Farmers protest against irregularities in the dairy sector
ಮಲ್ಕುಂಡಿ : ನಂಜನಗೂಡು ತಾಲ್ಲೂಕಿನ ತರಗನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಸಾಮೂಹಿಕ ನಾಯಕತ್ವ ಹಸಿರು ಸೇನೆಯ ರೈತ ಸಂಘದ ಮುಖಂಡರು ಡೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ಗ್ರಾಮದ ಮುಖಂಡ ಕೆ.ಟಿ.ನಟರಾಜ್ ಮಾತನಾಡಿ, ಡೇರಿ ಆಡಳಿತ ಮಂಡಳಿಯು ಹಾಲು ಉತ್ಪಾದಕರಿಗೆ ಯಾವುದೇ ಬೋನಸ್ ನೀಡದೆ ಸುಮಾರು 2 ಕೋಟಿ ರೂ. ಲೂಟಿ ಮಾಡಿದೆ. 20 ವರ್ಷಗಳಿಂದ ಯಾವುದೇ ಲೆಕ್ಕ ಪತ್ರಗಳನ್ನು ನೀಡದೆ ಹಾಲು ಉತ್ಪಾದಕರಿಗೆ ವಂಚನೆ ಮಾಡಿದೆ. ಈ ಬಗ್ಗೆ ತನಿಖೆ ನಡೆಸಲು ಒಕ್ಕೂಟಕ್ಕೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ದೂರಿದರು.
ಈಗಲಾದರೂ ಒಕ್ಕೂಟದ ಅಧಿಕಾರಿಗಳು ಇತ್ತ ಗಮನಹರಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಸಾಮೂಹಿಕ ನಾಯಕತ್ವದ ಹಸಿರು ಸೇನೆಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ಮಂಜು ಕಿರಣ್ ಮಾತನಾಡಿ, ಗ್ರಾಮದಲ್ಲಿ ರೈತರು ಕಷ್ಟ ಪಟ್ಟು ಹಸುಗಳನ್ನು ಸಾಕಿ ಡೇರಿಗೆ ಹಾಲು ಹಾಕುತ್ತಿದ್ದು, ಅವರ ಹಣ ಲೂಟಿ ಮಾಡುವುದು ಸರಿಯಲ್ಲ. ಆಡಳಿತ ಮಂಡಳಿಯನ್ನು ತಕ್ಷಣ ವಜಾಗೊಳಿಸಿ, ಸೂಕ್ತ ಕ್ರಮ ಕೈ ಗೊಳ್ಳದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬಸವರಾಜ್, ಶಿವಪ್ಪ, ರೈತ ಸಂಘದ ಗ್ರಾಮ ಘಟಕದ ಅಧ್ಯಕ್ಷ ರಾಜಪ್ಪ, ಬಸವರಾಜಪ್ಪ, ಚನ್ನಪ್ಪಾಜಿನಾಯಕ, ಶಿವಕುಮಾರ್,ಬಸವರಾಜ್, ಗಿರೀಶ್, ಮಹೇಶ್, ಹರೀಶ್, ಕುಮಾರ್, ಚಾಮರಾಜು, ನಂಜುಂಡ, ನಾಗರಾಜು, ಹಲವಾರು ರೈತರು ಹಾಜರಿದ್ದರು.
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್ ಎ ತೊಯ್ಬಾ ಉಗ್ರನನ್ನು ಭದ್ರತಾ…
ಹಾಸನ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಭಾರೀ ಗಾಳಿಯೊಂದಿಗೆ ಮಳೆಯಾಗುತ್ತಿದೆ. ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ 16,593…
ಬೆಂಗಳೂರು: ಕರ್ನಾಟಕದ ಮಲೆನಾಡು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ ಕೆಲವು ದಿನಗಳು ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ…
ವಯನಾಡು: ಬೆಳಿಗ್ಗೆಯಿಂದಲೇ ವಯನಾಡಿನಲ್ಲಿ ಮಳೆಯ ನಡುವೆ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ನಾಪತ್ತೆಯಾಗಿರುವ ಐವರಿಗೆ ಶೋಧ ಕಾರ್ಯ ಕಾರ್ಯ ನಡೆಯುತ್ತಿದೆ. ಮೆಪ್ಪಾಡಿ…
ಮಂಡ್ಯ: ಕಾವೇರಿ ಜಲಾನಯದ ಪ್ರದೇಶ ಹಾಗೂ ಕೊಡಗಿನಲ್ಲಿ ಮುಂಗಾರು ಮಳೆ ಚುರುಕುಗೊಂಡ ಹಿನ್ನೆಲೆಯಲ್ಲಿ ಪ್ರಸಿದ್ಧ ಕೃಷ್ಣರಾಜಸಾಗರ ಜಲಾಶಯಕ್ಕೆ ನೀರಿನ ಒಳಹರಿವು…