ಮೈಸೂರು

ಕಳೆ ನಾಶಕ ಸಿಂಪಡಣೆ ವೇಳೆ ರೈತ ಸಾವು

ಎಚ್.ಡಿ.ಕೋಟೆ: ತಾಲ್ಲೂಕಿನ ಜಿ.ಬಿ.ಸರಗೂರು ಗ್ರಾಮದ ರೈತ ನಾಗೇಶ್ (೪೨) ಶುಂಠಿ ಬೆಳೆಗೆ ಕಳೆನಾಶಕ ಔಷಧ ಸಿಂಪಡಿಸುವಾಗ ಮೃತಪಟ್ಟಿದ್ದಾರೆ.

ಶನಿವಾರ ಬೆಳಿಗ್ಗೆ ಕಳೆ ನಾಶಕವನ್ನು ಸಿಂಪಡಿಸಲು ಹೋಗಿದ್ದ ನಾಗೇಶ್ ಮಧ್ಯಾಹ್ನವಾದರೂ ಮನೆಗೆ ಮರಳಿರಲಿಲ್ಲ. ಕರೆ ಮಾಡಿದರೆ ಸ್ವೀಕರಿಸುತ್ತಿರಲಿಲ್ಲ. ಈ ವೇಳೆ ಮನೆಯವರು ಜಮೀನಿಗೆ ಹೋಗಿ ನೋಡಿ ದಾಗ ರೈತ ಮೃತಪಟ್ಟಿರುವುದು ತಿಳಿದುಬಂದಿದೆ

ಔಷಧ ಸಿಂಪಡಣೆ ವೇಳೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಅನುಸರಿಸದೇ ಇರುವುದು ಸಾವಿಗೆ ಕಾರಣ ಎಂದು ತಿಳಿದುಬಂದಿದೆ. ಇತ್ತೀಚೆಗೆ ರೈತರು ಹೆಚ್ಚಾಗಿ ಕಳೆನಾಶಕವನ್ನು ಬಳಕೆ ಮಾಡುತ್ತಿದ್ದು, ಇದರಿಂದ ಭೂಮಿಯ ಫಲವತ್ತತೆ ಜತೆಗೆ ಮನುಷ್ಯರ ಆರೋಗ್ಯದ ಮೇಲೂ ಇದು ಕೆಟ್ಟ ಪರಿಣಾಮ ಬೀರುತ್ತಿದೆ. ಸರ್ಕಾರ ಈ ಸಂಬಂಧ ಸೂಕ್ತ ಮಾರ್ಗಸೂಚಿ ಪ್ರಕಟಿಸಬೇಕು. ರೈತರ ಜೀವ ಮತ್ತು ಜೀವನಕ್ಕೆ ಮಾರಕವಾಗಿರುವ ಔಷಧಗಳನ್ನು ನಿಷೇಽಸಬೇಕು. ಜತೆಗೆ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

55 mins ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

2 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

2 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

2 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

4 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

4 hours ago