ಕಬ್ಬು ಬೆಳೆಗಾರರ ಸಂಘದಿಂದ ರಾಜ್ಯಾದ್ಯಂತ ನಾಲ್ಕು ಗಂಟೆ ಹೆದ್ದಾರಿ ತಡೆ ಚಳುವಳಿ
ಮೈಸೂರು: ಕಬ್ಬಿನ ದರ ನಿಗದಿ ವಿಳಂಬ ವಿರೋಧಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಗುರುವಾರ ಮೈಸೂರು ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಯಿತು.
ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಮೈಸೂರು ಎಪಿಎಂಸಿ ರಿಂಗ್ ರಸ್ತೆ ವೃತ್ತದಲ್ಲಿ ಹೆದ್ದಾರಿ ತಡೆ ನಡೆಸಿದ ಬೆಳೆಗಾರರು, ಉರುಳು ಸೇವೆ ಮಾಡಿ ಪ್ರತಿಭಟನೆ ದಾಖಲಿಸಿದರು.
ಪೊಲೀಸರು ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಅನುವು ಮಾಡಿ ಕೊಟ್ಟಿದ್ದರಿಂದ ಸಂಚಾರದಲ್ಲಿ ಹೆಚ್ಚೇನೂ ವ್ಯತ್ಯಯವಾಗಲಿಲ್ಲ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಕ್ಕರೆ ಸಚಿವರು ಕಾರ್ಖಾನೆ ಮಾಲೀಕರೊಂದಿಗೆ ನಾಲ್ಕು ಸಭೆಗಳನ್ನು ನಡೆಸಿದರೂ ಎಫ್ ಆರ್ ಪಿ ನಿಗದಿ ಪಡಿಸಲು ಸರಕಾರ ವಿಫಲವಾಗಿದೆ. ಸಕ್ಕರೆ ಕಾರ್ಖಾನೆ ಮಾಲೀಕರ ಲಾಬಿಗೆ ರಾಜ್ಯ ಸರಕಾರ ಮಣಿಯುತ್ತಿದೆ, ಸರಕಾರ ಪ್ರತಿ ಟನ್ ಕಬ್ಬಿಗೆ ಕನಿಷ್ಠ 3,500 ರೂ. ಬೆಲೆ ನಿಗದಿ ಮಾಡಬೇಕು ಎಂದು ಅಧ್ಯಕ್ಷ ಕುರುಬೂರು ಶಾಂತಕುಮಾರ್ ಆಗ್ರಹಿಸಿದರು.
ಕಳೆದ ನಾಲ್ಕು ತಿಂಗಳಿಂದ ರೈತರು ಧರಣಿ ನಡೆಸುತ್ತಿದ್ದರೂ ಈ ವರೆಗೂ ಸರಕಾರದ ಯಾವುದೇ ನಿರ್ಧಾರಗಳೂ ಕಾರ್ಯರೂಪಕ್ಕೆ ಬಂದಿಲ್ಲ. ಗೃಹ ಸಚಿವರು ಮತ್ತು ಸಂಸದರು ಅಡಿಕೆ ಬೆಳೆಗಾರರ ನಿಯೋಗವನ್ನು ದಿಲ್ಲಿಗೆ ಕೊಂಡೊಯ್ಯಬಹುದಾದರೆ, ಕಬ್ಬು ಬೆಳೆಗಾರರನ್ನೇಕೆ ನಿರ್ಲಕ್ಷಿಸುತ್ತಿದ್ದಾರೆ? ಎಂದು ಪ್ರಶ್ನಿಸಿದ ಅವರು 30 ಲಕ್ಷ ಕಬ್ಬು ಬೆಳೆಗಾರರ ಬೆಂಬಲಕ್ಕೆ ಶಾಸಕರು, ಸಂಸದರು, ಸಚಿವರು ನಿಲ್ಲುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೆರಡು ದಿನಗಳೊಳಗೆ ದರ ಪ್ರಕಟಿಸದಿದ್ದರೆ ಅಕ್ಟೋಬರ್ 31 ರಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಂಘ ಪ್ರತಿಭಟನೆ ನಡೆಸಲಿದೆ ಎಂದವರು ಎಚ್ಚರಿಸಿದರು.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…