ಮೈಸೂರು

ಕಬ್ಬು ದರ ನಿಗದಿ ವಿಳಂಬ ಖಂಡಿಸಿ ಮೈಸೂರು- ಊಟಿ ರಸ್ತೆ ಬಂದ್

ಕಬ್ಬು ಬೆಳೆಗಾರರ ಸಂಘದಿಂದ ರಾಜ್ಯಾದ್ಯಂತ ನಾಲ್ಕು ಗಂಟೆ ಹೆದ್ದಾರಿ ತಡೆ ಚಳುವಳಿ

ಮೈಸೂರು: ಕಬ್ಬಿನ ದರ ನಿಗದಿ ವಿಳಂಬ ವಿರೋಧಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಗುರುವಾರ ಮೈಸೂರು ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಯಿತು.
ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಮೈಸೂರು ಎಪಿಎಂಸಿ ರಿಂಗ್‌ ರಸ್ತೆ ವೃತ್ತದಲ್ಲಿ ಹೆದ್ದಾರಿ ತಡೆ ನಡೆಸಿದ ಬೆಳೆಗಾರರು, ಉರುಳು ಸೇವೆ ಮಾಡಿ ಪ್ರತಿಭಟನೆ ದಾಖಲಿಸಿದರು.
ಪೊಲೀಸರು ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಅನುವು ಮಾಡಿ ಕೊಟ್ಟಿದ್ದರಿಂದ ಸಂಚಾರದಲ್ಲಿ ಹೆಚ್ಚೇನೂ ವ್ಯತ್ಯಯವಾಗಲಿಲ್ಲ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಕ್ಕರೆ ಸಚಿವರು ಕಾರ್ಖಾನೆ ಮಾಲೀಕರೊಂದಿಗೆ ನಾಲ್ಕು ಸಭೆಗಳನ್ನು ನಡೆಸಿದರೂ ಎಫ್ ಆರ್ ಪಿ ನಿಗದಿ ಪಡಿಸಲು ಸರಕಾರ ವಿಫಲವಾಗಿದೆ. ಸಕ್ಕರೆ ಕಾರ್ಖಾನೆ ಮಾಲೀಕರ ಲಾಬಿಗೆ ರಾಜ್ಯ ಸರಕಾರ ಮಣಿಯುತ್ತಿದೆ, ಸರಕಾರ ಪ್ರತಿ ಟನ್ ಕಬ್ಬಿಗೆ ಕನಿಷ್ಠ 3,500 ರೂ. ಬೆಲೆ ನಿಗದಿ ಮಾಡಬೇಕು ಎಂದು ಅಧ್ಯಕ್ಷ ಕುರುಬೂರು ಶಾಂತಕುಮಾರ್ ಆಗ್ರಹಿಸಿದರು.

ಕಳೆದ ನಾಲ್ಕು ತಿಂಗಳಿಂದ ರೈತರು ಧರಣಿ ನಡೆಸುತ್ತಿದ್ದರೂ ಈ ವರೆಗೂ ಸರಕಾರದ ಯಾವುದೇ ನಿರ್ಧಾರಗಳೂ ಕಾರ್ಯರೂಪಕ್ಕೆ ಬಂದಿಲ್ಲ. ಗೃಹ ಸಚಿವರು ಮತ್ತು ಸಂಸದರು ಅಡಿಕೆ ಬೆಳೆಗಾರರ ನಿಯೋಗವನ್ನು ದಿಲ್ಲಿಗೆ ಕೊಂಡೊಯ್ಯಬಹುದಾದರೆ, ಕಬ್ಬು ಬೆಳೆಗಾರರನ್ನೇಕೆ ನಿರ್ಲಕ್ಷಿಸುತ್ತಿದ್ದಾರೆ? ಎಂದು ಪ್ರಶ್ನಿಸಿದ ಅವರು 30 ಲಕ್ಷ ಕಬ್ಬು ಬೆಳೆಗಾರರ ಬೆಂಬಲಕ್ಕೆ ಶಾಸಕರು, ಸಂಸದರು, ಸಚಿವರು ನಿಲ್ಲುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೆರಡು ದಿನಗಳೊಳಗೆ ದರ ಪ್ರಕಟಿಸದಿದ್ದರೆ ಅಕ್ಟೋಬರ್ 31 ರಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಂಘ ಪ್ರತಿಭಟನೆ ನಡೆಸಲಿದೆ ಎಂದವರು ಎಚ್ಚರಿಸಿದರು.

andolana

Recent Posts

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

1 hour ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

1 hour ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

6 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

6 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

6 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

6 hours ago