ಮೈಸೂರು

ಮೈಸೂರಲ್ಲಿ ಹಬ್ಬದ ಸಡಗರ : ವರಲಕ್ಷ್ಮಿ ಸಂಭ್ರಮ ಜೋರು

ಮೈಸೂರು : ಶ್ರಾವಣ ಮಾಸದ ಎರಡನೇ ಶುಕ್ರವಾರ ಶ್ರೀ ವರಮಹಾಲಕ್ಷಿ ಹಬ್ಬದ ಅಂಗವಾಗಿ ಜಿಲ್ಲಾದ್ಯಂತ ಶ್ರೀ ಲಕ್ಷಿ ಹಾಗೂ ಇತರೆ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಶುಕ್ರವಾರ ಬೆಳಿಗ್ಗೆಯಿಂದಲೇ ಸಾರ್ವಜನಿಕರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.

ಹಬ್ಬಕ್ಕೆ ಎರಡು ದಿನ ಮುಂಚಿತವಾಗಿಯೇ ಸಿದ್ಧತೆ ಮಾಡಿಕೊಂಡಿದ್ದ ನಗರ ಹಾಗೂ ಗ್ರಾಮೀಣ ಪ್ರದೇಶದ ಮಹಿಳೆಯರು ವರ ಮಹಾಲಕ್ಷ್ಮೀಗೆ ವಿಶೇಷ ಪೂಜೆ ಸಲ್ಲಿಸಿದರು. ಮನೆಯಲ್ಲಿ ಕಳಸ ಪ್ರತಿಷ್ಠಾಪನೆ ಮಾಡಿ, ಅದಕ್ಕೆ ಲಕ್ಷ್ಮೀಯ ಮುಖವಾಡ, ಸೀರೆ, ಬಳೆ ತೊಡಿಸಿ, ಬಗೆ ಬಗೆಯ ಹೂವುಗಳಿಂದ ಅಲಂಕಾರ ಮಾಡಿ, ವಿವಿಧ ತಿನಿಸುಗಳು, ಹಣ್ಣುಗಳನ್ನು ನೈವೇದ್ಯಕ್ಕಿಟ್ಟು ವಿಶೇಷವಾಗಿ ಪ್ರಾರ್ಥಿಸಿದರು.

ವರಮಹಾಲಕ್ಷ್ಮಿ ಹಬ್ಬವನ್ನು ನಗರದ ವಿವಿಧ ದೇವಸ್ಥಾನಗಳಲ್ಲಿ ವಿಶೇಷವಾಗಿ ಆಚರಿಸಲಾಯಿತು. ಮಹಿಳೆಯರು ಮನೆಯಲ್ಲಿ ವ್ರತ ಆಚರಣೆ ಮಾಡಿ ಬಳಿಕ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ದಿವಾನ್ಸ್ ರಸ್ತೆಯ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ವಿಶೇಷವಾಗಿ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು. ಅಲ್ಲದೆ ದಟ್ಟಗಳ್ಳಿಯ ನೇತಾಜಿ ಸರ್ಕಲ್‌ನಲ್ಲಿರುವ ಮಹಾಲಕ್ಷ್ಮಿ ದೇವಸ್ಥಾನದಲ್ಲೂ ವಿಶೇಷವಾಗಿ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು.

ಹಬ್ಬದ ಸಂಭ್ರಮ: ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ವರಮಹಾಲಕ್ಷಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಗ್ರಾಮಾಂತರ ಪ್ರದೇಶಗಳಲ್ಲೂ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಜನತೆ ಮುಂಜಾನೆಯೇ ತಮ್ಮ ಮನೆಗಳನ್ನು ಶೃಂಗರಿಸಿ ಸುಂದರ ಮಂಟಪ ಸಿದ್ಧಪಡಿಸಿ, ಲಕ್ಷಿ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಆಭರಣಗಳಿಂದ ಸಿಂಗರಿಸಿ, ವಿಶೇಷ ಪೂಜೆ ನಡೆಸಿದರು. ಹಬ್ಬಕ್ಕಾಗಿಯೇ ವಿಶೇಷ ಸಿಹಿ ತಿಂಡಿ-ತಿನಿಸುಗಳನ್ನಿಟ್ಟು ಪೂಜೆ ಸಲ್ಲಿಸುತ್ತಿದ್ದುದು ಕಂಡುಬಂತು.

ಪೂರಿ ಜಗನ್ನಾಥ ರಥಯಾತ್ರೆ ಮಾದರಿ
ನಗರದ ಸಿದ್ಧಾರ್ಥನಗರದ ಪ್ರವೀಣ್ ಹಾಗೂ ಮಾಲಿನಿ ದಂಪತಿ ನಿವಾಸದಲ್ಲಿ ವಿಶೇಷವಾಗಿ ವರಮಹಾಲಕ್ಷ್ಮಿ ಹಬ್ಬ ಆಚರಿಸಲಾಯಿತು. ಪೂರಿ ಜಗನ್ನಾಥ ರಥದ ಮಾದರಿ ನಿರ್ಮಿಸಿ, ಅದರೊಳಗೆ ಲಕ್ಷ್ಮಿಯನ್ನು ಪ್ರತಿಷ್ಠಾಪಿಸಿ, ವಿಶೇಷವಾಗಿ ವಿವಿಧ ಹೂವುಗಳಿಂದ ಅಲಂಕಾರ ಮಾಡಿ ಲಕ್ಷ್ಮಿ ಪೂಜೆ ಮಾಡಲಾಯಿತು. ಅಶ್ವಾರೂಢ ರಥ ನೋಡುಗರ ಗಮನ ಸೆಳೆಯುವಂತಿತ್ತು.

ತಿನಿಸುಗಳಿಗೆ ಬೇಡಿಕೆ
ಇನ್ನು ಹಬ್ಬದ ಹಿನ್ನೆಲೆಯಲ್ಲಿ ದೇವರ ನೈವೇದ್ಯಕ್ಕೆ ತಿನಿಸುಗಳನ್ನು ಇಡುವುದು ವಾಡಿಕೆ. ಅದರಂತೆ ನಗರದ ವಿವಿಧ ಬೇಕರಿಗಳು, ಚಕ್ಕುಲಿ, ನಿಪ್ಪಟ್ಟು, ಕರ್ಜಿಕಾಯಿ, ರವೆ ಉಂಡೆ ಸೇರಿದಂತೆ ವಿವಿಧ ತಿನಿಸುಗಳನು ಜನರು ಖರೀದಿಸಿದರು.

ಚಾಮುಂಡಿಬೆಟ್ಟದಲ್ಲಿ ಜನಜಾತ್ರೆ
ಇನ್ನು ಯಾವುದೇ ಹಬ್ಬಗಳು ಬಂತೆಂದರೆ ಜನರು ಚಾಮುಂಡಿಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸುವುದು ವಾಡಿಕೆ ಅದರಂತೆ ಶುಕ್ರವಾರ ಬೆಳಿಗ್ಗೆಯಿಮದಲೇ ಜಾಮುಂಡಿಬೆಟ್ಟದಲ್ಲಿ ಜನ ಜಾತ್ರೆಯೇ ನೆರೆದಿತ್ತು. ಉಳಿದಂತೆ ನಗರದ ಅರಮನೆ ಆವರಣ, ಕೆಜಿ ಕೊಪ್ಪಲಿನ ಚಾಮುಂಡೇಶ್ವರಿ ದೇವಾಲಯ, ಶ್ರೀರಾಂಪುರದ ಶಿವ ದೇವಾಲಯ, ಕಾಮಕಾಮೇಶ್ವರಿ ದೇವಾಲಯ, ಗಣಪತಿ ಸಚ್ಚಿದಾನಂದಾಶ್ರಮ, ಉತ್ತಮಹಳ್ಳಿ ಮಾರಮ್ಮ ಸೇರಿದಂತೆ ನಗರದ ವಿವಿಧ ಬಡಾವಣೆಗಳ ದೇವಾಲಯಗಳಲ್ಲಿ ವೀಶೇಷ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು.

ಆಂದೋಲನ ಡೆಸ್ಕ್

Recent Posts

ಹೊರ್ಮುಜ್‌ನಲ್ಲಿ ಹಡಗುಯಾನ ಅಡಚಣೆ : ಎಲ್ಲ ದೇಶಗಳಿಗೆ ಎಚ್ಚರಿಕೆ ನೀಡಿದ ವಿಶ್ವಸಂಸ್ಥೆ

ವಿಶ್ವಸಂಸ್ಥೆ : ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಹೊರ್ಮುಜ್ ಜಲಸಂಧಿ ಮುಚ್ಚಿದರೆ ಜಾಗತಿಕ ವ್ಯಾಪಾರ ಮತ್ತು ಅಭಿವೃದ್ಧಿ ಕುಂಠಿತದ ಜೊತೆಗೆ…

20 mins ago

ಮೈಸೂರು | ತಾಲ್ಲೂಕು ಕಚೇರಿಗೆ ಆಯುಕ್ತರ ದಿಢೀರ್‌ ಭೇಟಿ, ಕಡತ ಪರಿಶೀಲನೆ

ಮೈಸೂರು : ಮೈಸೂರು ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್ ಅವರು ಬುಧವಾರ ತಾಲ್ಲೂಕು ಕಛೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ…

41 mins ago

ರಾಜ್ಯದಲ್ಲಿ ಏ.15ರಿಂದ ವಸತಿ ಗಣತಿ

ಬೆಂಗಳೂರು : ರಾಜ್ಯದಲ್ಲಿ ಏಪ್ರಿಲ್ 15 ರಿಂದ ಮೇ 15 ರವರೆಗೆ ’ಮನೆಗಳ ಪಟ್ಟಿ ಮತ್ತು ವಸತಿ ಗಣತಿ’ ಪ್ರಕ್ರಿಯೆ…

53 mins ago

ಸದನದಲ್ಲಿ ಮಾತನಾಡಲು ಅವಕಾಶ ನಿರಾಕರಣೆ : ರಾಹುಲ್‌ ಗಾಂಧಿ

ಹೊಸದಿಲ್ಲಿ : ಈ ಸದನವು ಒಂದು ಪಕ್ಷವನ್ನು ಪ್ರತಿನಿಧಿಸುವುದಿಲ್ಲ, ಬದಲಾಗಿ ಇಡೀ ದೇಶವನ್ನು ಪ್ರತಿನಿಧಿಸುತ್ತದೆ ಎಂದು ಲೋಕಸಭೆಯ ಪ್ರತಿಪಕ್ಷದ ನಾಯಕ…

1 hour ago

13 ವರ್ಷಗಳಿಂದ ಕೋಮಾ : ಹರೀಶ್‌ ರಾಣಾ ದಯಾಮರಣಕ್ಕೆ ಸುಪ್ರೀಂ ಅನುಮತಿ

ಹೊಸದಿಲ್ಲಿ : ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ ಹರೀಶ್‌ ರಾಣಾ ದಯಾಮರಣಕ್ಕೆ ಸುಪ್ರೀಂಕೋರ್ಟ ಅನುಮತಿ ನೀಡಿದೆ. ಚಲಿಸಲು ಅಥವಾ ಮಾತನಾಡಲು…

2 hours ago

ಹಾರ್ಮುಜ್‌ ಜಲಸಂಧಿ ಬಳಿ ಅಮೇರಿಕಾ ಅಬ್ಬರ: ಇರಾನ್‌ನ 16 ನೌಕೆಗಳು ಧ್ವಂಸ

ಟೆಹರಾನ್:‌ ವಿಶ್ವದ ಪ್ರಮುಖ ಇಂಧನ ಸಾಗಣೆ ಮಾರ್ಗವಾದ ಹಾರ್ಮುಜ್‌ ಜಲಸಂಧಿಯ ಬಳಿ ನೌಕಾ ಮೈನ್‌ಗಳನ್ನು ಅಳವಡಿಸಲು ಸಜ್ಜಾಗಿದ್ದ ಇರಾನ್‌ನ 16…

4 hours ago