ಮೈಸೂರು

ಬಿಂದಿಗೆ ಹೊತ್ತು ಓಡಿದ ನಾರಿಯರು, ಗೊಬ್ಬರಮೂಟೆ ಹೊತ್ತು ಓಡಿದ ಪುರುಷರು

ರೈತ ದಸರಾ ಕ್ರೀಡಾಕೂಟದಲ್ಲಿ ಕೃಷಿಕರ ಸಂಭ್ರಮದ ಹೊನಲು

ಮೈಸೂರು: ನೀರಿನ ಬಿಂದಿಗೆ ಹೊತ್ತು ಎದ್ನೋ,ಬಿದ್ನೋ ಅಂಥ ಓಡಿದ ನಾರಿಯರು. ಹೆಣ್ಮಕ್ಕಳಿಗಿಂತ ತಾವೇನೂ ಕಮ್ಮಿ ಇಲ್ಲವೆನ್ನುವಂತೆ ಗೋಣಿಚೀಲದ ಗೊಬ್ಬರ ಮೂಟೆ ಹೊತ್ತು ಓಡಿದ ಪುರುಷರು. ಕೆಸರುಗದ್ದೆ ಓಟದಲ್ಲಿ ಎದ್ದು ಬಿದ್ದು ಗುರಿ ತಲುಪಿದ ರೈತರು.. ನೀರು ತುಂಬಿದ ಬಿಂದಿಗೆ ಹೊತ್ತು ಓಡಿದ ಮಹಿಳಾ ರೈತರು !.. ಇದು ಮೈಸೂರು ದಸರಾ ಮಹೋತ್ಸವ ಅಂಗವಾಗಿ ರೈತದಸರಾ ಪ್ರಯುಕ್ತ ಶನಿವಾರ ನಡೆದ ಕ್ರೀಡಾಕೂಟದಲ್ಲಿ ಕಂಡು ಬಂದ ವಿಶೇಷತೆಗಳು. ಹಲವು ದಿನದಿಂದ ತಮ್ಮ ಗದ್ದೆ,ಜಮೀನಿನಲ್ಲಿ ವ್ಯವಸಾಯದಲ್ಲಿ ನಿರತರಾಗಿದ್ದ ರೈತರು-ರೈತ ಮಹಿಳೆಯರು ಎಲ್ಲ ಕೆಲಸವನ್ನು ಬದಿಗೊತ್ತಿ ನಾಡಹಬ್ಬ ದಸರಾ ಕ್ರೀಡಾಕೂಟದ ಸಂಭ್ರಮದಲ್ಲಿ ಭಾಗವಹಿಸಿ ಮಿಂಚಿದರು.

ಬಿಂದಿಗೆ ಹೊತ್ತರು: ನಗರದ ಮೈಸೂರು ವಿಶ್ವವಿದ್ಯಾನಿಲಯದ ಓವಲ್ ಮೈದಾನದಲ್ಲಿ ಹಲವಾರು ಸ್ಪರ್ಧೆಗಳು ನಡೆಯಿತು. ಸಮಯಕ್ಕೆ ಸರಿಯಾಗಿ ಮನೆಯಿಂದ ಠಾಕುಠೀಕಾಗಿ ಬಂದಿದ್ದ ಮಹಿಳೆಯರು ಓವಲ್ ಮೈದಾನಕ್ಕೆ ಬಂದರು. ಬಳಿಕ ಸ್ಪರ್ಧೆಗೆ ಥೇಟ್ ಹಳ್ಳಿ ಹೆಣ್ಣುಮಕ್ಕಳಂತೆ ಸಜ್ಜಾದರು. ಬಳಿಕ ನೀರಿನ ಬಿಂದಿಗೆ ಹೊತ್ತುಕೊಂಡು ನಿಗಧಿತ ಗುರಿ ತಲುಪಲು ಪೈಪೋಟಿ ನೀಡಿದರೆ, ಸುತ್ತಲೂ ನೆರೆದಿದ್ದ ಜನರು ಚಪ್ಪಾಳೆ ತಟ್ಟಿ ಹುರಿದುಂಬಿಸಿದರು. ತಲೆ ಮೇಲೆ ಬಿಂದಿಗೆಯನ್ನು ಹೊತ್ತು ಸರಾಗವಾಗಿ ಬೇಗ ಗುರಿ ತಲುಪಿ ಪ್ರಥಮ,ದ್ವಿತೀಯ ಸ್ಥಾನ ಗಿಟ್ಟಿಸಿಕೊಂಡರೆ, ಹಲವರು ಸುಸ್ತಾಗಿ ನಿಂತಿದ್ದು ಕಾಣಿಸಿತು. ಇದೇ ರೀತಿ ಲೆಮನ್ ಅಂಡ್ ಸ್ಪೂನ್ ಸ್ಪರ್ಧೆಯಲ್ಲೂ ಮಹಿಳೆಯರು ಖುಷಿಯಿಂದಲೇ ಪಾಲ್ಗೊಂಡಿದ್ದರು. ನಗರ ಪ್ರದೇಶದ ಹೆಣ್ಣು ಮಕ್ಕಳಿಗಿಂತ ತಾವೇನೂ ಕಮ್ಮಿ ಎನ್ನುವುದನ್ನು ಸ್ಪರ್ಧೆ ಉತ್ಸಾಹದ ಮೂಲಕವೇ ತೋರಿಸಿಕೊಟ್ಟರು. ಬಾಯಲ್ಲಿ ಚಮಚ ಇಟ್ಟುಹೆಜ್ಜೆ ಹಾಕಿ ಎಲ್ಲರ ಗಮನ ಸೆಳೆದರು.

ಎದ್ದುಬಿದ್ದು ಓಡೋಡಿದರು: ಇನ್ನೂ ೫೦ಕೆಜಿ ತೂಕದ ಗೊಬ್ಬರ ಮೂಟೆ ಹೊತ್ತುವ ಸ್ಪರ್ಧೆ ಬಹಳ ರೋಮಾಂಚನಕಾರಿಯಾಗಿತ್ತು. ಹಳ್ಳಿಯಲ್ಲಿ ಕ್ವಿಂಟಾಲ್ ಚೀಲ ಹೊತ್ತುವ ಅಭ್ಯಾಸ ಇದ್ದರೂ ಪಟ್ಟಣದಲ್ಲಿ ಓಡುವ ಸ್ವಭಾವ ಕಡಿಮೆಯಿರುತ್ತದೆ. ಹೀಗಿದ್ದರೂ ಸುಡುವ ಬಿಸಿಲಲ್ಲೂ ಹೆಗಲ ಮೇಲೆ ಗೊಬ್ಬರದ ಮೂಟೆಯನ್ನು ೧೦೦ ಮೀಟರ್ ಹೊತ್ತು ಓಡಿದರು. ಮೂಟೆ ಹೊತ್ತು ಓಡಿ ಬರುವ ರಭಸಕ್ಕೆ ಎಲ್ಲಾದರೂ ಜಾರಿಬಿದ್ದರೆ ಎನ್ನುವ ಕಾರಣಕ್ಕಾಗಿ ಕೆಲವರು ತಡೆದುಕೊಳ್ಳಲು ಸಜ್ಜಾಗಿದ್ದರು.ಆದರೆ, ಕೆಲವರು ನಿಧಾನವಾಗಿ ಓಡಿದರೆ, ಹಲವರು ಮೂಟೆ ಹೊತ್ತು ನಿಗಧಿತ ಗುರಿ ತಲುಪಿ ಸೈ ಎನ್ನಿಸಿಕೊಂಡರು. ಇನ್ನು ಗೋಣಿಚೀಲದ ಒಳಗೆ ಕಾಲಿಟ್ಟು ಓಡುವ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ರೈತರು ಗೆಲುವಿಗಾಗಿ ಎಲ್ಲ ಶ್ರಮ ಹಾಕಿ ಓಡುವ ಭರದಲ್ಲಿ ಕೆಲವರು ಆಯತಪ್ಪಿ ಬಿದ್ದರೆ,ಹಲವರು ತಮ್ಮ ಜಾಣತನದಿಂದಲೇ ಗುರಿ ತಲುಪಿ ಬಹುಮಾನ ತಮ್ಮದಾಗಿಸಿಕೊಂಡರು. ಇದೇ ರೀತಿ ಪುರುಷರಿಗೆ ಮೂರು ಕಾಲಿನ ಓಟ,ಗುಂಡು ಮಹಿಳಾ ರೈತರಿಗೆ ಚಮಚದಲ್ಲಿ ನಿಂಬೆಹಣ್ಣು ಇಟ್ಟುಕೊಂಡು ಓಡುವ ಸ್ಪರ್ಧೆಯು ಎಲ್ಲರು ಕೂತುಹಲದಿಂದ ನೋಡುವಂತೆ ಮಾಡಿತು. ಪುರುಷರ ಮೂರು ಕಾಲಿನ ಓಟದ ಸ್ಪರ್ಧೆ ನೋಡುಗರ ಗಮನ ಸೆಳೆದರೆ, ಮಹಿಳೆಯರ ಒಂಟಿ ಕಾಲಿನ ಓಟದ ವೇಳೆ ಸುತ್ತುವರಿದಿದ್ದವರು ಚಪ್ಪಾಳೆ ತಟ್ಟಿ ಹುರಿದುಂಬಿಸಿದರು.

 

 

andolana

Recent Posts

ಮೈಸೂರು: ಹಳೆಯ ವಸ್ತು ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ

ಮೈಸೂರು: ಹಳೆಯ ವಸ್ತುಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮೈಸೂರಿನ ಎನ್.ಆರ್.‌ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರು-ಬೆಂಗಳೂರು ರಸ್ತೆಯ…

17 mins ago

ವಿಬಿ ಜಿ ರಾಮ್ ಜಿ ಗೊಂದಲ ನಿವಾರಣೆ ಕೇಂದ್ರದ ಹೊಣೆ

ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…

8 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಿಎಂ ಶಿಶಿರ್ ಚಂದ್ರ ಏಕೆ ಕೆಳಗಿಳಿಯುತ್ತಿಲ್ಲ?

ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ  ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…

8 hours ago

ರಂಗನತಿಟ್ಟು ಸಮೀಪ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ: ಪರ-ವಿರೋಧ ಅಭಿಪ್ರಾಯ

ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ ೨೭೫ರ ವಿಸ್ತೃತ ಮಾರ್ಗವಾದ…

8 hours ago

ಅಳಿವಿನತ್ತ ರಾಜ್ಯದ ಮೊದಲ ಬಾಲಕಿಯರ ಶಾಲೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಹೆಣ್ಣುಮಕ್ಕಳಿಗಾಗಿ ರಾಜ್ಯದಲ್ಲಿ ಸ್ಥಾಪಿಸಿದ ಮೊದಲ ಶಾಲೆ ಇದು. ಶತೋತ್ತರ ಅರ್ಧ…

8 hours ago