ಮೈಸೂರು

ವಿಷ ಸೇವಿಸಿ ರೈತ ಆತ್ಮಹತ್ಯೆ

ಸರಗೂರು: ಸಾಲಭಾದೆ ತಾಳಲಾರದೆ ವಿಷ ಸೇವಿಸಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹಳ್ಳದ ಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರೈತ ಸೋಮಶೆಟ್ಟಿ (55) ಮೃತ ರೈತ. ಇವರು ಜಮೀನಿಗೆ ಪಂಪ್‌ಸೆಟ್ ಹಾಕುವುದಕ್ಕೆ ಹಾಗೂ ಜಮೀನಿನಲ್ಲಿ ಇತರ ಬೆಳೆ ಬೆಳೆಯುವುದಕ್ಕೆ ಬ್ಯಾಂಕ್‌ ಹಾಗೂ ಕೈಸಾಲ ಸೇರಿದಂತೆ ಸುಮಾರು 45 ಲಕ್ಷ ರೂ.ಗೂ ಹೆಚ್ಚು ಸಾಲ ಮಾಡಿದ್ದರು ಎನ್ನಲಾಗಿದೆ.

ಪಂಪ್‌ಸೆಟ್‌ ಅಳವಡಿಸಿ ನೀರು ಬಾರದ ಕಾರಣ ಫಸಲು ಬೆಳೆಯಲು ಸಾಧ್ಯವಾಗದೇ ತಮ್ಮ ಜಮೀನು ಮಾರಾಟ ಮಾಡಿ ಸಾಲ ತೀರಿಸಲು ಮುಂದಾಗಿದ್ದರು. ಆ ಹಣ ಕೂಡ ಸಾಲದೆ ಇರುವ ಕಾರಣ ಗುರುವಾರ ಸಂಜೆ ತಮ್ಮ ಪುತ್ರನಿಗೆ ಫೋನ್ ಕರೆ ಮಾಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ವಿಷಯ ತಿಳಿಸಿದ್ದಾರೆ.

ಆಗ ಕೂಡಲೇ ಪುತ್ರ ಸ್ಥಳಕ್ಕೆ ಆಗಮಿಸಿ ಸೋಮಶೆಟ್ಟಿ ಅವರನ್ನು ತುರ್ತು ವಾಹನದ ಮೂಲಕ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ತಡರಾತ್ರಿ ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ.

ಶುಕ್ರವಾರ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಮೃತ ದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಇವರಿಗೆ ಪತ್ನಿ, ಒಬ್ಬ ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ. ಘಟನೆಗೆ ಸಂಬಂಧಿಸಿದಂತೆ ಎಚ್.ಡಿ.ಕೋಟೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

2 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

2 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

2 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

2 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

2 hours ago