ಮೈಸೂರು

ಜೂನ್ ಮುಗಿಯುತ್ತಾ ಬಂದರೂ ಭರ್ತಿಯಾಗದ ಕಬಿನಿ ಜಲಾಶಯ; ರೈತರಲ್ಲಿ ಮನೆಮಾಡಿದ ಆತಂಕ

ಹೆಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕ್ಷೀಣಿಸಿದ ಪರಿಣಾಮ ಹೆಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯ ಭರ್ತಿಯತ್ತ ಸಾಗದೇ ಅನ್ನದಾತರ ಮೊಗದಲ್ಲಿ ಭಾರೀ ಆತಂಕ ಮನೆಮಾಡಿದೆ.

ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯ ರಾಜ್ಯದಲ್ಲೇ ಮೊದಲು ಭರ್ತಿಯಾಗುವ ಜಲಾಶಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಆದರೆ ಈ ಬಾರಿ ಜೂನ್ ತಿಂಗಳಲ್ಲಿ ಬೀಳಬೇಕಿದ್ದ ಮುಂಗಾರು ಮಳೆ ಕ್ಷೀಣಿಸಿದ ಪರಿಣಾಮ ಜಲಾಶಯದ ಒಳಹರಿವಿನಲ್ಲಿ ಭಾರೀ ಇಳಿಕೆ ಕಂಡು ಬಂದಿದೆ.

ನೆರೆಯ ಕೇರಳ ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡರೆ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆಯಾಗಿ ಕೇವಲ 10 ದಿನಗಳ ಮುಂಚೆಯೇ ಡ್ಯಾಂ ಭರ್ತಿಯಾಗುತ್ತಿತ್ತು. ಆದರೆ ಈ ಬಾರಿ ಕೇರಳದಲ್ಲೂ ಮುಂಗಾರು ಮಳೆ ವ್ಯಾಪಕವಾಗಿ ಆಗಿಲ್ಲದಿರುವುದರಿಂದ ಕಬಿನಿ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಇಳಿಕೆ ಕಂಡುಬಂದಿದೆ.

ಈ ಹಿನ್ನೆಲೆಯಲ್ಲಿ ರೈತರು ಭಾರೀ ಆತಂಕಕ್ಕೀಡಾಗಿದ್ದು, ಮಳೆ ಬೀಳುವುದನ್ನೇ ಕಾಯುತ್ತಾ ಕುಳಿತಿದ್ದಾರೆ. ಕಬಿನಿ ಜಲಾಶಯ ಭರ್ತಿಯಾದರಷ್ಟೇ ನಾಲೆಗಳಿಗೆ ನೀರು ಬಿಡಲು ಸಾಧ್ಯ. ಜಲಾಶಯ ತುಂಬದಿದ್ದರೆ ನಾಲೆಗಳಿಗೂ ನೀರು ಬಿಡಲು ಸಾಧ್ಯವಾಗಲ್ಲ.

ಆಗಸ್ಟ್ ಆರಂಭದಲ್ಲಿ ಮುಂಗಾರು ಮಳೆ ಚುರುಕುಗೊಂಡರೆ, ಕಬಿನಿ ಜಲಾಶಯ ಭರ್ತಿಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಹೀಗಾಗಿ ಆದಷ್ಟು ಬೇಗ ಮಳೆ ಬಿದ್ದು, ಜಲಾಶಯ ತುಂಬಲಿ ಎಂದು ರೈತರು ದೇವರ ಮೊರೆ ಹೋಗಿದ್ದಾರೆ.

andolana

Recent Posts

ಮೈಸೂರು ಕೇಂದ್ರೀಯ ಸಂಪರ್ಕ ಬ್ಯೂರೋ-CBC ಕಚೇರಿ ಸ್ಥಗಿತ ಬೇಡ : ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಸಚಿವ ಎಚ್‌ಡಿಕೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…

7 hours ago

ಉನ್ನಾವೋ ಅತ್ಯಾಚಾರ ಪ್ರಕರಣ : ರಾಹುಲ್‌ಗಾಂಧಿ ಭೇಟಿಯಾದ ಸಂತ್ರಸ್ತೆ ಕುಟುಂಬ

ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…

7 hours ago

ಉನ್ನಾವೊ ಪ್ರಕರಣ : ಸೆಂಗರ್‌ ಶಿಕ್ಷೆ ಅಮಾನತು ; ಸಂತ್ರಸ್ತೆ ತಾಯಿ ಹೇಳಿದಿಷ್ಟು?

ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…

7 hours ago

ಚಂದನವನದಲ್ಲಿ ಸ್ಟಾರ್‌ ವಾರ್‌ : ನಟಿ ರಕ್ಷಿತಾ ಪ್ರೇಮ್‌ ಹೇಳಿದಿಷ್ಟು?

ಬೆಂಗಳೂರು : ಮಾರ್ಕ್‌ʼ ಸಿನಿಮಾದ ಪ್ರೀ-ರಿಲೀಸ್‌ ಈವೆಂಟ್‌ನಲ್ಲಿ ಕಿಚ್ಚ ಸುದೀಪ್‌ ಹೇಳಿದ ಮಾತೊಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…

8 hours ago

ರೈತರಿಗೆ ಅಗತ್ಯವಿರುವ ಸೌಲಭ್ಯ ಒದಗಿಸಲು ಸರ್ಕಾರ ಬದ್ದ : ಸಚಿವ ಕೆ.ವೆಂಕಟೇಶ್

ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…

8 hours ago

ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ನೇಮಕಾತಿ ; ಆಸಕ್ತರು ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…

8 hours ago