ಮೈಸೂರು

ಬೆಳೆ ಪರಿಹಾರ ಹೆಚ್ಚಿಸುವಂತೆ ಆಗ್ರಹಿಸಿ ರೈತರ ಪ್ರತಿಭಟನೆ

ಮೈಸೂರು : ಮಳೆ, ಪ್ರವಾಹ, ಪ್ರಕೃತಿ ವಿಕೋಪಗಳಂತಹ ಸಂದರ್ಭಗಳಲ್ಲಿ ಬೆಳೆ ನಷ್ಟವಾದ ರೈತರಿಗೆ ನೀಡುತ್ತಿರುವ ಪರಿಹಾರ ಅವೈಜ್ಞಾನಿಕವಾಗಿದ್ದು, ಕೂಡಲೇ ಪರಿಹಾರ ಹೆಚ್ಚಳ ಮಾಡಬೇಕೆಂದು ಒತ್ತಾಯಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.

ನಗರದ ಡಿಸಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ನಾನಾ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮಳೆ, ಪ್ರವಾಹ, ಪ್ರಕೃತಿ ವಿಕೋಪವಾದಾಗ ಬೆಳೆ ನಷ್ಟ ಪರಿಹಾರ ನೀಡುವ ಎನ್‌ಡಿಆರ್‌ಎಫ್ ಮಾನದಂಡಕ್ಕೆ ತಿದ್ದುಪಡಿ ಮಾಡಿ ಪರಿಹಾರ ಹೆಚ್ಚಳ ಮಾಡಬೇಕು. ಪ್ರಸಕ್ತ ಇರುವ ಪರಿಹಾರ ಅವೈಜ್ಞಾನಿಕವಾಗಿದೆ. ಮಳೆ ಆಶ್ರಯದ ಬೆಳೆ ನಷ್ಟಕ್ಕೆ ಎಕರೆಗೆ ಕನಿಷ್ಠ ೨೫,೦೦೦ ರೂ., ನೀರಾವರಿ ತೋಟಗಾರಿಕೆ ಬೆಳೆಗಳಿಗೆ ಎಕರೆಗೆ ಕನಿಷ್ಠ ೪೧,೦೦೦ ರೂ., ವಾಣಿಜ್ಯ ಬೆಳೆಗಳಿಗೆ ಎಕರೆಗೆ ೬೦,೦೦೦ ರೂ.ಗಳಿಗೆ ಏರಿಕೆ ಮಾಡಬೇಕು. ಎನ್‌ಡಿಆರ್‌ಎಫ್ ಮಾನದಂಡ ಎಂಟು ವರ್ಷಗಳಿಂದ ಅವೈಜ್ಞಾನಿಕವಾಗಿದ್ದು, ಪುನರ್ ಪರಿಶೀಲನೆ ಆಗಿಲ್ಲ. ಹೀಗಾಗಿ ಕೂಡಲೇ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ನೈಋತ್ಯ ಮುಂಗಾರಿನಲ್ಲಿ ಸುಮಾರು 12.54 ಲಕ್ಷ ಹೆಕ್ಟೇರ್‌ ಬೆಳೆ ಹಾನಿ

ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕದಲ್ಲಿ ರೈತರ ಬೆಳೆ ನಷ್ಟವಾಗಿದೆ. ಕೇಂದ್ರ ಸರ್ಕಾರ ಪಂಜಾಬ್‌ಗೆ ವಿಶೇಷ ಪ್ಯಾಕೇಜ್ ನೀಡಿರುವಂತೆ ಕರ್ನಾಟಕ ರಾಜ್ಯಕ್ಕೂ ವಿಶೇಷ ಪ್ಯಾಕೇಜ್‌ನಡಿ ೫,೦೦೦ ಕೋಟಿ ರೂ. ನೀಡಬೇಕು. ಈ ಬಗ್ಗೆ ರಾಜ್ಯದ ಕೇಂದ್ರ ಸಚಿವರು ಒತ್ತಾಯಿಸಬೇಕು. ಪ್ರಸಕ್ತವಾಗಿ ಬೆಳೆ ನಷ್ಟ ಅನುಭವಿಸುತ್ತಿರುವ ರೈತರ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.

ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್, ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ಜಿಲ್ಲಾಧ್ಯಕ್ಷ ಸೋಮಶೇಖರ್, ಮುಖಂಡರಾದ ಮಾರಬಳ್ಳಿ ನೀಲಕಂಠಪ್ಪ, ಅಂಬಳೆ ಮಂಜುನಾಥ್, ಲಕ್ಷ್ಮಿಪುರ ವೆಂಕಟೇಶ್, ಕೋಟೆ ರಾಜೇಶ್, ಜಯರಾಮೇಗೌಡ, ಕಾಟೂರು ಮಹದೇವಸ್ವಾಮಿ, ಗಿರೀಶ್, ವಾಜಮಂಗಲ ನಾಗೇಂದ್ರ, ರಂಗರಾಜು, ಬಾಲು, ವರಕೂಡು ನಾಗೇಶ್, ದೇವನೂರು ವಿಜಯೇಂದ್ರ, ಮಹದೇವು, ರಾಜು, ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಭತ್ತ ಖರೀದಿ ಕೇಂದ್ರ ತೆರೆಯಲು ಒತ್ತಾಯ…

ಎರಡು ವರ್ಷಗಳ ಹಿಂದೆ ರಾಜ್ಯ ಸರ್ಕಾರ ಘೋಷಣೆ ಮಾಡಿದಂತೆ ಟನ್ ಕಬ್ಬಿಗೆ ೧೫೦ ರೂ. ಹೆಚ್ಚುವರಿ ಹಣವನ್ನು ಕಾರ್ಖಾನೆಗಳಿಂದ ರೈತರಿಗೆ ಕೊಡಿಸಬೇಕು. ಕಬ್ಬಿನ ತೂಕದಲ್ಲಿ ಮೋಸ ತಪ್ಪಿಸಲು ಸಕ್ಕರೆ ಕಾರ್ಖಾನೆ ಮುಂಭಾಗ ಸರ್ಕಾರದ ವತಿಯಿಂದ ತೂಕದ ಯಂತ್ರ ಸ್ಥಾಪಿಸಬೇಕು. ಕೃಷಿ ಬಳಕೆಗೆ ಇದ್ದ ನರೇಗಾ ಯೋಜನೆ ಸ್ಥಗಿತಗೊಂಡಿದ್ದು, ಪುನರಾರಂಭಿಸಿಬೇಕು. ಭತ್ತದ ಕನಿಷ್ಠ ಬೆಂಬಲ ಬೆಲೆ ೨,೩೬೯ ರೂ.ಗೆ ಪ್ರೋತ್ಸಾಹ ಧನ ೫೦೦ ರೂ. ನೀಡಿ (ಪ್ರತಿ ಕ್ವಿಂಟಾಲ್‌ಗೆ) ರೈತರಿಂದ ಭತ್ತ ಖರೀದಿಸಲು ರಾಜ್ಯ ಸರ್ಕಾರ ಖರೀದಿ ಕೇಂದ್ರ ತೆರೆಯಬೇಕು ಎಂದು ರೈತರು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ನಿಲ್ಲದ ಚಿನ್ನದ ನಾಗಾಲೋಟ : 1.61ಲಕ್ಷ ರೂ.ತಲುಪಿದ ಬಂಗಾರ

1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…

6 hours ago

ಯುವಕನ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…

6 hours ago

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

8 hours ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

8 hours ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

8 hours ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

9 hours ago