ಮೈಸೂರು: ಕೆಲವೇ ದಿನಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ತಾಲ್ಲೂಕು ವ್ಯಾಪ್ತಿಯ ಶಾಲೆಗಳ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ಉನ್ನತೀಕರಿಸುವ ಅಭಿಯಾನದ ಪ್ರಯುಕ್ತ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ್ ವಿದ್ಯಾರ್ಥಿಗಳ ನಿವಾಸಕ್ಕೆ ಭೇಟಿಯಾಗಿ ಸಲಹೆ ನೀಡಿದ್ದಾರೆ.
ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ್ ಅವರು ಇಂದು(ಫೆಬ್ರವರಿ.5) ಮೈಸೂರು ತಾಲ್ಲೂಕಿನ ಹಿನಕಲ್ ಸರ್ಕಾರಿ ಪ್ರೌಢಶಾಲೆಯ ಎಸ್ಎಸೆಲ್ಸಿ ವಿದ್ಯಾರ್ಥಿಗಳ ನಿವಾಸಗಳಿಗೆ ಭೇಟಿ ನೀಡಿ ಅವರ ಕಲಿಯುವಿಕೆಯ ಕುರಿತು ಪರಿಶೀಲಿಸಿದ್ದಾರೆ. ಅಲ್ಲದೇ ತಮ್ಮ ಕಲಿಕೆಯಲ್ಲಿ ತೊಡಕುಗಳಿದ್ದಲ್ಲಿ ಶಾಲಾ ಮುಖ್ಯ ಶಿಕ್ಷಕರೊಂದಿಗೆ ಹಾಗೂ ಸಹ ಶಿಕ್ಷಕರೊಂದಿಗೆ ಚರ್ಚಿಸಿ ಅದನ್ನು ಬಗೆಹರಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸೂಚಿಸಿದರು.
ಇನ್ನೂ ಪರೀಕ್ಷಾ ಸಮಯದಲ್ಲಿ ಅಧ್ಯಯನ, ಆರೋಗ್ಯ ಹಾಗೂ ಸೇವಿಸುವ ಆಹಾರದ ಕಡೆ ಹೆಚ್ಚು ಗಮನಹರಿಸಿ ಎಸ್ಎಸ್ಎಲ್ಸಿ ಪರೀಕ್ಷೆಗೆ ತಯಾರಿ ನಡೆಸುವಂತೆ ಕಿವಿಮಾತು ಹೇಳಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…