ಮೈಸೂರು

ಎಚ್‌.ಡಿ ಕೋಟೆ | ಕಾಡಾನೆ ದಾಳಿಗೆ ರೈತನಿಗೆ ಗಾಯ

ಎಚ್.ಡಿ.ಕೋಟೆ : ಕಾಡಾನೆ ದಾಳಿಯಿಂದ ರೈತ ರಾಜು ಎಂಬವರು ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಎನ್.ಬೆಳತೂರು ಗ್ರಾಮದಲ್ಲಿ ನಡೆದಿದೆ.

3-4 ದಿನಗಳ ಹಿಂದೆ ಬಂಡೀಪುರ ಅರಣ್ಯ ವ್ಯಾಪ್ತಿಯಿಂದ ರೈಲ್ವೆ ಬ್ಯಾರಿಕೇಡ್ ದಾಟಿ ಬಂದ ಮೂರು ಕಾಡಾನೆಗಳು ಭಾನುವಾರ ಮಳಲಿ ಗ್ರಾಮದ ರೈತರ ರೈತ ಪ್ರಕಾಶ್ ಎಂಬವರಿಗೆ ಸೇರಿದ ಜಮೀನಿಗೆ ನುಗ್ಗಿ ಬಾಳೆ ಫಸಲು ನಾಶ ಮಾಡಿವೆ. ಅಲ್ಲದೆ ಮತ್ತೋರ್ವ ರೈತ ಜಗಣ್ಣ ಅವರಿಗೆ ಸೇರಿದ 50ಕ್ಕೂ ಹೆಚ್ಚು ಕ್ರೇಟ್ ಟೊಮೊಟೊ ತಿಂದು ನಾಶ ಮಾಡಿವೆ. ಸೋಮವಾರ ಮುಂಜಾನೆ ಎನ್.ಬೆಳತೂರು ಗ್ರಾಮಕ್ಕೆ ಲಗ್ಗೆ ಹಾಕಿದ ಕಾಡಾನೆಗಳು ಹಸುಗಳನ್ನು ಕಟ್ಟಿ ಹಾಕುತ್ತಿದ್ದ ರಾಜು ಅವರ ಮೇಲೆ ದಾಳಿ ನಡೆಸಿವೆ. ಪರಿಣಾಮ ರಾಜು ಅವರ ಕಾಲು ಮುರಿದಿದ್ದು, ತೀವ್ರವಾಗಿ ಗಾಯಗೊಂಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಆರ್‌ಎಫ್‌ಒ ಸಿದ್ದರಾಮು ಅವರು ರೈತ ರಾಜು ಅವರನ್ನು ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಗ್ರಾಮದ ರೈತರು ದಮ್ಮನಕಟ್ಟೆ ಸಫಾರಿ ಕೇಂದ್ರಕ್ಕೆ ತೆರಳಿ ಎಸಿಎಫ್ ಮಧು ಹಾಗೂ ಆರ್‌ಎಫ್‌ಒ ಸಿದ್ದರಾಜು ಅವರನ್ನು ಭೇಟಿ ಮಾಡಿ ವನ್ಯಜೀವಿಗಳ ಹಾವಳಿ ತಡೆಗೆ ಕ್ರಮ ಕೈಗೊಳ್ಳು ವಂತೆ ಮನವಿ ಮಾಡಿದರು.

ಮನವಿ ಸ್ವೀಕರಿಸಿ ನಂತರ ಎಸಿಎಫ್ ಮಧು ಮಾತನಾಡಿ, ಆನೆ ದಾಳಿಯಿಂದ ಗಾಯಗೊಂಡಿರುವ ರೈತ ರಾಜು ಅವರಿಗೆ ಚಿಕಿತ್ಸೆ ಕೊಡಿಸುವುದಾಗಿ ತಿಳಿಸಿದರು. ಅಲ್ಲದೆ ಆನೆ ದಾಳಿಯಿಂದ ನಾಶವಾಗಿರುವ ಫಸಲಿಗೆ ಸರ್ಕಾರದ ವತಿಯಿಂದ ಪರಿಹಾರ ಕೊಡಿಸುವ ಭರವಸೆ ನೀಡಿ, ಆನೆ ಓಡಿಸುವುದಕ್ಕೆ ವಿಶೇಷ ಆನೆ ಕಾವಲು ಕಾರ್ಯಪಡೆ ನೇಮಿಸಲಾಗುವುದು ಎಂದರು.

ಈ ವೇಳೆ ಶುಂಠಿ ಕೂಲಿ ಕಾರ್ಮಿಕರ ಸಂಘದ ಅಧ್ಯಕ್ಷ ಸುಂದರ, ತಿಮ್ಮಯ್ಯ, ಪ್ರವೀಣ, ಎಜೂರ, ಸೋಮೇಶ್, ಶಿವಪ್ಪ, ಲಕ್ಷ್ಮಣ, ಮರಿಲಿಂಗಯ್ಯ, ನಾಗಯ್ಯ, ಪ್ರಕಾಶ್, ಶಿವಕುಮಾರ್, ಲೋಕೇಶ್, ರಾಜು, ಬಾಣಯ್ಯ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಕಾಮುಕನನ್ನು ಹಿಡಿದು ಥಳಿಸಿದ ಗ್ರಾಮಸ್ಥರು

ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…

23 mins ago

ಓದುಗರ ಪತ್ರ: ಕೆ.ಕೆ.ಮಹಮದ್ ಅವರ ಹೇಳಿಕೆ ಪ್ರಬುದ್ಧ ನಡೆ

ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…

48 mins ago

ಓದುಗರ ಪತ್ರ: ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ನಾಗರಿಕ ಸ್ನೇಹಿ

ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…

52 mins ago

ಓದುಗರ ಪತ್ರ: ದ್ವೇಷ ಭಾಷಣಕ್ಕೆ  ಕಾನೂನು ಕಡಿವಾಣ ಸಾಗತಾರ್ಹ

ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…

1 hour ago

ಡಾ.ಬಿ.ಆರ್.ಅಂಬೇಡ್ಕರ್ ಎಂಬ ಅಮರ ಜಗತ್ತು…

ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ  ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…

1 hour ago

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

4 hours ago