ಮೈಸೂರು

ಕೆಐಎಡಿಬಿ ವಿರುದ್ಧ ರೈತರ ಆಕ್ರೋಶ: ಅಹೋರಾತ್ರಿ ಅನಿರ್ದಿಷ್ಟಾವಧಿ ಪ್ರತಿಭಟನೆ

ಮೈಸೂರು: ಭೂಮಿ ಕಳೆದುಕೊಂಡ ರೈತರಿಗೆ ಉದ್ಯೋಗ ಕೊಡಿಸಲು ವಿಫಲವಾದ ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಕೆಐಎಡಿಬಿಯ ವಿರುದ್ಧ ಇಂದಿನಿಂದ(ಸೆ.4) ಕೆಂಪಿಸಿದ್ದನಹುಂಡಿ ‌ರೈತರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಯುತ್ತಿದೆ.

ವರುಣಾ ಕ್ಷೇತ್ರದ ಕೆಂಪಿಸಿದ್ದನಹುಂಡಿ ಗ್ರಾಮದ ರೈತರ ಭೂಮಿಯನ್ನು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆಂದು ಭೂ ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ರೈತರ ಕುಟುಂಬದ ಸದಸ್ಯರಿಗೆ ಕಾರ್ಖಾನೆಗಳಲ್ಲಿ ಖಾಯಂ ಕೆಲಸ ನೀಡುವುದಾಗಿ ತಿಳಿಸಲಾಗಿತ್ತು. ಆದರೆ ಕಾರ್ಖಾನೆಗಳು ಉದ್ಯೋಗವನ್ನು ನೀಡಿರಲಿಲ್ಲ. ರೈತರ ಹಲವಾರು ಹೋರಾಟಗಳ ನಂತರ, ಜಿಲ್ಲಾಧಿಕಾರಿಗಳು ಈ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಜಿಲ್ಲಾ ಕೈಗಾರಿಕೆಗಳ ಕೇಂದ್ರದ ಜಂಟಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಒಂದು ಜಿಲ್ಲಾಮಟ್ಟದ ಸಮಿತಿಯನ್ನು ರಚನೆ ಮಾಡಿದರು. ಈ ಸಮಿತಿಯ ಶಿಫರಾಸ್ಸಿನಂತೆ, ಉದ್ಯೋಗ ನೀಡಬೇಕೆಂದು ಕೆಲವು ಕೈಗಾರಿಕೆಗಳಿಗೆ ಕೆಐಎಡಿಬಿಯ ಅಧಿಕಾರಿಗಳು ಪತ್ರವನ್ನು ನೀಡಿದ್ದಾರೆ. ಆದರೆ ಈ ಪತ್ರಗಳಿಗೆ ಕಾರ್ಖಾನೆಗಳು ಸ್ಪಂದಿಸುತ್ತಿಲ್ಲ ಎಂದು ಪ್ರತಿಭಟನಕಾರರು ದೂರಿದರು.

ರೈತರಿಂದ ಭೂಮಿಯನ್ನು ಪಡೆದು ಕೈಗಾರಿಕೆಗಳಿಗೆ ನೀಡಿರುವ ಕೆಐಎಡಿಬಿಯ ಅಧಿಕಾರಿಗಳು ರೈತರ ಮಕ್ಕಳಿಗೆ ಕೆಲಸ ಕೊಡಿಸಬೇಕೆಂದು 2024ರ ಆಗಸ್ಟ್‌ 29ರಂದು ಕೆಐಎಡಿಬಿಯ ಕಚೇರಿಯ ಮುಂದೆ ಅನಿರ್ಧಿಷ್ಟಾವಧಿ ಹೋರಾಟವನ್ನು ಸಹ ಮಾಡಲಾಗಿತ್ತು. ಪ್ರತಿಭಟನಾ ಸ್ಥಳಕ್ಕೆ ಬಂದ ಕೆಐಎಡಿಬಿಯ ಅಧಿಕಾರಿಗಳು 2024ಸೆಪ್ಟಂಬರ್‌ 4 ರಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ ರೈತರಿಗೆ ಕೆಲಸ ನೀಡಬೇಕಿರುವ ಕಾರ್ಖಾನೆಗಳ ಪ್ರತಿನಿಧಿಗಳ ಸಭೆಯನ್ನು ನಡೆಸಿ ಉದ್ಯೋಗ ಕೊಡಿಸುವುದಾಗಿ ತಿಳಿಸಿದ್ದರು. ಹೀಗಾಗಿ ಅಂದಿನ ಪ್ರತಿಭಟನೆಯನ್ನು ವಾಪಾಸ್ ತೆಗೆದುಕೊಳ್ಳಲಾಗಿತ್ತು. ಆದರೆ ಇಂದಿನ ಸಭೆಯಲ್ಲಿ, ಭೂಮಿ ನೀಡಿದ ರೈತರ ಮಕ್ಕಳಿಗೆ ಉದ್ಯೋಗ ನೀಡುವ ಬಗ್ಗೆ ಯಾವುದೇ ತಿರ್ಮಾನವಾಗಲಿಲ್ಲ. ಹೀಗಾಗಿ, ರೈತರು ನ್ಯಾಯ ಸಿಗುವವರೆಗೂ ರೈತನಾಯಕರ ನೇತೃತ್ವದಲ್ಲಿ ಜಂಟಿ ನಿರ್ದೇಶಕರ ಕಛೇರಿಯ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದ್ದಾರೆ.

ಪ್ರತಿಭಟನೆಯಲ್ಲಿ ರೈತನಾಯಕರಾದ ಬೊಕ್ಕಹಳ್ಳಿ ನಂಜುಂಡಸ್ವಾಮಿ, ಎಐಕೆಕೆಎಂಎಸ್ ರೈತ ಸಂಘಟನೆಯ ಜಿಲ್ಲಾ ಸಂಚಾಲಕರಾದ ಬಸವರಾಜು ಎಚ್.ಎಂ, ರೈತರಾದ ಉಮೇಶ್, ಮಂಜು, ರವಿ, ಮಧು ಹಾಗೆಯೇ ಹೂವಮ್ಮ, ಮಂಜುಳಾ, ಶಿವಮ್ಮ ನಾಗಮ್ಮ ಸೇರಿದಂತೆ ಹಲವಾರು ರೈತರು ಭಾಗವಹಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

2 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

2 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌| ಮೇ 31 ಭಾನುವಾರ

2 hours ago

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

15 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

17 hours ago