ಮೈಸೂರು

ಎಚ್‌.ಡಿ ಕೋಟೆ | ಕಾಡಾನೆ ದಾಳಿಗೆ ರೈತನಿಗೆ ಗಾಯ

ಎಚ್.ಡಿ.ಕೋಟೆ : ಕಾಡಾನೆ ದಾಳಿಯಿಂದ ರೈತ ರಾಜು ಎಂಬವರು ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಎನ್.ಬೆಳತೂರು ಗ್ರಾಮದಲ್ಲಿ ನಡೆದಿದೆ.

3-4 ದಿನಗಳ ಹಿಂದೆ ಬಂಡೀಪುರ ಅರಣ್ಯ ವ್ಯಾಪ್ತಿಯಿಂದ ರೈಲ್ವೆ ಬ್ಯಾರಿಕೇಡ್ ದಾಟಿ ಬಂದ ಮೂರು ಕಾಡಾನೆಗಳು ಭಾನುವಾರ ಮಳಲಿ ಗ್ರಾಮದ ರೈತರ ರೈತ ಪ್ರಕಾಶ್ ಎಂಬವರಿಗೆ ಸೇರಿದ ಜಮೀನಿಗೆ ನುಗ್ಗಿ ಬಾಳೆ ಫಸಲು ನಾಶ ಮಾಡಿವೆ. ಅಲ್ಲದೆ ಮತ್ತೋರ್ವ ರೈತ ಜಗಣ್ಣ ಅವರಿಗೆ ಸೇರಿದ 50ಕ್ಕೂ ಹೆಚ್ಚು ಕ್ರೇಟ್ ಟೊಮೊಟೊ ತಿಂದು ನಾಶ ಮಾಡಿವೆ. ಸೋಮವಾರ ಮುಂಜಾನೆ ಎನ್.ಬೆಳತೂರು ಗ್ರಾಮಕ್ಕೆ ಲಗ್ಗೆ ಹಾಕಿದ ಕಾಡಾನೆಗಳು ಹಸುಗಳನ್ನು ಕಟ್ಟಿ ಹಾಕುತ್ತಿದ್ದ ರಾಜು ಅವರ ಮೇಲೆ ದಾಳಿ ನಡೆಸಿವೆ. ಪರಿಣಾಮ ರಾಜು ಅವರ ಕಾಲು ಮುರಿದಿದ್ದು, ತೀವ್ರವಾಗಿ ಗಾಯಗೊಂಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಆರ್‌ಎಫ್‌ಒ ಸಿದ್ದರಾಮು ಅವರು ರೈತ ರಾಜು ಅವರನ್ನು ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಗ್ರಾಮದ ರೈತರು ದಮ್ಮನಕಟ್ಟೆ ಸಫಾರಿ ಕೇಂದ್ರಕ್ಕೆ ತೆರಳಿ ಎಸಿಎಫ್ ಮಧು ಹಾಗೂ ಆರ್‌ಎಫ್‌ಒ ಸಿದ್ದರಾಜು ಅವರನ್ನು ಭೇಟಿ ಮಾಡಿ ವನ್ಯಜೀವಿಗಳ ಹಾವಳಿ ತಡೆಗೆ ಕ್ರಮ ಕೈಗೊಳ್ಳು ವಂತೆ ಮನವಿ ಮಾಡಿದರು.

ಮನವಿ ಸ್ವೀಕರಿಸಿ ನಂತರ ಎಸಿಎಫ್ ಮಧು ಮಾತನಾಡಿ, ಆನೆ ದಾಳಿಯಿಂದ ಗಾಯಗೊಂಡಿರುವ ರೈತ ರಾಜು ಅವರಿಗೆ ಚಿಕಿತ್ಸೆ ಕೊಡಿಸುವುದಾಗಿ ತಿಳಿಸಿದರು. ಅಲ್ಲದೆ ಆನೆ ದಾಳಿಯಿಂದ ನಾಶವಾಗಿರುವ ಫಸಲಿಗೆ ಸರ್ಕಾರದ ವತಿಯಿಂದ ಪರಿಹಾರ ಕೊಡಿಸುವ ಭರವಸೆ ನೀಡಿ, ಆನೆ ಓಡಿಸುವುದಕ್ಕೆ ವಿಶೇಷ ಆನೆ ಕಾವಲು ಕಾರ್ಯಪಡೆ ನೇಮಿಸಲಾಗುವುದು ಎಂದರು.

ಈ ವೇಳೆ ಶುಂಠಿ ಕೂಲಿ ಕಾರ್ಮಿಕರ ಸಂಘದ ಅಧ್ಯಕ್ಷ ಸುಂದರ, ತಿಮ್ಮಯ್ಯ, ಪ್ರವೀಣ, ಎಜೂರ, ಸೋಮೇಶ್, ಶಿವಪ್ಪ, ಲಕ್ಷ್ಮಣ, ಮರಿಲಿಂಗಯ್ಯ, ನಾಗಯ್ಯ, ಪ್ರಕಾಶ್, ಶಿವಕುಮಾರ್, ಲೋಕೇಶ್, ರಾಜು, ಬಾಣಯ್ಯ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

39 mins ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

4 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

8 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

10 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

11 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

12 hours ago