ಮೈಸೂರು: ಎಲ್ಲ ಶಿಬಿರಾರ್ಥಿಗಳು ಸುಗಮ ಸಂಗೀತದ ಪ್ರಕಾರದ ಕಾರ್ಯವನ್ನು ಕವಿಗಳ ಕಾವ್ಯದ ಗೀತೆಗಳನ್ನು ಕಲಿಯುವುದರ ಮೂಲಕ ಸಂಗೀತಕ್ಕಿರುವ ಶಕ್ತಿಯನ್ನು ಮನಗಾಣಬೇಕು ಎಂದು ಗಾಯಕ ಡಾ.ಕಿಕ್ಕೇರಿ ಕೃಷ್ಣಮೂರ್ತಿ ತಿಳಿಸಿದರು.
ನಗರದ ಹೂಟಗಳ್ಳಿಯಲ್ಲಿರುವ ಶ್ರೀ ಅನಂತೇಶ್ವರ ಭವನದಲ್ಲಿ ಕರ್ನಾಟಕ ಸುಗಮ ಸಂಗೀತ ಪರಿಷತ್ ಮೈಸೂರು ಜಿಲ್ಲಾ ಘಟಕದಿಂದ ಆಯೋಜಿಸಿರುವ ಎರಡು ದಿನಗಳ ಸುಗಮ ಸಂಗೀತ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸುಗಮ ಸಂಗೀತವು ಸಂಗೀತ ಪ್ರಕಾರಗಳಲ್ಲಿ ಅತಿ ದೊಡ್ಡದು ಎಂದರು.
ಪರಿಷತ್ತಿನ ಮೈಸೂರು ಘಟಕದ ಜಿಲ್ಲಾಧ್ಯಕ್ಷ ಡಾ.ನಾಗರಾಜ್ ವಿ.ಬೈರಿ ಮಾತನಾಡಿ, ಮೈಸೂರಿನಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಪ್ರತಿವರ್ಷ ಸಂಗೀತ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಸುದರ್ಶನ್ ಮಾತನಾಡಿ, ನಮ್ಮ ಇಲಾಖೆ ವತಿಯಿಂದ ಸುಗಮ ಸಂಗೀತ ಪರಿಷತ್ತಿಗೆ ಎಲ್ಲಾ ರೀತಿಯ ಸಹಾಯ ಮಾಡಲು ಸಿದ್ಧ ಎಂದು ಹೇಳಿದರು.
ಮಂಡ್ಯ ಸುಗಮ ಸಂಗೀತ ಪರಿಷತ್ ಅಧ್ಯಕ್ಷ ಡೇವಿಡ್ ಮಾತನಾಡಿದರು. ಸುಮಾರು ೧೫೦ಕ್ಕೂ ಹೆಚ್ಚು ಶಿಬಿರಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪರಿಷತ್ತಿನ ರಾಜ್ಯ ಕಾರ್ಯದರ್ಶಿ ಬಿ.ವಿ.ಪ್ರವೀಣ್, ಖಜಾಂಚಿ ಪ್ರಶಾಂತ್ ಉಡುಪ, ಗಾಯಕಿಯರಾದ ಇಂದ್ರಾಣಿ ಆನಂತರ, ರಶ್ಮಿ ಚಿಕ್ಕಮಗಳೂರು, ಹಿರಿಯ ಸಾಹಿತಿ ಜಯಪ ಹೊನ್ನಾಳಿ, ಪರಿಷತ್ತಿನ ಮೈಸೂರು ಜಿಲ್ಲಾ ಉಪಾಧ್ಯಕ್ಷ ನಾ.ಗಂಗಾಧರಪ್ಪ , ಕಾರ್ಯದರ್ಶಿ ಸಿರಿಬಾಲು, ಮಾಧ್ಯಮ ಸಲೆಗಾರರಾದ ಎನ್.ಬೆಟ್ಟೆಗೌಡ ಇತರರು ಹಾಜರಿದ್ದರು.
ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…
ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…