dinesh gundurao
ಬೆಂಗಳೂರು: ಮೈಸೂರಿನಲ್ಲಿ ಭ್ರೂಣಲಿಂಗ ಪತ್ತೆ ಮಾಡುತ್ತಿದ್ದ ಜಾಲ ಬಯಲಿಗೆ ಬಂದಿದ್ದು, ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಭ್ರೂಣ ಹತ್ಯೆ ಮಾಡುತ್ತಿದ್ದ ಹಂತಕರನ್ನು ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ. ಗರ್ಭಿಣಿ ಮಹಿಳೆಯ ಸಹಾಯ ಪಡೆದು ಲಿಂಗ ಭ್ರೂಣ ಪತ್ತೆ ಕಾರ್ಯಚಟುವಟಿಕೆಗಳನ್ನು ನಡೆಸುತ್ತಿರುವುದನ್ನು ಪತ್ತೆ ಮಾಡಲಾಗಿದೆ. ಕಾರ್ಯಾಚರಣೆ ವೇಳೆ ನಾಲ್ಕು ಗರ್ಭಿಣಿ ಸ್ತ್ರೀಯರು ಲಿಂಗ ಭ್ರೂಣ ಪತ್ತೆ ಮಾಡಿಸಿಕೊಳ್ಳಲು ಹಾಜರಿರುವುದು ಹಾಗೂ ಸ್ಕ್ಯಾನಿಂಗ್ ಬಳಕೆ ಮಾಡುವ ಉಪಕರಣವು ಕಂಡು ಬಂದಿದೆ.
ಇದನ್ನು ಓದಿ: ಮೈಸೂರು| ಭ್ರೂಣಲಿಂಗ ಪತ್ತೆ ಮಾಡುತ್ತಿದ್ದ ಹಂತಕರ ಗ್ಯಾಂಗ್ ಅರೆಸ್ಟ್
ಹೆರಿಗೆ ಪೂರ್ವ ಭ್ರೂಣ ಲಿಂಗಪತ್ತೆ ಕಾಯ್ದೆ ಅಡಿಯಲ್ಲಿ ಪ್ರಕರಣವನ್ನು ದಾಖಲು ಮಾಡಲಾಗಿದ್ದು, ಹೆಣ್ಣು ಭ್ರೂಣ ಹತ್ಯೆ ವಿರುದ್ಧ ಆರೋಗ್ಯ ಇಲಾಖೆ ನಿರಂತರ ಹೋರಾಟ ನಡೆಸುತ್ತಿದೆ. ಹೆಣ್ಣು ಭ್ರೂಣ ಹತ್ಯೆ ಒಂದು ಸಾಮಾಜಿಕ ಪಿಡುಗು. ಸಮಾಜ ಈ ಬಗ್ಗೆ ಜಾಗೃತರಾಗಿ ಭ್ರೂಣ ಹತ್ಯೆಯ ವಿರುದ್ಧ ಸಮರ ಸಾರಲು ಮುಂದಾಗಬೇಕು. ಆರೋಗ್ಯ ಇಲಾಖೆ ಸದಾ ಭ್ರೂಣ ಹಂತಕದ ವಿರುದ್ಧ ಸಹಕರಿಸುವವರ ಜೊತೆಯಿದೆ. ಯಾರು ಎಷ್ಟೇ ದೊಡ್ಡವರಿದ್ದರೂ, ಹೆಣ್ಣು ಭ್ರೂಣ ಹಂತಕರನ್ನು ಮಟ್ಟ ಹಾಕಲು ನಮ್ಮ ಸರ್ಕಾರ ಕಠುಬದ್ಧವಾಗಿದೆ ಎಂದು ಹೇಳಿದರು.
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…