾಗದಿರು ಮಳೆಯೇ!

ಬಾ ಮಳೆಯೇ ಬಾ.. ನೊಂದು - ಬೆಂದು ಬಸವಳಿದ ರೈತನ ಬಾಳಿಗೆ ಹೂವಾಗಿ ಬಾ ಕಾದ ಭೂತಾಯ ಒಡಲಿಂಗೆ ಹನಿ…

1 hour ago

ಓದುಗರ ಪತ್ರ: ಬೆರಳಚ್ಚು ಕಡ್ಡಾಯಗೊಳ್ಳಲಿ

ಪಡಿತರ ಮತ್ತು ಪಿಂಚಣಿಗೆ ಬಯೋಮೆಟ್ರಿಕ್ ಕಡ್ಡಾಯವಿರುವಾಗ ಚುನಾವಣೆಯಲ್ಲಿ ಇದಕ್ಕೇಕೆ ವಿನಾಯಿತಿ? ಭಾರತದಂತಹ ವಿಶಾಲ ದೇಶದಲ್ಲಿ. ಶೇ.೨೦ ರಿಂದ ೨೨ ರಷ್ಟು…

2 hours ago

ಓದುಗರ ಪತ್ರ: ಒಂದನೇ ತರಗತಿ ಪ್ರವೇಶಕ್ಕೆ ಹಿಂದಿನ ಪದ್ಧತಿಯೇ ಸೂಕ್ತ

ಒಂದನೇ ತರಗತಿ ಪ್ರವೇಶಕ್ಕೆ ಜೂನ್ ೧ಕ್ಕೆ ೬ ವರ್ಷ ಕಡ್ಡಾಯಗೊಳಿಸಿರುವ ನಿಯಮವು, ಕೇವಲ ಕೆಲವೇ ದಿನಗಳ ಅಂತರವಿರುವ ಮಕ್ಕಳ ಒಂದು…

2 hours ago

ಓದುಗರ ಪತ್ರ: ಎಚ್.ಡಿ.ದೇವೇಗೌಡ ಪತ್ರ ಬರೆದಿರುವುದು ಶ್ಲಾಘನೀಯ

ಕಾಂಗ್ರೆಸ್ ಪಕ್ಷದ ಲೋಕಸಭಾ ಸದಸ್ಯರ ನಡವಳಿಕೆಯನ್ನು ಕುರಿತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಇತ್ತೀಚೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ…

2 hours ago