ಮೈಸೂರು

ಮೈಸೂರಲ್ಲಿ ಹಬ್ಬದ ಸಡಗರ : ವರಲಕ್ಷ್ಮಿ ಸಂಭ್ರಮ ಜೋರು

ಮೈಸೂರು : ಶ್ರಾವಣ ಮಾಸದ ಎರಡನೇ ಶುಕ್ರವಾರ ಶ್ರೀ ವರಮಹಾಲಕ್ಷಿ ಹಬ್ಬದ ಅಂಗವಾಗಿ ಜಿಲ್ಲಾದ್ಯಂತ ಶ್ರೀ ಲಕ್ಷಿ ಹಾಗೂ ಇತರೆ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಶುಕ್ರವಾರ ಬೆಳಿಗ್ಗೆಯಿಂದಲೇ ಸಾರ್ವಜನಿಕರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.

ಹಬ್ಬಕ್ಕೆ ಎರಡು ದಿನ ಮುಂಚಿತವಾಗಿಯೇ ಸಿದ್ಧತೆ ಮಾಡಿಕೊಂಡಿದ್ದ ನಗರ ಹಾಗೂ ಗ್ರಾಮೀಣ ಪ್ರದೇಶದ ಮಹಿಳೆಯರು ವರ ಮಹಾಲಕ್ಷ್ಮೀಗೆ ವಿಶೇಷ ಪೂಜೆ ಸಲ್ಲಿಸಿದರು. ಮನೆಯಲ್ಲಿ ಕಳಸ ಪ್ರತಿಷ್ಠಾಪನೆ ಮಾಡಿ, ಅದಕ್ಕೆ ಲಕ್ಷ್ಮೀಯ ಮುಖವಾಡ, ಸೀರೆ, ಬಳೆ ತೊಡಿಸಿ, ಬಗೆ ಬಗೆಯ ಹೂವುಗಳಿಂದ ಅಲಂಕಾರ ಮಾಡಿ, ವಿವಿಧ ತಿನಿಸುಗಳು, ಹಣ್ಣುಗಳನ್ನು ನೈವೇದ್ಯಕ್ಕಿಟ್ಟು ವಿಶೇಷವಾಗಿ ಪ್ರಾರ್ಥಿಸಿದರು.

ವರಮಹಾಲಕ್ಷ್ಮಿ ಹಬ್ಬವನ್ನು ನಗರದ ವಿವಿಧ ದೇವಸ್ಥಾನಗಳಲ್ಲಿ ವಿಶೇಷವಾಗಿ ಆಚರಿಸಲಾಯಿತು. ಮಹಿಳೆಯರು ಮನೆಯಲ್ಲಿ ವ್ರತ ಆಚರಣೆ ಮಾಡಿ ಬಳಿಕ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ದಿವಾನ್ಸ್ ರಸ್ತೆಯ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ವಿಶೇಷವಾಗಿ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು. ಅಲ್ಲದೆ ದಟ್ಟಗಳ್ಳಿಯ ನೇತಾಜಿ ಸರ್ಕಲ್‌ನಲ್ಲಿರುವ ಮಹಾಲಕ್ಷ್ಮಿ ದೇವಸ್ಥಾನದಲ್ಲೂ ವಿಶೇಷವಾಗಿ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು.

ಹಬ್ಬದ ಸಂಭ್ರಮ: ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ವರಮಹಾಲಕ್ಷಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಗ್ರಾಮಾಂತರ ಪ್ರದೇಶಗಳಲ್ಲೂ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಜನತೆ ಮುಂಜಾನೆಯೇ ತಮ್ಮ ಮನೆಗಳನ್ನು ಶೃಂಗರಿಸಿ ಸುಂದರ ಮಂಟಪ ಸಿದ್ಧಪಡಿಸಿ, ಲಕ್ಷಿ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಆಭರಣಗಳಿಂದ ಸಿಂಗರಿಸಿ, ವಿಶೇಷ ಪೂಜೆ ನಡೆಸಿದರು. ಹಬ್ಬಕ್ಕಾಗಿಯೇ ವಿಶೇಷ ಸಿಹಿ ತಿಂಡಿ-ತಿನಿಸುಗಳನ್ನಿಟ್ಟು ಪೂಜೆ ಸಲ್ಲಿಸುತ್ತಿದ್ದುದು ಕಂಡುಬಂತು.

ಪೂರಿ ಜಗನ್ನಾಥ ರಥಯಾತ್ರೆ ಮಾದರಿ
ನಗರದ ಸಿದ್ಧಾರ್ಥನಗರದ ಪ್ರವೀಣ್ ಹಾಗೂ ಮಾಲಿನಿ ದಂಪತಿ ನಿವಾಸದಲ್ಲಿ ವಿಶೇಷವಾಗಿ ವರಮಹಾಲಕ್ಷ್ಮಿ ಹಬ್ಬ ಆಚರಿಸಲಾಯಿತು. ಪೂರಿ ಜಗನ್ನಾಥ ರಥದ ಮಾದರಿ ನಿರ್ಮಿಸಿ, ಅದರೊಳಗೆ ಲಕ್ಷ್ಮಿಯನ್ನು ಪ್ರತಿಷ್ಠಾಪಿಸಿ, ವಿಶೇಷವಾಗಿ ವಿವಿಧ ಹೂವುಗಳಿಂದ ಅಲಂಕಾರ ಮಾಡಿ ಲಕ್ಷ್ಮಿ ಪೂಜೆ ಮಾಡಲಾಯಿತು. ಅಶ್ವಾರೂಢ ರಥ ನೋಡುಗರ ಗಮನ ಸೆಳೆಯುವಂತಿತ್ತು.

ತಿನಿಸುಗಳಿಗೆ ಬೇಡಿಕೆ
ಇನ್ನು ಹಬ್ಬದ ಹಿನ್ನೆಲೆಯಲ್ಲಿ ದೇವರ ನೈವೇದ್ಯಕ್ಕೆ ತಿನಿಸುಗಳನ್ನು ಇಡುವುದು ವಾಡಿಕೆ. ಅದರಂತೆ ನಗರದ ವಿವಿಧ ಬೇಕರಿಗಳು, ಚಕ್ಕುಲಿ, ನಿಪ್ಪಟ್ಟು, ಕರ್ಜಿಕಾಯಿ, ರವೆ ಉಂಡೆ ಸೇರಿದಂತೆ ವಿವಿಧ ತಿನಿಸುಗಳನು ಜನರು ಖರೀದಿಸಿದರು.

ಚಾಮುಂಡಿಬೆಟ್ಟದಲ್ಲಿ ಜನಜಾತ್ರೆ
ಇನ್ನು ಯಾವುದೇ ಹಬ್ಬಗಳು ಬಂತೆಂದರೆ ಜನರು ಚಾಮುಂಡಿಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸುವುದು ವಾಡಿಕೆ ಅದರಂತೆ ಶುಕ್ರವಾರ ಬೆಳಿಗ್ಗೆಯಿಮದಲೇ ಜಾಮುಂಡಿಬೆಟ್ಟದಲ್ಲಿ ಜನ ಜಾತ್ರೆಯೇ ನೆರೆದಿತ್ತು. ಉಳಿದಂತೆ ನಗರದ ಅರಮನೆ ಆವರಣ, ಕೆಜಿ ಕೊಪ್ಪಲಿನ ಚಾಮುಂಡೇಶ್ವರಿ ದೇವಾಲಯ, ಶ್ರೀರಾಂಪುರದ ಶಿವ ದೇವಾಲಯ, ಕಾಮಕಾಮೇಶ್ವರಿ ದೇವಾಲಯ, ಗಣಪತಿ ಸಚ್ಚಿದಾನಂದಾಶ್ರಮ, ಉತ್ತಮಹಳ್ಳಿ ಮಾರಮ್ಮ ಸೇರಿದಂತೆ ನಗರದ ವಿವಿಧ ಬಡಾವಣೆಗಳ ದೇವಾಲಯಗಳಲ್ಲಿ ವೀಶೇಷ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು.

ಆಂದೋಲನ ಡೆಸ್ಕ್

Recent Posts

ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ: ದಂಪತಿಗೆ ಗಂಭೀರ ಗಾಯ

ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿ…

1 hour ago

ಕನ್ನಡ ಶಾಲೆಗಳ ಉಳಿವಿಗೆ ಆಗ್ರಹಿಸಿ ವಾಟಾಳ್‌ ನಾಗರಾಜ್‌ ಪ್ರತಿಭಟನೆ

ಮಂಡ್ಯ: ರಾಜ್ಯದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ…

1 hour ago

ನಾಳೆ ಕೇರಳ, ತಮಿಳುನಾಡಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಕೇರಳ: ಕೇರಳ ಮತ್ತು ತಮಿಳುನಾಡು ಚುನಾವಣೆಗೆ ದಿನಾಂಕ ಘೋಷಣೆಯಾಗಲು ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಮಾರ್ಚ್.‌11ರಂದು ಪ್ರಧಾನಿ…

1 hour ago

ಬಂಡೀಪುರ: ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಹುಲಿಗಳ ದರ್ಶನ

ಗುಂಡ್ಲುಪೇಟೆ: ಸೋಮವಾರ ಬೆಳಗ್ಗೆ ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು ಏಕಕಾಲದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಕಿರುಬನ ಕೊಳಚಿ ಕೆರೆಯಲ್ಲಿ ಒಂದು…

2 hours ago

ಹನೂರು: ಬೆಟ್ಟಳ್ಳಿ ಮಾರಮ್ಮ ದೇವಸ್ಥಾನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಪಟ್ಟಣದಲ್ಲಿ ನಡೆಯುತ್ತಿರುವ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಪ್ರಯುಕ್ತ…

2 hours ago

ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ: ವಿಜೃಂಭಣೆಯಿಂದ ನಡೆದ ತಂಪುಜ್ಯೋತಿ ಹಾಗೂ ರಥೋತ್ಸವ

ಮಹಾದೇಶ್ ಎಂ.ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಎರಡನೇ ದಿನ…

2 hours ago