ಕಬ್ಬು ಬೆಳೆಗಾರರ ಸಂಘದಿಂದ ರಾಜ್ಯಾದ್ಯಂತ ನಾಲ್ಕು ಗಂಟೆ ಹೆದ್ದಾರಿ ತಡೆ ಚಳುವಳಿ
ಮೈಸೂರು: ಕಬ್ಬಿನ ದರ ನಿಗದಿ ವಿಳಂಬ ವಿರೋಧಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಗುರುವಾರ ಮೈಸೂರು ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಯಿತು.
ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಮೈಸೂರು ಎಪಿಎಂಸಿ ರಿಂಗ್ ರಸ್ತೆ ವೃತ್ತದಲ್ಲಿ ಹೆದ್ದಾರಿ ತಡೆ ನಡೆಸಿದ ಬೆಳೆಗಾರರು, ಉರುಳು ಸೇವೆ ಮಾಡಿ ಪ್ರತಿಭಟನೆ ದಾಖಲಿಸಿದರು.
ಪೊಲೀಸರು ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಅನುವು ಮಾಡಿ ಕೊಟ್ಟಿದ್ದರಿಂದ ಸಂಚಾರದಲ್ಲಿ ಹೆಚ್ಚೇನೂ ವ್ಯತ್ಯಯವಾಗಲಿಲ್ಲ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಕ್ಕರೆ ಸಚಿವರು ಕಾರ್ಖಾನೆ ಮಾಲೀಕರೊಂದಿಗೆ ನಾಲ್ಕು ಸಭೆಗಳನ್ನು ನಡೆಸಿದರೂ ಎಫ್ ಆರ್ ಪಿ ನಿಗದಿ ಪಡಿಸಲು ಸರಕಾರ ವಿಫಲವಾಗಿದೆ. ಸಕ್ಕರೆ ಕಾರ್ಖಾನೆ ಮಾಲೀಕರ ಲಾಬಿಗೆ ರಾಜ್ಯ ಸರಕಾರ ಮಣಿಯುತ್ತಿದೆ, ಸರಕಾರ ಪ್ರತಿ ಟನ್ ಕಬ್ಬಿಗೆ ಕನಿಷ್ಠ 3,500 ರೂ. ಬೆಲೆ ನಿಗದಿ ಮಾಡಬೇಕು ಎಂದು ಅಧ್ಯಕ್ಷ ಕುರುಬೂರು ಶಾಂತಕುಮಾರ್ ಆಗ್ರಹಿಸಿದರು.
ಕಳೆದ ನಾಲ್ಕು ತಿಂಗಳಿಂದ ರೈತರು ಧರಣಿ ನಡೆಸುತ್ತಿದ್ದರೂ ಈ ವರೆಗೂ ಸರಕಾರದ ಯಾವುದೇ ನಿರ್ಧಾರಗಳೂ ಕಾರ್ಯರೂಪಕ್ಕೆ ಬಂದಿಲ್ಲ. ಗೃಹ ಸಚಿವರು ಮತ್ತು ಸಂಸದರು ಅಡಿಕೆ ಬೆಳೆಗಾರರ ನಿಯೋಗವನ್ನು ದಿಲ್ಲಿಗೆ ಕೊಂಡೊಯ್ಯಬಹುದಾದರೆ, ಕಬ್ಬು ಬೆಳೆಗಾರರನ್ನೇಕೆ ನಿರ್ಲಕ್ಷಿಸುತ್ತಿದ್ದಾರೆ? ಎಂದು ಪ್ರಶ್ನಿಸಿದ ಅವರು 30 ಲಕ್ಷ ಕಬ್ಬು ಬೆಳೆಗಾರರ ಬೆಂಬಲಕ್ಕೆ ಶಾಸಕರು, ಸಂಸದರು, ಸಚಿವರು ನಿಲ್ಲುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೆರಡು ದಿನಗಳೊಳಗೆ ದರ ಪ್ರಕಟಿಸದಿದ್ದರೆ ಅಕ್ಟೋಬರ್ 31 ರಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಂಘ ಪ್ರತಿಭಟನೆ ನಡೆಸಲಿದೆ ಎಂದವರು ಎಚ್ಚರಿಸಿದರು.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…