ಮೈಸೂರು: ಎಲ್ಲ ಶಿಬಿರಾರ್ಥಿಗಳು ಸುಗಮ ಸಂಗೀತದ ಪ್ರಕಾರದ ಕಾರ್ಯವನ್ನು ಕವಿಗಳ ಕಾವ್ಯದ ಗೀತೆಗಳನ್ನು ಕಲಿಯುವುದರ ಮೂಲಕ ಸಂಗೀತಕ್ಕಿರುವ ಶಕ್ತಿಯನ್ನು ಮನಗಾಣಬೇಕು ಎಂದು ಗಾಯಕ ಡಾ.ಕಿಕ್ಕೇರಿ ಕೃಷ್ಣಮೂರ್ತಿ ತಿಳಿಸಿದರು.
ನಗರದ ಹೂಟಗಳ್ಳಿಯಲ್ಲಿರುವ ಶ್ರೀ ಅನಂತೇಶ್ವರ ಭವನದಲ್ಲಿ ಕರ್ನಾಟಕ ಸುಗಮ ಸಂಗೀತ ಪರಿಷತ್ ಮೈಸೂರು ಜಿಲ್ಲಾ ಘಟಕದಿಂದ ಆಯೋಜಿಸಿರುವ ಎರಡು ದಿನಗಳ ಸುಗಮ ಸಂಗೀತ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸುಗಮ ಸಂಗೀತವು ಸಂಗೀತ ಪ್ರಕಾರಗಳಲ್ಲಿ ಅತಿ ದೊಡ್ಡದು ಎಂದರು.
ಪರಿಷತ್ತಿನ ಮೈಸೂರು ಘಟಕದ ಜಿಲ್ಲಾಧ್ಯಕ್ಷ ಡಾ.ನಾಗರಾಜ್ ವಿ.ಬೈರಿ ಮಾತನಾಡಿ, ಮೈಸೂರಿನಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಪ್ರತಿವರ್ಷ ಸಂಗೀತ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಸುದರ್ಶನ್ ಮಾತನಾಡಿ, ನಮ್ಮ ಇಲಾಖೆ ವತಿಯಿಂದ ಸುಗಮ ಸಂಗೀತ ಪರಿಷತ್ತಿಗೆ ಎಲ್ಲಾ ರೀತಿಯ ಸಹಾಯ ಮಾಡಲು ಸಿದ್ಧ ಎಂದು ಹೇಳಿದರು.
ಮಂಡ್ಯ ಸುಗಮ ಸಂಗೀತ ಪರಿಷತ್ ಅಧ್ಯಕ್ಷ ಡೇವಿಡ್ ಮಾತನಾಡಿದರು. ಸುಮಾರು ೧೫೦ಕ್ಕೂ ಹೆಚ್ಚು ಶಿಬಿರಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪರಿಷತ್ತಿನ ರಾಜ್ಯ ಕಾರ್ಯದರ್ಶಿ ಬಿ.ವಿ.ಪ್ರವೀಣ್, ಖಜಾಂಚಿ ಪ್ರಶಾಂತ್ ಉಡುಪ, ಗಾಯಕಿಯರಾದ ಇಂದ್ರಾಣಿ ಆನಂತರ, ರಶ್ಮಿ ಚಿಕ್ಕಮಗಳೂರು, ಹಿರಿಯ ಸಾಹಿತಿ ಜಯಪ ಹೊನ್ನಾಳಿ, ಪರಿಷತ್ತಿನ ಮೈಸೂರು ಜಿಲ್ಲಾ ಉಪಾಧ್ಯಕ್ಷ ನಾ.ಗಂಗಾಧರಪ್ಪ , ಕಾರ್ಯದರ್ಶಿ ಸಿರಿಬಾಲು, ಮಾಧ್ಯಮ ಸಲೆಗಾರರಾದ ಎನ್.ಬೆಟ್ಟೆಗೌಡ ಇತರರು ಹಾಜರಿದ್ದರು.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…