ಮೈಸೂರು: ರೈತರು ವೈಜ್ಞಾನಿಕ ಬೇಸಾಯ ಪದ್ಧತಿ ಅಳವಡಿಸಿಕೊಳ್ಳುವ ಮೂಲಕ ತಮ್ಮ ಬೆಳೆಗಳಲ್ಲಿ ಹೆಚ್ಚಿನ ಇಳುವರಿ ಪಡೆದು ಲಾಭ ಪಡೆಯಬಹುದಾಗಿದೆ ಎಂದು ಉಪ ಕೃಷಿ ನಿರ್ದೇಶಕ ಡಾ.ಜಿ.ಹೆಚ್.ಯೋಗೇಶ್ ತಿಳಿಸಿದರು.
ಜಿಲ್ಲಾ ಕೃಷಿ ತರಬೇತಿ ಕೇಂದ್ರ ನಾಗನಹಳ್ಳಿ ವತಿಯಿಂದ ಹಮ್ಮಿಕೊಂಡಿದ್ದ ಎರಡು ದಿನಗಳ ಎಣ್ಣೆಕಾಳು ಬೆಳೆಗಳ ಉತ್ಪಾದನಾ ತಾಂತ್ರಿಕತೆಗಳು ಮತ್ತು ಮೌಲ್ಯವರ್ಧನೆಗೆ ಇರುವ ಅವಕಾಶ ಕುರಿತ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬರಗಾಲದ ಸನ್ನಿವೇಶದಲ್ಲಿ ತೇವಾಂಶದ ಕೊರತೆ ನೀಗಿಸುವುದರ ಜೊತೆಗೆ ಉತ್ತಮ ಇಳುವರಿ ಪಡೆಯಲು ರೈತರು ಸಾವಯವ ಕೃಷಿ, ಬೆಳೆ ಪರಿವರ್ತನೆ ಮತ್ತು ಮಿಶ್ರ ಬೆಳೆ ಪದ್ದತಿಗಳನ್ನು ಅಳವಡಿಸ ಬೇಕು ಎಂದು ಹೇಳಿದರು.
ಎಣ್ಣೆಕಾಳು ಬೆಳೆಗಳಲ್ಲಿಯೂ ಸಹ ವೈಜ್ಞಾನಿಕ ಬೇಸಾಯ ಪದ್ದತಿಗಳನ್ನು ಅಳವಡಿಸಿಕೊಂಡು ಹೆಚ್ಚಿನ ಇಳುವರಿ ಪಡೆಯಬಹುದು ಎಂದರು.
ಸುತ್ತೂರು ಕೃಷಿ ವಿಜ್ಞಾನ ಕೇಂದ್ರದ ಬೇಸಾಯ ತಜ್ಞ ಡಾ.ಶ್ಯಾಮರಾಜ್ ಅವರು ವಿವಿಧ ಎಣ್ಣೆಕಾಳು ಬೆಳೆಗಳ ಸುಧಾರಿತ ತಳಿಗಳು ಮತ್ತು ಬೇಸಾಯ ಕ್ರಮಗಳ ಬಗ್ಗೆ ರೈತರಿಗೆ ತಾಂತ್ರಿಕ ಮಾಹಿತಿ ನೀಡಿದರು. ಸಹಾಯಕ ಕೃಷಿ ನಿರ್ದೇಶಕಿ ಮಮತಾ ಎಸ್.ಬಿ. ಅವರು, ಮಣ್ಣು ಮಾದರಿಗಳ ಸಂಗ್ರಹಣೆ ಮತ್ತು ಫಲಿತಾಂಶ ಆಧಾರಿತ ರಸಗೊಬ್ಬರಗಳ ಬಳಕೆ ಬಗ್ಗೆ ವಿವರಿಸಿದರು.
ರೋಗತಜ್ಞೆ ಡಾ.ಆರ್.ಎನ್. ಪುಷ್ಪ ಅವರು ಬೀಜೋಪಚಾರ, ಸಮಗ್ರ ರೋಗ-ಕೀಟ ನಿರ್ವಹಣೆ ಮತ್ತು ದಾಸ್ತಾನು ಕೀಟಗಳ ನಿರ್ವಹಣೆ ಕುರಿತು ತಾಂತ್ರಿಕ ಉಪನ್ಯಾಸ ನೀಡಿದರು. ತೆಂಗಿನ ಹಾಲಿನಿಂದ ಐಸ್ಕ್ರೀಮ್ ತಯಾರಿಕೆ ಮತ್ತು ಮೌಲ್ಯವರ್ಧನೆ ಕುರಿತು ಪ್ರಗತಿಪರ ರೈತರಾದ ಸುರೇಶ್ ಭಟ್, ಕೂರ್ಗಳ್ಳಿ, ಅನುಭವ ಹಂಚಿಕೊoಡರು.
ಎಣ್ಣೆಕಾಳು ಬೆಳೆಗಳಲ್ಲಿ ಮೌಲ್ಯವರ್ಧನೆ ಮತ್ತು ಕಲಬೆರೆಕೆ ಎಣ್ಣೆ ಕಂಡುಹಿಡಿಯುವ ವಿಧಾನಗಳ ಕುರಿತು ಮೈಸೂರು ಸಿ.ಎಫ್.ಟಿ.ಆರ್.ಐ. ಹಿರಿಯ ವಿಜ್ಣಾನಿಗಳಾದ ಡಾ.ಗೋವಿಂದರಾಜು ಕೆ. ರವರು ಪ್ರಾತ್ಯಕ್ಷತೆ ಮೂಲಕ ರೈತರಿಗೆ ತೋರಿಸಿಕೊಟ್ಟರು.
ಗಾಣದ ಮೂಲಕ ಎಣ್ಣೆ ತೆಗೆದು ಆರೋಗ್ಯ ಯುಕ್ತ ಅಡುಗೆ ಎಣ್ಣೆ ಉತ್ಪಾದನೆ ಮತ್ತು ಮಾರುಕಟ್ಟೆಗಿರುವ ಅವಕಾಶಗಳ ಕುರಿತು ಉದಯೋನ್ಮೂಖ ಉದ್ಯಮಿ ಗಿರೀಶ್ ಅನುಭವ ಹಂಚಿಕೊoಡರು.
ತರಬೇತಿ ಸಂಯೋಜಕ ಹಾಗೂ ಕೃಷಿ ಅಧಿಕಾರಿ ಶಿಲ್ಪ ಜಿ.ಕೆ. ಅವರು 2024 ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಫಸಲ್ ಭೀಮಾ ಯೋಜನೆಯಡಿ ಸರ್ಕಾರದಿಂದ ಅಧಿಸೂಚಿಸಿರುವ ಬೆಳೆಗಳು, ವಿಮಾಕಂತು ಮತ್ತು ಅಂತಿಮ ದಿನಾಂಕದ ವಿವರಗಳನ್ನು ತಿಳಿಸಿ, ಬೆಳೆ ಸಮೀಕ್ಷೆ ಆಪ್ ಮೂಲಕ ಬೆಳೆ ಸರ್ವೆಯನ್ನು ನಿಮ್ಮ ಗ್ರಾಮದಲ್ಲಿ ಖಾಸಗಿ ನಿವಾಸಿಗಳು ಕೈಗೊಳ್ಳುತ್ತಿದ್ದು ಇದರ ಮಹತ್ವ ಮತ್ತು ಗಮನ ವಹಿಸಲು ತಿಳಿಸಿದರು.
ತರಬೇತಿ ಮುಕ್ತಾಯದ ನಂತರ 25 ಅಂಕಗಳಿಗೆ ಪರೀಕ್ಷೆ ನೆಡೆಸಲಾಗಿ ತರಬೇತಿಯಲ್ಲಿ ಸಕ್ರೀಯವಾಗಿ ಭಾಗವಹಿಸಿ ಹೆಚ್ಚಿನ ಅಂಕ ಪಡೆದ ರೈತರಾದ ಪ್ರಶಾಂತ್ ಕುಮಾರ್, ಸತ್ಯನಾರಾಯಣ ರವರಿಗೆ ಪುಸ್ತಕಗಳನ್ನು ನೀಡಿ ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ಸಹಾಯಕ ಕೃಷಿ ನಿರ್ದೇಶಕರುಗಳಾದ ಮಮತಾ ಎಸ್.ಬಿ., ಮಧುಲತಾ ಹೆಚ್.ಬಿ. ಮತ್ತು ವಜ್ರೇಶ್ವರಿ ಎಸ್ ಹಾಗೂ ಕೃಷಿ ಅಧಿಕಾರಿ ಶಿಲ್ಪ ಜಿ.ಕೆ. ರಾಜಶೇಖರ ಹೆಚ್. ಆರ್., ಮತ್ತು ಮಂಜುಳ ಎಂ.ಬಿ. ಹಾಜರಿದ್ದರು.
ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…
ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…
ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್ಎಚ್ ೨೭೫ರ ವಿಸ್ತೃತ ಮಾರ್ಗವಾದ…
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಹೆಣ್ಣುಮಕ್ಕಳಿಗಾಗಿ ರಾಜ್ಯದಲ್ಲಿ ಸ್ಥಾಪಿಸಿದ ಮೊದಲ ಶಾಲೆ ಇದು. ಶತೋತ್ತರ ಅರ್ಧ…
ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…