ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಗ್ರಾಮದ ಎಸ್.ಟಿ.ಆನಂದ್ (೬೦) ಮೃತಪಟ್ಟ ರೈತ. ಇವರು ಜಮೀನಿನಲ್ಲಿ ತಂಬಾಕು ಬೆಳೆಗೆ ನೀರು ಹಾಯಿಸುತ್ತಿದ್ದಾಗ ಗುಡುಗು ಸಿಡಿಲು ಸಹಿತ ಮಳೆ ಬಂದಾಗ ರಕ್ಷಣೆಗಾಗಿ ಮರದ ಕೆಳಗೆ ನಿಂತಿದ್ದಾಗ ಸಿಡಿಲು ಬಡಿದು ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಗ್ರಾಮಸ್ಥರು ಕೆ.ಆರ್.ನಗರದ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ.
ಆನಂದ್ ಅವರು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದ್ದು, ಅಂತ್ಯ ಸಂಸ್ಕಾರವು ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ನಡೆಯಿತು. ಮೃತ ಆನಂದ್ ಅವರ ಪುತ್ರ ಚಂದ್ರಕಾಂತ್ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…
ದಿಲೀಪ್ ಎನ್ಕೆ ಊರ ಮಾರಿಹಬ್ಬಗಳಲ್ಲಿ ಕೇರಿಯಾಗಿನ ಕೇರಿಗಳಲ್ಲಿ ಮೊಳಗುವ ಚಿತ್ರಗೀತೆಗಳಂತೆ ಈಗ ದೇಶದ ತುಂಬೆಲ್ಲಾ ಬರೀ ಅವ್ಯವಸ್ಥೆಯ ವಿರುದ್ಧ ಸೆಟೆದು…
ಶೇಷಾದ್ರಿ ಗಂಜೂರು ಸಂಕೇತವನ್ನೇ ಬ್ರಾಂಡ್ ಆಗಿಸಿಕೊಂಡ ದಿಢೀರ್ ಚಳವಳಿಯೊಂದು ಇದ್ದಕ್ಕಿದ್ದಂತೆ ಎದುರು ನಿಂತಾಗ ಅದರ ಬಗೆಗೆ ಒಂದು ಆರೋಗ್ಯಕರ ಸಂದೇಹದ…
ಸುರೇಶ ಕಂಜರ್ಪಣೆ ಜಿರಲೆ ಪಕ್ಷದ ಹುಟ್ಟು ಮತ್ತು ಅದರ ಇತ್ತೀಚಿಗಿನ ಚಳವಳಿ ಕುರಿತು ವರ್ಣರಂಜಿತ ಊಹಾಪೋಹ, ವಿಶ್ಲೇಷಣೆಗಳು ನಡೆದಿವೆ. ಇವೆಲ್ಲಾ…
ಕೃಷ್ಣ ಸಿದ್ದಾಪುರ ಅಣಬೆ ಕೃಷಿ ಗೃಹಿಣಿಯರಿಗೆ ಆದಾಯ ತರುವ ಉದ್ಯಮ ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶಗಳಿದ್ದು,…
ʼರಾಮು ಅವರ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿ ಬಿಡುಗಡೆ ಮಾಡಿದ ಚ.ಹ.ರಘುನಾಥ ಅಭಿಮತ ಮೈಸೂರು: ಸಾವಿರಾರು ವರ್ಷಗಳ ಹಿಂದಿನ ಮಹಾಭಾರತವನ್ನು ಸಮಕಾಲೀನ…