ಮೈಸೂರು

ಲೋಕಾಯುಕ್ತ ಬಲೆಗೆ ಬಿದ್ದ ಎಫ್‌ಡಿಎ ಅಧಿಕಾರಿ

ಪಿರಿಯಾಪಟ್ಟಣ: ಕೆಲಸದ ಬಿಲ್‌ ಪಾವತಿ ಮಾಡುವ ವಿಚಾರವಾಗಿ ವ್ಯಕ್ತಿಯೊರ್ವನಿಂದ ಲಂಚ ಪಡೆಯುತ್ತಿದ್ದ ಎಫ್‌ಡಿಎ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ತಾಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಎಫ್‌ಡಿಎ ಅಧಿಕಾರಿ ವಿಜಯ್‌ ಶಂಕರ್‌ ಲೋಕಾಯುಕ್ತ ಬಲೆಗೆ ಬಿದ್ದವರು. ನಟೇಶ್‌ ಎಂಬ ವ್ಯಕ್ತಿಯ ಬಿಲ್‌ ಪಾಸ್‌ ಮಾಡಲು ಆತನಿಂದ ಚೆಕ್‌ವೊಂದನ್ನ ಪಡೆಯಲಾಗಿತ್ತು. ಚೆಕ್‌ ಹಿಂದುರಿಗಿಸಲು 30 ಸಾವಿರ ರೂ ಬೇಡಿಕೆ ಇಡಲಾಗಿತ್ತು. ಇದರಿಂದ ಬೇಸತ್ತ ನಟೇಶ್‌ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ಬಳಿಕ ಕಾರ್ಯಚರಣೆಗಿಳಿದ ಲೋಕಯುಕ್ತ ಪೊಲೀಸರು ಗುರುವಾರ(ಮೇ.16) ವಿಜಯ್‌ ಶಂಕರ್ ತಮ್ಮ ಕಚೇರಿಯ ಬಳಿ ದೂರುದಾರ ನಟೇಶ್‌ರಿಂದ ಹಣ ಪಡೆಯುತ್ತಿದ್ದ ಸಂದರ್ಭದಲ್ಲಿ ಸಿಕ್ಕಿ ಬಿದ್ದಿದ್ದಾನೆ. ಲೋಕಾಯುಕ್ತ ಎಸ್ಪಿ ಸಜಿತ್‌ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಚರಣೆಯಲ್ಲಿ ಡಿವೈಎಸ್‌ಪಿ ವಿ.ಕೃಷ್ಣಯ್ಯ, ಲೋಕಾಯುಕ್ತ ಪೊಲೀಸ್‌ ಇನ್ಸ್‌ಪೆಕ್ಟರ್‌ಗಳಾದ ರವಿಕುಮಾರ್‌, ರೂಪಶ್ರೀ, ಲೋಕೇಶ್‌ ಹಾಗೂ ಸಿಬ್ಬಂದಿ ಮೋಹನ್‌ಗೌಡ, ವೀರಭದ್ರಸ್ವಾಮಿ, ಆಶಾ, ತ್ರಿವೇಣಿ, ಪುಷ್ಪಲತಾ, ದಿನೇಶ್‌,ಲೋಕೇಶ್‌, ಪೃಥ್ವಿಷ, ಶೇಖರ್‌ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

‘ಶುಚಿ’ ಕಾರ್ಯಕ್ರಮ ಮರು ಜಾರಿಗೆ ಹಣ ಬಲ

-ಗಿರೀಶ್ ಹುಣಸೂರು ೫ ವರ್ಷಗಳ ಬಳಿಕ ಉಚಿತ ಸ್ಯಾನಿಟರಿ ನ್ಯಾಪ್‌ಕಿನ್ ವಿತರಣೆಗೆ ಮುಂದಾದ ಸರ್ಕಾರ ಮೈಸೂರು: ಹದಿಹರೆಯದ ಹೆಣ್ಣು ಮಕ್ಕಳಲ್ಲಿ…

8 mins ago

ಘೋರ ದುರಂತಗಳಿಗೆ ಸಾಕ್ಷಿಯಾದ ೨೦೨೫

೨೦೨೫ನೇ ವರ್ಷಕ್ಕೆ ವಿದಾಯ ಹೇಳಿ ೨೦೨೬ರ ಹೊಸ ವರ್ಷವನ್ನು ಸ್ವಾಗತಿಸುವ ದಿನ ಸನ್ನಿಹಿತವಾಗಿದೆ. ಪ್ರತಿ ಸಲ ಹೊಸ ವರ್ಷವನ್ನು ಹರ್ಷದಿಂದ…

36 mins ago

‘ಹೆರಿಟೇಜ್ ಟೂರಿಸಂ ಅಭಿವೃದ್ಧಿಗೆ ಯೋಜನೆ’

ಟಾಂಗಾ ಸವಾರಿ ವಲಯ ನಿರ್ಮಾಣಕ್ಕೆ ೨.೭೧ ಕೋಟಿ ರೂ. ಮಂಜೂರು ಕೇಂದ್ರದ ಸ್ವದೇಶ ದರ್ಶನ ಯೋಜನೆಯಡಿ ಗ್ರೀನ್ ಟೂರ್‌ಗೆ ಆದ್ಯತೆ …

4 hours ago

ಜನವರಿ.3ರಿಂದ ನೈಸರ್ಗಿಕ ಕೃಷಿ ಕಾರ್ಯಾಗಾರ

ಹಾಸನ ಜಿಲ್ಲೆ ಹಳೇಬೀಡಿನ ಪುಷ್ಪಗಿರಿ ಮಠದಲ್ಲಿ ಆಯೋಜನೆ: ಡಾ.ಅನಂತರಾವ್ ಮಂಡ್ಯ: ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ವತಿಯಿಂದ…

4 hours ago

ಅಂಬೇಡ್ಕರ್ ಜೀವಜಲವನ್ನು ಹರಿಯುವಂತೆ ಮಾಡುವುದು ನಮ್ಮ ಕೆಲಸವಾಗಿದೆ

ಕೋಟಿಗಾನಹಳ್ಳಿ ರಾಮಯ್ಯ ಇದು ಕದಡಿದ ನೀರಿನಂತಹ ಕಾಲ. ಈ ಮಬ್ಬಿನ ವಾತಾವರಣದಲ್ಲಿ ಬಹುರೂಪಿ ರಂಗಾಯಣದಲ್ಲಿ ‘ಬಹುರೂಪಿ ಅಂಬೇಡ್ಕರ್’ ಎಂಬ ಆಶಯ…

4 hours ago

ತಾಯಿ ನಂಜನಗೂಡಿನ ನಂಜಿ, ಮಗ ನಿಕೋಲಸ್ ವಿಶ್ವವಿಖ್ಯಾತ ಕ್ಯಾಮೆರಾಮ್ಯಾನ್

ಸ್ಟ್ಯಾನ್ಲಿ ‘ನನ್ನಮ್ಮ ರೋಸ್ಮಂಡ್ ವಾನಿಂಗನ್ ಆಂಗ್ಲ ಮಹಿಳೆಯಾಗಿದ್ದರೂ, ಅವಳು ನಂಜನಗೂಡಿನ ನಂಜಿಯಾಗಿದ್ದಳು. ಬಿಸಿಲ್ ಮಂಟಿ ಗ್ರಾಮಸ್ಥರು ಆಕೆಗೆ ಇಟ್ಟಿದ್ದ ಹೆಸರಾಗಿತ್ತದು.…

4 hours ago