ಮೈಸೂರು: ಭೂಮಿ ಕಳೆದುಕೊಂಡ ರೈತರಿಗೆ ಉದ್ಯೋಗ ಕೊಡಿಸಲು ವಿಫಲವಾದ ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಕೆಐಎಡಿಬಿಯ ವಿರುದ್ಧ ಇಂದಿನಿಂದ(ಸೆ.4) ಕೆಂಪಿಸಿದ್ದನಹುಂಡಿ ರೈತರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಯುತ್ತಿದೆ.
ವರುಣಾ ಕ್ಷೇತ್ರದ ಕೆಂಪಿಸಿದ್ದನಹುಂಡಿ ಗ್ರಾಮದ ರೈತರ ಭೂಮಿಯನ್ನು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆಂದು ಭೂ ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ರೈತರ ಕುಟುಂಬದ ಸದಸ್ಯರಿಗೆ ಕಾರ್ಖಾನೆಗಳಲ್ಲಿ ಖಾಯಂ ಕೆಲಸ ನೀಡುವುದಾಗಿ ತಿಳಿಸಲಾಗಿತ್ತು. ಆದರೆ ಕಾರ್ಖಾನೆಗಳು ಉದ್ಯೋಗವನ್ನು ನೀಡಿರಲಿಲ್ಲ. ರೈತರ ಹಲವಾರು ಹೋರಾಟಗಳ ನಂತರ, ಜಿಲ್ಲಾಧಿಕಾರಿಗಳು ಈ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಜಿಲ್ಲಾ ಕೈಗಾರಿಕೆಗಳ ಕೇಂದ್ರದ ಜಂಟಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಒಂದು ಜಿಲ್ಲಾಮಟ್ಟದ ಸಮಿತಿಯನ್ನು ರಚನೆ ಮಾಡಿದರು. ಈ ಸಮಿತಿಯ ಶಿಫರಾಸ್ಸಿನಂತೆ, ಉದ್ಯೋಗ ನೀಡಬೇಕೆಂದು ಕೆಲವು ಕೈಗಾರಿಕೆಗಳಿಗೆ ಕೆಐಎಡಿಬಿಯ ಅಧಿಕಾರಿಗಳು ಪತ್ರವನ್ನು ನೀಡಿದ್ದಾರೆ. ಆದರೆ ಈ ಪತ್ರಗಳಿಗೆ ಕಾರ್ಖಾನೆಗಳು ಸ್ಪಂದಿಸುತ್ತಿಲ್ಲ ಎಂದು ಪ್ರತಿಭಟನಕಾರರು ದೂರಿದರು.
ರೈತರಿಂದ ಭೂಮಿಯನ್ನು ಪಡೆದು ಕೈಗಾರಿಕೆಗಳಿಗೆ ನೀಡಿರುವ ಕೆಐಎಡಿಬಿಯ ಅಧಿಕಾರಿಗಳು ರೈತರ ಮಕ್ಕಳಿಗೆ ಕೆಲಸ ಕೊಡಿಸಬೇಕೆಂದು 2024ರ ಆಗಸ್ಟ್ 29ರಂದು ಕೆಐಎಡಿಬಿಯ ಕಚೇರಿಯ ಮುಂದೆ ಅನಿರ್ಧಿಷ್ಟಾವಧಿ ಹೋರಾಟವನ್ನು ಸಹ ಮಾಡಲಾಗಿತ್ತು. ಪ್ರತಿಭಟನಾ ಸ್ಥಳಕ್ಕೆ ಬಂದ ಕೆಐಎಡಿಬಿಯ ಅಧಿಕಾರಿಗಳು 2024ಸೆಪ್ಟಂಬರ್ 4 ರಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ ರೈತರಿಗೆ ಕೆಲಸ ನೀಡಬೇಕಿರುವ ಕಾರ್ಖಾನೆಗಳ ಪ್ರತಿನಿಧಿಗಳ ಸಭೆಯನ್ನು ನಡೆಸಿ ಉದ್ಯೋಗ ಕೊಡಿಸುವುದಾಗಿ ತಿಳಿಸಿದ್ದರು. ಹೀಗಾಗಿ ಅಂದಿನ ಪ್ರತಿಭಟನೆಯನ್ನು ವಾಪಾಸ್ ತೆಗೆದುಕೊಳ್ಳಲಾಗಿತ್ತು. ಆದರೆ ಇಂದಿನ ಸಭೆಯಲ್ಲಿ, ಭೂಮಿ ನೀಡಿದ ರೈತರ ಮಕ್ಕಳಿಗೆ ಉದ್ಯೋಗ ನೀಡುವ ಬಗ್ಗೆ ಯಾವುದೇ ತಿರ್ಮಾನವಾಗಲಿಲ್ಲ. ಹೀಗಾಗಿ, ರೈತರು ನ್ಯಾಯ ಸಿಗುವವರೆಗೂ ರೈತನಾಯಕರ ನೇತೃತ್ವದಲ್ಲಿ ಜಂಟಿ ನಿರ್ದೇಶಕರ ಕಛೇರಿಯ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದ್ದಾರೆ.
ಪ್ರತಿಭಟನೆಯಲ್ಲಿ ರೈತನಾಯಕರಾದ ಬೊಕ್ಕಹಳ್ಳಿ ನಂಜುಂಡಸ್ವಾಮಿ, ಎಐಕೆಕೆಎಂಎಸ್ ರೈತ ಸಂಘಟನೆಯ ಜಿಲ್ಲಾ ಸಂಚಾಲಕರಾದ ಬಸವರಾಜು ಎಚ್.ಎಂ, ರೈತರಾದ ಉಮೇಶ್, ಮಂಜು, ರವಿ, ಮಧು ಹಾಗೆಯೇ ಹೂವಮ್ಮ, ಮಂಜುಳಾ, ಶಿವಮ್ಮ ನಾಗಮ್ಮ ಸೇರಿದಂತೆ ಹಲವಾರು ರೈತರು ಭಾಗವಹಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…