ಮೈಸೂರು: ಸರ್ಕಾರದ ಸ್ವಾಧೀನಕ್ಕೆ ಪಡೆಯಬೇಕಾದ ಜಮೀನು ಪರಿಶೀಲನೆಗೆ ತೆರಳಿದ ಗ್ರಾಮ ಆಡಳಿತ ಮಹಿಳಾ ಅಧಿಕಾರಿಗೆ ವ್ಯಕ್ತಿಯೋರ್ವ ಕೊಲೆ ಬೆದರಿಕೆ ಹಾಕಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿದೆ.
ಮೈಸೂರು ದಕ್ಷಿಣ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳೀಯ ವ್ಯಕ್ತಿ ಪುಟ್ಟಸ್ವಾಮಿ ಎಂಬಾತ ಗ್ರಾಮದ ಆಡಳಿತ ಅಧಿಕಾರಿ ಹಾಗೂ ಗ್ರಾಮ ಸಹಾಯಕನಿಗೆ ಕೊಲೆ ಬೆದರಿಕೆ ಹಾಕಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾನೆ ಎಂದು ಹೇಳಲಾಗಿದೆ.
ಮೈಸೂರು ತಾಲ್ಲೂಕಿನ ಗುಡಮಾದನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಕರ್ತವ್ಯಕ್ಕೆ ಅಡ್ಡಿಪಡಿಸಿ ಬೆದರಿಕೆ ಹಾಕಿದ ಪುಟ್ಟಸ್ವಾಮಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಗ್ರಾಮ ಆಡಳಿತ ಅಧಿಕಾರಿ ಭವ್ಯಾ ಹಾಗೂ ಗ್ರಾಮ ಸಹಾಯಕ ನವೀನ್ ಕುಮಾರ್ ಎಂಬುವವರಿಗೆ ಕೊಲೆ ಬೆದರಿಕೆ ಹಾಕಲಾಗಿದೆ. ನವೀನ್ ಅವರು ತಮ್ಮ ಮೊಬೈಲ್ನಲ್ಲಿ ಜಮೀನಿನ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾಗ ಪುಟ್ಟಸ್ವಾಮಿ ಧಮ್ಕಿ ಹಾಕಿದ್ದಾನೆ.
2025ರ ಡಿಸೆಂಬರ್.31ರಂದು ಪುಟ್ಟಸ್ವಾಮಿ ಬೆದರಿಕೆ ಹಾಕಿದ್ದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದ್ದು, ಪುಟ್ಟಸ್ವಾಮಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…