ಮೈಸೂರು

ಮೈಸೂರಲ್ಲಿ ಹಬ್ಬದ ಸಡಗರ : ವರಲಕ್ಷ್ಮಿ ಸಂಭ್ರಮ ಜೋರು

ಮೈಸೂರು : ಶ್ರಾವಣ ಮಾಸದ ಎರಡನೇ ಶುಕ್ರವಾರ ಶ್ರೀ ವರಮಹಾಲಕ್ಷಿ ಹಬ್ಬದ ಅಂಗವಾಗಿ ಜಿಲ್ಲಾದ್ಯಂತ ಶ್ರೀ ಲಕ್ಷಿ ಹಾಗೂ ಇತರೆ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಶುಕ್ರವಾರ ಬೆಳಿಗ್ಗೆಯಿಂದಲೇ ಸಾರ್ವಜನಿಕರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.

ಹಬ್ಬಕ್ಕೆ ಎರಡು ದಿನ ಮುಂಚಿತವಾಗಿಯೇ ಸಿದ್ಧತೆ ಮಾಡಿಕೊಂಡಿದ್ದ ನಗರ ಹಾಗೂ ಗ್ರಾಮೀಣ ಪ್ರದೇಶದ ಮಹಿಳೆಯರು ವರ ಮಹಾಲಕ್ಷ್ಮೀಗೆ ವಿಶೇಷ ಪೂಜೆ ಸಲ್ಲಿಸಿದರು. ಮನೆಯಲ್ಲಿ ಕಳಸ ಪ್ರತಿಷ್ಠಾಪನೆ ಮಾಡಿ, ಅದಕ್ಕೆ ಲಕ್ಷ್ಮೀಯ ಮುಖವಾಡ, ಸೀರೆ, ಬಳೆ ತೊಡಿಸಿ, ಬಗೆ ಬಗೆಯ ಹೂವುಗಳಿಂದ ಅಲಂಕಾರ ಮಾಡಿ, ವಿವಿಧ ತಿನಿಸುಗಳು, ಹಣ್ಣುಗಳನ್ನು ನೈವೇದ್ಯಕ್ಕಿಟ್ಟು ವಿಶೇಷವಾಗಿ ಪ್ರಾರ್ಥಿಸಿದರು.

ವರಮಹಾಲಕ್ಷ್ಮಿ ಹಬ್ಬವನ್ನು ನಗರದ ವಿವಿಧ ದೇವಸ್ಥಾನಗಳಲ್ಲಿ ವಿಶೇಷವಾಗಿ ಆಚರಿಸಲಾಯಿತು. ಮಹಿಳೆಯರು ಮನೆಯಲ್ಲಿ ವ್ರತ ಆಚರಣೆ ಮಾಡಿ ಬಳಿಕ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ದಿವಾನ್ಸ್ ರಸ್ತೆಯ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ವಿಶೇಷವಾಗಿ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು. ಅಲ್ಲದೆ ದಟ್ಟಗಳ್ಳಿಯ ನೇತಾಜಿ ಸರ್ಕಲ್‌ನಲ್ಲಿರುವ ಮಹಾಲಕ್ಷ್ಮಿ ದೇವಸ್ಥಾನದಲ್ಲೂ ವಿಶೇಷವಾಗಿ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು.

ಹಬ್ಬದ ಸಂಭ್ರಮ: ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ವರಮಹಾಲಕ್ಷಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಗ್ರಾಮಾಂತರ ಪ್ರದೇಶಗಳಲ್ಲೂ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಜನತೆ ಮುಂಜಾನೆಯೇ ತಮ್ಮ ಮನೆಗಳನ್ನು ಶೃಂಗರಿಸಿ ಸುಂದರ ಮಂಟಪ ಸಿದ್ಧಪಡಿಸಿ, ಲಕ್ಷಿ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಆಭರಣಗಳಿಂದ ಸಿಂಗರಿಸಿ, ವಿಶೇಷ ಪೂಜೆ ನಡೆಸಿದರು. ಹಬ್ಬಕ್ಕಾಗಿಯೇ ವಿಶೇಷ ಸಿಹಿ ತಿಂಡಿ-ತಿನಿಸುಗಳನ್ನಿಟ್ಟು ಪೂಜೆ ಸಲ್ಲಿಸುತ್ತಿದ್ದುದು ಕಂಡುಬಂತು.

ಪೂರಿ ಜಗನ್ನಾಥ ರಥಯಾತ್ರೆ ಮಾದರಿ
ನಗರದ ಸಿದ್ಧಾರ್ಥನಗರದ ಪ್ರವೀಣ್ ಹಾಗೂ ಮಾಲಿನಿ ದಂಪತಿ ನಿವಾಸದಲ್ಲಿ ವಿಶೇಷವಾಗಿ ವರಮಹಾಲಕ್ಷ್ಮಿ ಹಬ್ಬ ಆಚರಿಸಲಾಯಿತು. ಪೂರಿ ಜಗನ್ನಾಥ ರಥದ ಮಾದರಿ ನಿರ್ಮಿಸಿ, ಅದರೊಳಗೆ ಲಕ್ಷ್ಮಿಯನ್ನು ಪ್ರತಿಷ್ಠಾಪಿಸಿ, ವಿಶೇಷವಾಗಿ ವಿವಿಧ ಹೂವುಗಳಿಂದ ಅಲಂಕಾರ ಮಾಡಿ ಲಕ್ಷ್ಮಿ ಪೂಜೆ ಮಾಡಲಾಯಿತು. ಅಶ್ವಾರೂಢ ರಥ ನೋಡುಗರ ಗಮನ ಸೆಳೆಯುವಂತಿತ್ತು.

ತಿನಿಸುಗಳಿಗೆ ಬೇಡಿಕೆ
ಇನ್ನು ಹಬ್ಬದ ಹಿನ್ನೆಲೆಯಲ್ಲಿ ದೇವರ ನೈವೇದ್ಯಕ್ಕೆ ತಿನಿಸುಗಳನ್ನು ಇಡುವುದು ವಾಡಿಕೆ. ಅದರಂತೆ ನಗರದ ವಿವಿಧ ಬೇಕರಿಗಳು, ಚಕ್ಕುಲಿ, ನಿಪ್ಪಟ್ಟು, ಕರ್ಜಿಕಾಯಿ, ರವೆ ಉಂಡೆ ಸೇರಿದಂತೆ ವಿವಿಧ ತಿನಿಸುಗಳನು ಜನರು ಖರೀದಿಸಿದರು.

ಚಾಮುಂಡಿಬೆಟ್ಟದಲ್ಲಿ ಜನಜಾತ್ರೆ
ಇನ್ನು ಯಾವುದೇ ಹಬ್ಬಗಳು ಬಂತೆಂದರೆ ಜನರು ಚಾಮುಂಡಿಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸುವುದು ವಾಡಿಕೆ ಅದರಂತೆ ಶುಕ್ರವಾರ ಬೆಳಿಗ್ಗೆಯಿಮದಲೇ ಜಾಮುಂಡಿಬೆಟ್ಟದಲ್ಲಿ ಜನ ಜಾತ್ರೆಯೇ ನೆರೆದಿತ್ತು. ಉಳಿದಂತೆ ನಗರದ ಅರಮನೆ ಆವರಣ, ಕೆಜಿ ಕೊಪ್ಪಲಿನ ಚಾಮುಂಡೇಶ್ವರಿ ದೇವಾಲಯ, ಶ್ರೀರಾಂಪುರದ ಶಿವ ದೇವಾಲಯ, ಕಾಮಕಾಮೇಶ್ವರಿ ದೇವಾಲಯ, ಗಣಪತಿ ಸಚ್ಚಿದಾನಂದಾಶ್ರಮ, ಉತ್ತಮಹಳ್ಳಿ ಮಾರಮ್ಮ ಸೇರಿದಂತೆ ನಗರದ ವಿವಿಧ ಬಡಾವಣೆಗಳ ದೇವಾಲಯಗಳಲ್ಲಿ ವೀಶೇಷ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು.

ಆಂದೋಲನ ಡೆಸ್ಕ್

Recent Posts

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

1 hour ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

2 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

4 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

10 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

16 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

16 hours ago