ಮೈಸೂರು

ಕೆಐಎಡಿಬಿ ವಿರುದ್ಧ ರೈತರ ಆಕ್ರೋಶ: ಅಹೋರಾತ್ರಿ ಅನಿರ್ದಿಷ್ಟಾವಧಿ ಪ್ರತಿಭಟನೆ

ಮೈಸೂರು: ಭೂಮಿ ಕಳೆದುಕೊಂಡ ರೈತರಿಗೆ ಉದ್ಯೋಗ ಕೊಡಿಸಲು ವಿಫಲವಾದ ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಕೆಐಎಡಿಬಿಯ ವಿರುದ್ಧ ಇಂದಿನಿಂದ(ಸೆ.4) ಕೆಂಪಿಸಿದ್ದನಹುಂಡಿ ‌ರೈತರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಯುತ್ತಿದೆ.

ವರುಣಾ ಕ್ಷೇತ್ರದ ಕೆಂಪಿಸಿದ್ದನಹುಂಡಿ ಗ್ರಾಮದ ರೈತರ ಭೂಮಿಯನ್ನು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆಂದು ಭೂ ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ರೈತರ ಕುಟುಂಬದ ಸದಸ್ಯರಿಗೆ ಕಾರ್ಖಾನೆಗಳಲ್ಲಿ ಖಾಯಂ ಕೆಲಸ ನೀಡುವುದಾಗಿ ತಿಳಿಸಲಾಗಿತ್ತು. ಆದರೆ ಕಾರ್ಖಾನೆಗಳು ಉದ್ಯೋಗವನ್ನು ನೀಡಿರಲಿಲ್ಲ. ರೈತರ ಹಲವಾರು ಹೋರಾಟಗಳ ನಂತರ, ಜಿಲ್ಲಾಧಿಕಾರಿಗಳು ಈ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಜಿಲ್ಲಾ ಕೈಗಾರಿಕೆಗಳ ಕೇಂದ್ರದ ಜಂಟಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಒಂದು ಜಿಲ್ಲಾಮಟ್ಟದ ಸಮಿತಿಯನ್ನು ರಚನೆ ಮಾಡಿದರು. ಈ ಸಮಿತಿಯ ಶಿಫರಾಸ್ಸಿನಂತೆ, ಉದ್ಯೋಗ ನೀಡಬೇಕೆಂದು ಕೆಲವು ಕೈಗಾರಿಕೆಗಳಿಗೆ ಕೆಐಎಡಿಬಿಯ ಅಧಿಕಾರಿಗಳು ಪತ್ರವನ್ನು ನೀಡಿದ್ದಾರೆ. ಆದರೆ ಈ ಪತ್ರಗಳಿಗೆ ಕಾರ್ಖಾನೆಗಳು ಸ್ಪಂದಿಸುತ್ತಿಲ್ಲ ಎಂದು ಪ್ರತಿಭಟನಕಾರರು ದೂರಿದರು.

ರೈತರಿಂದ ಭೂಮಿಯನ್ನು ಪಡೆದು ಕೈಗಾರಿಕೆಗಳಿಗೆ ನೀಡಿರುವ ಕೆಐಎಡಿಬಿಯ ಅಧಿಕಾರಿಗಳು ರೈತರ ಮಕ್ಕಳಿಗೆ ಕೆಲಸ ಕೊಡಿಸಬೇಕೆಂದು 2024ರ ಆಗಸ್ಟ್‌ 29ರಂದು ಕೆಐಎಡಿಬಿಯ ಕಚೇರಿಯ ಮುಂದೆ ಅನಿರ್ಧಿಷ್ಟಾವಧಿ ಹೋರಾಟವನ್ನು ಸಹ ಮಾಡಲಾಗಿತ್ತು. ಪ್ರತಿಭಟನಾ ಸ್ಥಳಕ್ಕೆ ಬಂದ ಕೆಐಎಡಿಬಿಯ ಅಧಿಕಾರಿಗಳು 2024ಸೆಪ್ಟಂಬರ್‌ 4 ರಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ ರೈತರಿಗೆ ಕೆಲಸ ನೀಡಬೇಕಿರುವ ಕಾರ್ಖಾನೆಗಳ ಪ್ರತಿನಿಧಿಗಳ ಸಭೆಯನ್ನು ನಡೆಸಿ ಉದ್ಯೋಗ ಕೊಡಿಸುವುದಾಗಿ ತಿಳಿಸಿದ್ದರು. ಹೀಗಾಗಿ ಅಂದಿನ ಪ್ರತಿಭಟನೆಯನ್ನು ವಾಪಾಸ್ ತೆಗೆದುಕೊಳ್ಳಲಾಗಿತ್ತು. ಆದರೆ ಇಂದಿನ ಸಭೆಯಲ್ಲಿ, ಭೂಮಿ ನೀಡಿದ ರೈತರ ಮಕ್ಕಳಿಗೆ ಉದ್ಯೋಗ ನೀಡುವ ಬಗ್ಗೆ ಯಾವುದೇ ತಿರ್ಮಾನವಾಗಲಿಲ್ಲ. ಹೀಗಾಗಿ, ರೈತರು ನ್ಯಾಯ ಸಿಗುವವರೆಗೂ ರೈತನಾಯಕರ ನೇತೃತ್ವದಲ್ಲಿ ಜಂಟಿ ನಿರ್ದೇಶಕರ ಕಛೇರಿಯ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದ್ದಾರೆ.

ಪ್ರತಿಭಟನೆಯಲ್ಲಿ ರೈತನಾಯಕರಾದ ಬೊಕ್ಕಹಳ್ಳಿ ನಂಜುಂಡಸ್ವಾಮಿ, ಎಐಕೆಕೆಎಂಎಸ್ ರೈತ ಸಂಘಟನೆಯ ಜಿಲ್ಲಾ ಸಂಚಾಲಕರಾದ ಬಸವರಾಜು ಎಚ್.ಎಂ, ರೈತರಾದ ಉಮೇಶ್, ಮಂಜು, ರವಿ, ಮಧು ಹಾಗೆಯೇ ಹೂವಮ್ಮ, ಮಂಜುಳಾ, ಶಿವಮ್ಮ ನಾಗಮ್ಮ ಸೇರಿದಂತೆ ಹಲವಾರು ರೈತರು ಭಾಗವಹಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶಿವಾನಂದಪುರಿ ಶ್ರೀಗಳಿಗೆ ಕನಕ ಭವನ ನಿರ್ವಹಣೆ ಹೊಣೆ

ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…

6 mins ago

ರಿಂಗ್ ರಸ್ತೆಯಲ್ಲಿ ಸಿಗ್ನಲ್ ಲೈಟ್‌ಗಳ ಅಳವಡಿಕೆ

೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…

10 mins ago

ಹುಲಿ ಸೆರೆಗೆ ಬಂತು ಥರ್ಮಲ್ ಡ್ರೋನ್‌

ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…

15 mins ago

ಕೃಷಿ ಮೇಳಕ್ಕೆ 10 ಲಕ್ಷ ಜನ ಭೇಟಿ

ಹೇಮಂತ್‌ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ  ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…

20 mins ago

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ಮಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

10 hours ago