ಮೈಸೂರು

ಲೋಕಾಯುಕ್ತ ಬಲೆಗೆ ಬಿದ್ದ ಎಫ್‌ಡಿಎ ಅಧಿಕಾರಿ

ಪಿರಿಯಾಪಟ್ಟಣ: ಕೆಲಸದ ಬಿಲ್‌ ಪಾವತಿ ಮಾಡುವ ವಿಚಾರವಾಗಿ ವ್ಯಕ್ತಿಯೊರ್ವನಿಂದ ಲಂಚ ಪಡೆಯುತ್ತಿದ್ದ ಎಫ್‌ಡಿಎ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ತಾಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಎಫ್‌ಡಿಎ ಅಧಿಕಾರಿ ವಿಜಯ್‌ ಶಂಕರ್‌ ಲೋಕಾಯುಕ್ತ ಬಲೆಗೆ ಬಿದ್ದವರು. ನಟೇಶ್‌ ಎಂಬ ವ್ಯಕ್ತಿಯ ಬಿಲ್‌ ಪಾಸ್‌ ಮಾಡಲು ಆತನಿಂದ ಚೆಕ್‌ವೊಂದನ್ನ ಪಡೆಯಲಾಗಿತ್ತು. ಚೆಕ್‌ ಹಿಂದುರಿಗಿಸಲು 30 ಸಾವಿರ ರೂ ಬೇಡಿಕೆ ಇಡಲಾಗಿತ್ತು. ಇದರಿಂದ ಬೇಸತ್ತ ನಟೇಶ್‌ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ಬಳಿಕ ಕಾರ್ಯಚರಣೆಗಿಳಿದ ಲೋಕಯುಕ್ತ ಪೊಲೀಸರು ಗುರುವಾರ(ಮೇ.16) ವಿಜಯ್‌ ಶಂಕರ್ ತಮ್ಮ ಕಚೇರಿಯ ಬಳಿ ದೂರುದಾರ ನಟೇಶ್‌ರಿಂದ ಹಣ ಪಡೆಯುತ್ತಿದ್ದ ಸಂದರ್ಭದಲ್ಲಿ ಸಿಕ್ಕಿ ಬಿದ್ದಿದ್ದಾನೆ. ಲೋಕಾಯುಕ್ತ ಎಸ್ಪಿ ಸಜಿತ್‌ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಚರಣೆಯಲ್ಲಿ ಡಿವೈಎಸ್‌ಪಿ ವಿ.ಕೃಷ್ಣಯ್ಯ, ಲೋಕಾಯುಕ್ತ ಪೊಲೀಸ್‌ ಇನ್ಸ್‌ಪೆಕ್ಟರ್‌ಗಳಾದ ರವಿಕುಮಾರ್‌, ರೂಪಶ್ರೀ, ಲೋಕೇಶ್‌ ಹಾಗೂ ಸಿಬ್ಬಂದಿ ಮೋಹನ್‌ಗೌಡ, ವೀರಭದ್ರಸ್ವಾಮಿ, ಆಶಾ, ತ್ರಿವೇಣಿ, ಪುಷ್ಪಲತಾ, ದಿನೇಶ್‌,ಲೋಕೇಶ್‌, ಪೃಥ್ವಿಷ, ಶೇಖರ್‌ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

3 mins ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

6 mins ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

8 mins ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

10 mins ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

15 mins ago